AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹಣ ಪಡೆದು ಅಮೆರಿಕಾದ ನಕಲಿ ನೋಟ್ ನೀಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್.. ಬಂಡಲ್‌ ನಕಲಿ ಡಾಲರ್ಸ್ ವಶ

ಅರೆಸ್ಟ್ ಆದವರಲ್ಲಿ ಒಬ್ಬನ ಬಳಿ ಯಾವುದೇ ಪಾಸ್‌ಪೋರ್ಟ್ ಕೂಡ ಇಲ್ಲ. ಮತ್ತೊಬ್ಬ ಮೆಡಿಕಲ್ ಅಟೆಂಡರ್ ಹೆಸರಿನಲ್ಲಿ ಬಂದಿದ್ದಾನೆ. ವೀಸಾ ಅವಧಿ ಮುಗಿದ್ರೂ ಅಕ್ರಮವಾಗಿ ಈ ಆರೋಪಿಗಳು ನೆಲೆಸಿದ್ದಾರೆ. ಬಂಧಿತರಿಂದ 100 ಡಾಲರ್ ಮುಖಬೆಲೆಯ 9 ಬಂಡಲ್‌ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.

ಭಾರತದ ಹಣ ಪಡೆದು ಅಮೆರಿಕಾದ ನಕಲಿ ನೋಟ್ ನೀಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್.. ಬಂಡಲ್‌ ನಕಲಿ ಡಾಲರ್ಸ್ ವಶ
ಬಂಧಿತರಿಂದ ವಶಕ್ಕೆ ಪಡೆದ ನಕಲಿ ಡಾಲರ್ಸ್
TV9 Web
| Edited By: |

Updated on: Jun 24, 2021 | 9:23 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ವಿದೇಶಿ ನಕಲಿ ನೋಟ್ ದಂಧೆ ನಡೆಸುತ್ತಿದ್ದ ಗ್ಯಾಂಗ್ ಎಂಟ್ರಿ ಕೊಟ್ಟಿದ್ದು ಬೆಂಗಳೂರು ಸಿಸಿಬಿ ಪೊಲೀಸರು ಗ್ಯಾಂಗ್ನನ್ನು ಲಾಕ್ ಮಾಡಿದ್ದಾರೆ. ವಿದೇಶಿ ಪ್ರಜೆಗಳನ್ನು ಸೆರೆ ಹಿಡಿದಿದ್ದಾರೆ. ಕ್ಯಾಮರೂನ್‌ನ ಇಬ್ಬರನ್ನು ಬಂಧಿಸಿದ್ದಾರೆ. ಲಕ್ಷ ಲಕ್ಷ ಹಣ ನೀಡಿದ್ರೆ ಕೋಟಿ ಕೋಟಿ ಅಮೆರಿಕನ್ ಡಾಲರ್ಸ್ ಕೊಡ್ತಾರೆ. ಪ್ರತಿಷ್ಠಿತ ಹೋಟೆಲ್ಗಳಲ್ಲಿ ಹೈಫೈ ಜೀವನ ನಡೆಸುತ್ತಿದ್ದ ಗ್ಯಾಂಗ್ ಈಗ ಲಾಕ್ ಆಗಿದೆ.

ಅರೆಸ್ಟ್ ಆದವರಲ್ಲಿ ಒಬ್ಬನ ಬಳಿ ಯಾವುದೇ ಪಾಸ್‌ಪೋರ್ಟ್ ಕೂಡ ಇಲ್ಲ. ಮತ್ತೊಬ್ಬ ಮೆಡಿಕಲ್ ಅಟೆಂಡರ್ ಹೆಸರಿನಲ್ಲಿ ಬಂದಿದ್ದಾನೆ. ವೀಸಾ ಅವಧಿ ಮುಗಿದ್ರೂ ಅಕ್ರಮವಾಗಿ ಈ ಆರೋಪಿಗಳು ನೆಲೆಸಿದ್ದಾರೆ. ಬಂಧಿತರಿಂದ 100 ಡಾಲರ್ ಮುಖಬೆಲೆಯ 9 ಬಂಡಲ್‌ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ₹10 ಲಕ್ಷ ಕೊಟ್ಟರೆ ಡಾಲರ್ ರೂಪದಲ್ಲಿ 1 ಕೋಟಿ ರೂ ಕೊಡುವುದಾಗಿ ಹೇಳಿ ವಂಚಿಸುತ್ತಿದ್ದರು. ಅದರಂತೆ ಹಣ ನೀಡುವವರಿಗೆ ನಕಲಿ ನೋಟುಗಳನ್ನು ಕೊಟ್ಟು ಆರೋಪಿಗಳು ವಂಚಿಸುತ್ತಿದ್ದರು. ಸುಬ್ರಹ್ಮಣ್ಯನಗರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ಇನ್ನು ಮತ್ತೊಂದೆಡೆ ಬೆಂಗಳೂರಲ್ಲಿ HBR ಲೇಔಟ್‌ನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದೆ. ಕಾಲಿಗೆ ಗುಂಡು ಹಾರಿಸಿ ಆರೋಪಿ ಮೊಹಮ್ಮದ್ ಸಲೀಂನನ್ನು ಅರೆಸ್ಟ್ ಮಾಡಲಾಗಿದೆ. ಗೋವಿಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಅಲಿ ಇಮ್ರಾನ್‌ ಫೈರಿಂಗ್ ನಡೆಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಜೂ.22ಕ್ಕೆ ರಶೀದ್ ಮಲಬಾರಿ ಗ್ಯಾಂಗ್‌ನ ಕರೀಂ ಅಲಿ ಹತ್ಯೆ ಪ್ರಕರಣ ಸಂಬಂಧ ತನಿಖೆಯ ವೇಳೆ ಆರೋಪಿ ಬಗ್ಗೆ ಸುಳಿವು ಸಿಕ್ಕಿತ್ತು. ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಕಾನ್ಸ್‌ಟೇಬಲ್ ಹಂಝ ಮೇಲೆ ಹಲ್ಲೆ ಮಾಡಿದ್ದ. ಹೀಗಾಗಿ ಶರಣಾಗುವಂತೆ ತಿಳಿಸಿದರೂ ಕೇಳದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಗೋವಿಂದಪುರ ಠಾಣೆ ಎಸ್‌ಐ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಯಾವುದೇ ಗುರುತಿನ ಚೀಟಿ, ಸ್ವಂತ ಮೊಬೈಲ್​ ನಂಬರ್ ಇಲ್ಲದವರು ಕೊರೊನಾ ಲಸಿಕೆ ಪಡೆಯಲು ಹೀಗೆ ಮಾಡಿ: ಆರೋಗ್ಯ ಸಚಿವಾಲಯ ಸ್ಪಷ್ಟನೆ

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?