AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳು ಸೆರೆ

ಬಂಧಿತ ಆರೋಪಿಗಳಿಗೆ ಉಗ್ರ ಸಂಘಟನೆಯ ಜೊತೆ ನಂಟಿದೆ ಎಂಬ ಮಾಹಿತಿ ತಿಳಿದುಬಂದಿದ್ದು, 10 ರುಪಾಯಿ ಕಾಲ್ 10 ಪೈಸೆಗೆ ಕನ್ವರ್ಟ್ ಮಾಡುತ್ತಿದ್ದರು. ಆರೋಪಿಗಳು ದೇಶದ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಟೆಕ್ನಾಲಜಿ ದುರುಪಯೋಗ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಸಿಸಿಬಿ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳು ಸೆರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on: Jun 09, 2021 | 5:15 PM

Share

ಬೆಂಗಳೂರು: ಸಿಮ್ ಕಿಟ್ ಕೇಸ್​ನಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಐಎಸ್​ಡಿ ಕಾಲ್ ಕನೆಕ್ಟ್ ಮಾಡುತ್ತಿದ್ದ ಶಂಕಿತ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ಸೇನೆ ನೀಡಿದ ಮಾಹಿತಿ ಮೇರೆಗೆ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಿಗೆ ಉಗ್ರ ಸಂಘಟನೆಯ ಜೊತೆ ನಂಟಿದೆ ಎಂಬ ಮಾಹಿತಿ ತಿಳಿದುಬಂದಿದ್ದು, 10 ರುಪಾಯಿ ಕಾಲ್ 10 ಪೈಸೆಗೆ ಕನ್ವರ್ಟ್ ಮಾಡುತ್ತಿದ್ದರು. ಆರೋಪಿಗಳು ದೇಶದ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಟೆಕ್ನಾಲಜಿ ದುರುಪಯೋಗ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಗಾಂಜಾ ಸಾಗಿಸುತ್ತಿದ್ದ ಕಂಟೇನರ್ ವಶಕ್ಕೆ ಹೈದರಾಬಾದ್: ವಿಶಾಖಪಟ್ಟಣಂನಿಂದ ಉತ್ತರಪ್ರದೇಶಕ್ಕೆ ಗಾಂಜಾ ಸಾಗಿಸುತ್ತಿದ್ದ ಕಂಟೇನರ್​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಟೈನರ್​ನಲ್ಲಿ ಡ್ರೈವರ್ ಹಿಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿದ್ದ ವಿಶೇಷ ಸೆಲ್ಫ್ ಮೂಲಕ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ವಿಶಾಖಪಟ್ಟಣಂ ಪೊಲೀಸರು ಚಾಲಕ, ಕ್ಲೀನರ್​ನನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಕಂಟೇನರ್ ಮಾಲೀಕ ಹಾಗೂ ಗಾಂಜಾ ಸ್ಮಗ್ಲರ್​ಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ವಿಶಾಖಪಟ್ಟಣಂ ಸೌತ್ ಎಸಿಪಿ ವೆಂಕಟರಾವ್ ಮಾಹಿತಿ ನೀಡಿದ್ದಾರೆ.

ಟಿಪ್ಪರ್ ಪಲ್ಟಿ, ಚಾಲಕನಿಗೆ ಗಾಯ ತುಮಕೂರು: ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾದ ಪರಿಣಾಮ ಚಾಲಕನಿಗೆ ಗಾಯವಾಗಿದೆ. ಈ ಘಟನೆ ಜಿಲ್ಲೆಯ ಗುಬ್ಬಿ ತಾಲೂಕು ವ್ಯಾಪ್ತಿ ಸಂಭವಿಸಿದೆ. ಅಪಘಾತದಿಂದ 1 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಟ್ರಾಫಿಕ್ ನಿಯಂತ್ರಿಸಲು ಗುಬ್ಬಿ ಪೊಲೀಸರು ಹರಸಾಹಸಪಟ್ಟರು.

ಇದನ್ನೂ ಓದಿ

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​

ಕಾಂಗ್ರೆಸ್‌ ಲಸಿಕೆ ಪ್ರಸ್ತಾವನೆ ತಿರಸ್ಕರಿಸಿದ ರಾಜ್ಯ ಸರ್ಕಾರ; ಸಿದ್ದರಾಮಯ್ಯಗೆ ಪತ್ರ ಬರೆದು ಸೂಚನೆ

(CCB police have arrested two men who were abusing the technology)

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ