AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ವೈ ವಿಜಯೇಂದ್ರಗೆ ಹಣ ತಲುಪಿಸಬೇಕು ಎಂದು ಶ್ರೀರಾಮುಲು ಆಪ್ತ ರಾಜಣ್ಣ ಡೀಲ್; 3 ಸ್ಫೋಟಕ ಆಡಿಯೋ ಆಧರಿಸಿ ತನಿಖೆ

ರಾಮುಲು ಪಿಎ ರಾಜಣ್ಣ3 ಕೋಟಿ ಹಣಕ್ಕೆ ಡೀಲ್​ ಕುದುರಿಸಿದ್ದರು. ಈ ಬಗ್ಗೆ, 3 ಸ್ಫೋಟಕ ಆಡಿಯೋ ಆಧರಿಸಿ ಸಿಸಿಬಿಯಿಂದ ತನಿಖೆ ನಡೆಸಲಾಗುತ್ತಿದೆ. ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಶ್ರೀರಾಮುಲು ಪಿಎ ರಾಜಣ್ಣ ಮಾತನಾಡಿರುವ 3 ಆಡಿಯೋ ಬಿಡುಗಡೆಯಾಗಿದೆ.

ಬಿ ವೈ ವಿಜಯೇಂದ್ರಗೆ ಹಣ ತಲುಪಿಸಬೇಕು ಎಂದು ಶ್ರೀರಾಮುಲು ಆಪ್ತ ರಾಜಣ್ಣ ಡೀಲ್; 3 ಸ್ಫೋಟಕ ಆಡಿಯೋ ಆಧರಿಸಿ ತನಿಖೆ
ವಿಜಯೇಂದ್ರ
TV9 Web
| Updated By: ganapathi bhat|

Updated on:Jul 02, 2021 | 4:13 PM

Share

ಬೆಂಗಳೂರು: ಸಚಿವ ಶ್ರೀರಾಮುಲು ಆಪ್ತ ಕಾರ್ಯದರ್ಶಿ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಹೊಸದೊಂದು ಮಾಹಿತಿ ಬಹಿರಂಗವಾಗಿದೆ. ಬಿ.ವೈ. ವಿಜಯೇಂದ್ರಗೆ ಹಣ ತಲುಪಿಸಬೇಕೆಂದು ಹೇಳಿ ಡೀಲ್ ಮಾಡಿಕೊಂಡಿರುವ ಬಗ್ಗೆ ತಿಳಿದುಬಂದಿದೆ. ಗುತ್ತಿಗೆದಾರನ ಜತೆ ಸಚಿವ ಶ್ರೀರಾಮುಲು ಆಪ್ತ ಕಾರ್ಯದರ್ಶಿ ರಾಜಣ್ಣ ಡೀಲ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ರಾಮುಲು ಪಿಎ ರಾಜಣ್ಣ3 ಕೋಟಿ ಹಣಕ್ಕೆ ಡೀಲ್​ ಕುದುರಿಸಿದ್ದರು. ಈ ಬಗ್ಗೆ, 3 ಸ್ಫೋಟಕ ಆಡಿಯೋ ಆಧರಿಸಿ ಸಿಸಿಬಿಯಿಂದ ತನಿಖೆ ನಡೆಸಲಾಗುತ್ತಿದೆ. ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಶ್ರೀರಾಮುಲು ಪಿಎ ರಾಜಣ್ಣ ಮಾತನಾಡಿರುವ 3 ಆಡಿಯೋ ಬಿಡುಗಡೆಯಾಗಿದೆ.

ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ರಾಜಣ್ಣ ಡೀಲ್ ಮಾಡಿಕೊಂಡಿದ್ದಾರೆ. ಸಚಿವ ಬಿ. ಶ್ರೀರಾಮುಲು ಆಪ್ತ ರಾಜಣ್ಣರಿಂದ ಡೀಲ್ ಮಾಡಲಾಗಿದೆ. ಯೋಜನೆಯೊಂದರ ಗುತ್ತಿಗೆದಾರನ ಜತೆ ರಾಜಣ್ಣ ಮಾತುಕತೆ ನಡೆಸಿದ್ದಾರೆ. ಈ ಬಗೆಗಿನ ಮೂರು ಆಡಿಯೋಗಳು ಬಿಡುಗಡೆಯಾಗಿದೆ.

ಮೊದಲನೆಯ ಆಡಿಯೋದಲ್ಲಿ 75 ಲಕ್ಷ ರೂಪಾಯಿಗೆ ಬೇಡಿಕೆ ಇಡಲಾಗಿದೆ. 2ನೇ ಆಡಿಯೋದಲ್ಲಿ 1 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿದೆ. 3ನೇ ಆಡಿಯೋದಲ್ಲಿ 3 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವ ಬಗ್ಗೆ ತಿಳಿದುಬಂದಿದೆ. 3 ಆಡಿಯೋಗೆ ಸಂಬಂಧಿಸಿ ರಾಜಣ್ಣ ವಾಯ್ಸ್ ಸ್ಯಾಂಪಲ್ಸ್ ಪರೀಕ್ಷೆ ನಡೆಸಲಾಗುತ್ತಿದೆ. ರಾಜಣ್ಣ ಮೊಬೈಲ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಯಡಿಯೂರಪ್ಪ, ಶ್ರೀರಾಮುಲು ಪ್ರತಿಕ್ರಿಯೆ ಸಚಿವ ಶ್ರೀರಾಮುಲು ಆಪ್ತನ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಶ್ರೀರಾಮುಲು ಆಪ್ತನ ಬಂಧನ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿಲ್ಲ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಣೆ ತೋರಿದ್ದಾರೆ. ಸುದ್ದಿಗೋಷ್ಠಿ ಮುಗಿದ ಕೂಡಲೇ ಯಡಿಯೂರಪ್ಪ ತೆರಳಿದ್ದಾರೆ. ಸಚಿವ ಶ್ರೀರಾಮುಲುರನ್ನು ಸನ್ನೆ ಮಾಡಿ ಕರೆದೊಯ್ದಿದ್ದಾರೆ.

ನಾನು ಈ ಬಗ್ಗೆ ಸಿಎಂ ಜತೆ ಮಾತನಾಡಿ, ವಿವರಣೆ ನೀಡಿದ್ದೇನೆ ಎಂದು ವಿಧಾನಸೌಧದಲ್ಲಿ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಸಚಿವರ ಬಳಿ ಹಲವಾರು ಜನ ಬರುತ್ತಿರುತ್ತಾರೆ, ಹೋಗುತ್ತಾರೆ. ಯಾರದ್ದೋ‌ ಹೆಸರು ಹೇಳಿದರೆ ಯಾರಿಗೂ ಗೊತ್ತಾಗುವುದಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ, ಹೀಗಾಗಿ ಮಾತನಾಡಲ್ಲ ಎಂದು ತಿಳಿಸಿದ್ದಾರೆ. ರಾಜಣ್ಣ ನನ್ನ ಪಿಎ ಅಲ್ಲ, ನನಗೆ ಗೊತ್ತಿರುವ ವ್ಯಕ್ತಿ ಮಾತ್ರ ಎಂದು ವಿಧಾನಸೌಧದಲ್ಲಿ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಸಭೆ; ವಿಚಾರಣೆಯ ಬಳಿಕ ಶ್ರೀರಾಮುಲು ಆಪ್ತ ರಾಜಣ್ಣ ವಾಪಸ್

ವಿಜಯೇಂದ್ರ ಟ್ವೀಟ್, ಸಿಸಿಬಿ ಪೊಲೀಸರಿಗೆ ಒತ್ತಡ ಹೆಚ್ಚಳ, ರಾಜಣ್ಣ ನನ್ನ ಪಿಎ ಅಲ್ಲ ನನಗೆ ಗೊತ್ತಿರುವ ಹುಡುಗ ಅಷ್ಟೇ ಎಂದ ಸಚಿವ ರಾಮುಲು

Published On - 4:03 pm, Fri, 2 July 21

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ