AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ ಖೈದಾ ಬೆದರಿಕೆ ಪತ್ರದಲ್ಲಿ ಸ್ಫೋಟಕ ಮಾಹಿತಿ ಬಹಿರಂಗ; ಹಿಂದೂ ಸಂಘಟನೆಗಳ ಮುಖಂಡರ ಹತ್ಯೆಗೆ ಪ್ಲ್ಯಾನ್

ಶಂಕಿತ ಉಗ್ರ ಅಖ್ತರ್ ಹುಸೇನ್​ನ ವಿಚಾರಣೆ ಮಾಡುತ್ತಿರುವ ಸಿಸಿಬಿ ಅಧಿಕಾರಿಗಳಿಗೆ, ಅಲ್ ಖೈದಾ ಸಂಘಟನೆ ಬಗ್ಗೆ ಅನುಮಾನ ಮೂಡಿದೆ.

ಅಲ್ ಖೈದಾ ಬೆದರಿಕೆ ಪತ್ರದಲ್ಲಿ ಸ್ಫೋಟಕ ಮಾಹಿತಿ ಬಹಿರಂಗ; ಹಿಂದೂ ಸಂಘಟನೆಗಳ ಮುಖಂಡರ ಹತ್ಯೆಗೆ ಪ್ಲ್ಯಾನ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 26, 2022 | 11:42 AM

Share

ಬೆಂಗಳೂರು: ಅಲ್ ಖೈದಾ (Al-Qaeda) ಉಗ್ರ ಸಂಘಟನೆ ಬರೆದಿದ್ದ ಪತ್ರದಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಹಿಂದೂ ಸಂಘಟನೆಗಳ ಮುಖಂಡರ ಹತ್ಯೆಗೆ (Murder) ಸಂಚು ರೂಪಿಸಿದ್ದರೆಂಬ ಮಾಹಿತಿ ತಿಳಿದುಬಂದಿದೆ. ಜೂನ್​ನಲ್ಲಿ ಉಗ್ರ ಸಂಘಟನೆ ಪತ್ರ ಬರೆದಿತ್ತು. ಭಾರತದಲ್ಲಿ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಸಂಚು ರೂಪಿಸಿದ್ದೇವೆ, ಬಾಂಬ್ ದಾಳಿ ಮಾಡಲು ನಾವು ಸಿದ್ಧರಿದ್ದೇವೆ ಎಂದು ಪತ್ರದಲ್ಲಿ ಬೆದರಿಕೆ ಸಂದೇಶ ನೀಡಿದ್ದರು. ಈ ಸಂದೇಶದಿಂದ ಭಾರತದಲ್ಲಿ ಹೈ ಅಲರ್ಟ್ ಮಾಡಲಾಗಿತ್ತು. ಅಲ್ಲದೆ ಅಲ್ ಖೈದಾ ಸಂಪರ್ಕದಲ್ಲಿದ್ದವರಿಗೆ ಗಾಳ ಬೀಸಲಾಗಿತ್ತು.

ಇನ್ನು ನಿನ್ನೆ ಬೆಂಗಳೂರಿನಲ್ಲಿ ಶಂಕಿತ ಉಗ್ರ ಪತ್ತೆಯಾಗಿದ್ದಾನೆ. ಶಂಕಿತ ಉಗ್ರ ಅಖ್ತರ್ ಹುಸೇನ್​ನ ವಿಚಾರಣೆ ಮಾಡುತ್ತಿರುವ ಸಿಸಿಬಿ ಅಧಿಕಾರಿಗಳಿಗೆ, ಅಲ್ ಖೈದಾ ಸಂಘಟನೆ ಬಗ್ಗೆ ಅನುಮಾನ ಮೂಡಿದೆ. ಅಲ್ ಖೈದಾದಿಂದ ಪತ್ರ ವೈರಲ್ ಆದ ಬಳಿಕ ಸಂಘಟನೆಯ ಜೊತೆ ಸಂಪರ್ಕ ಹೊಂದಿರುವ ಶಂಕಿತರನ್ನು ಬಂಧಿಸಲಾಗುತ್ತಿದೆ.

ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ತೀವ್ರ ತನಿಖೆ ನಡೆಯುತ್ತಿದೆ. ಆದರೆ ಇದುವರೆಗೂ ಬಂಧಿತನಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ
Image
India Covid Updates: ಭಾರತದಲ್ಲಿ 14,830 ಮಂದಿ ಕೊರೊನಾ ಸೋಂಕಿತರು ಪತ್ತೆ, 36 ಸಾವು
Image
Gujarat Hooch Tragedy: ಗುಜರಾತ್​​ನಲ್ಲಿ ಕಳ್ಳಭಟ್ಟಿ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ; 45 ಜನ ಆಸ್ಪತ್ರೆಗೆ ದಾಖಲು
Image
5G Auctions: ಇಂದಿನಿಂದ 5G ಸ್ಪೆಕ್ಟ್ರಮ್ ಹರಾಜು: ಅಖಾಡದಲ್ಲಿದೆ 4 ಕಂಪನಿಗಳು, ಇಲ್ಲಿದೆ ಎಲ್ಲ ಮಾಹಿತಿ
Image
Mangaluru: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರ ಅಡ್ಡಿ

ಇದನ್ನೂ ಓದಿ: Horoscope Today- ದಿನ ಭವಿಷ್ಯ; ಈ ರಾಶಿಯವರ ಮೇಲೆ ಶನಿಯು ಬಲವಾದ ಪ್ರಭಾವ ಬೀರಲಿದ್ದಾನೆ

ಶಂಕಿತ ಉಗ್ರ ಅಖ್ತರ್ ಹುಸೇನ್ ಮೂಲತ: ಅಸ್ಸಾಂ ಮೂಲದವನು. ಈತ 2015 ರಲ್ಲಿ ನಗರಕ್ಕೆ ಬಂದಿದ್ದ. 8 ತಿಂಗಳಲ್ಲಿ ನಾಲ್ಕು ಕಡೆ ನಗರದಲ್ಲಿ ಕೆಲಸ ಮಾಡಿದ್ದ. ನಗರಕ್ಕೆ ಬಂದಾಗ ಖಾಸಗಿ ಕಂಪನಿಗೆ ಕೆಲಸಕ್ಕಾಗಿ ಹೋಗಿದ್ದ. ಆದರೆ ಆಗ 17 ವರ್ಷ ಆಗಿದ್ದರಿಂದ ಅಲ್ಲಿ ಕೆಲಸ ಸಿಕ್ಕಿರಲಿಲ್ಲ. ನಂತ್ರ ಕೆಮಿಕಲ್ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ. ಕೆಮಿಕಲ್ ಕಾರ್ಖಾನೆಯಲ್ಲಿ ಕೆಲಸಕ್ಕೆ ಹೋಗಿದ್ದಾಗ ಆರೋಗ್ಯ ಏರುಪೇರಾಗಿದೆ. ನಂತರ ಆ ಕೆಲಸ ಬಿಟ್ಟು ಗಾರ್ಮೆಂಟ್ಸ್ ಒಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ.

ಬೆಂಗಳೂರಿಗೆ ಬಂದು 8 ತಿಂಗಳ ಕೆಲಸ ಬಿಟ್ಟು ಅಸ್ಸಾಂಗೆ ವಾಪಸ್ ಆಗಿದ್ದ. ಪಿಯುಸಿ ಮಾಡಲು ವಾಪಸ್ ಹೋಗಿ ನಂತರ 2017 ರಲ್ಲಿ ಮತ್ತೆ ನಗರಕ್ಕೆ ಬಂದಿದ್ದ. 2017 ರಿಂದ ನಿರಂತರವಾಗಿ ಉಗ್ರ ಸಂಘಟನೆ ಸೇರುವ ಕೆಲಸದಲ್ಲಿ ಬ್ಯುಸಿಯಾಗಿದ್ದ. ಉಗ್ರರ ಭಾಷಣ ಕೇಳುವುದು, ಉಗ್ರ ಸಂಘಟನೆ ಹೇಗೆ ಕೆಲಸ ಮಾಡುತ್ತದೆ ಅನ್ನೋದರ ಮಾಹಿತಿ ಸಂಗ್ರಹ ಮಾಡುತ್ತಿದ್ದ.

ಇದನ್ನೂ ಓದಿ: Petrol Price Today: ಜುಲೈ 26ರಂದು ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೇಗಿದೆ?

ನಿನ್ನೆ ಸೇಲಂನಲ್ಲಿ ಸೆರೆ ಸಿಕ್ಕ ಜುಬಾ ಕೂಡಾ ಅಖ್ತರ್ ಮಾದರಿಯಲ್ಲೇ ಅಲ್ ಖೈದಾಗೆ ನೇಮಕಾತಿ ಅಗಿದ್ದ. ಫೇಸ್ ಬುಕ್, ಟ್ವಿಟ್ಟರ್, ಟೆಲಿಗ್ರಾಮ್ ಹಾಗು ವಾಟ್ಸಪ್, ಮತ್ತು ಸ್ನಾಪ್ ಚಾಟ್ ಮೂಲಕ ಸಂಪರ್ಕ ಹೊಂದಿದ್ದ. ಜುಬಾ ತಾನು ಅಲ್ ಖೈದಾ ಸೇರಲು ಸಿದ್ಧನಿದ್ದೇನೆ ಎಂದಿದ್ದಾನೆ.

ಬಂಧನ ಅರೋಪಿಗಳ ಬಳಿ ತಿರುಚಿದ ಖುರಾನ್​ನ ಕೆಲ ಪೇಜ್​ಗಳು ಪತ್ತೆಯಾಗಿವೆ. ತಿರುಚಿದ ಖುರಾನ್ ದಾಖಲೆಯಲ್ಲಿ ಜಿಹಾದ್, ಕೊಲ್ಲುವುದು, ಮುಸ್ಲಿಂ ಲಾ ಎಲ್ಲವನ್ನು ಸೇರಿಸಲಾಗಿದೆ.

Published On - 11:21 am, Tue, 26 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್