AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಆದಿತ್ಯ ಆಳ್ವಾ: ಸಿಸಿಬಿ ತಂಡದಿಂದ ನಡೀತು ರಾತ್ರೋರಾತ್ರಿ ಕಾರ್ಯಾಚರಣೆ

ಭಾನುವಾರ(ಜ.10) ಸಂಜೆ ಆದಿತ್ಯನ ಬಗ್ಗೆ ಸಿಸಿಬಿಗೆ ಮಾಹಿತಿ ಸಿಕ್ಕಿತ್ತು. ಚೆನ್ನೈನ ಓಲ್ಡ್‌ ಮಹಾಬಲೀಪುರಂ (OMR) ರಸ್ತೆಯ ಕಣತ್ತೂರು ಬಳಿ ಆದಿತ್ಯ ತಲೆಮರಿಸಿಕೊಂಡಿದ್ದಾನೆ ಎಂಬ ಬಗ್ಗೆ ಖಚಿತ ಮಾಹಿತಿ ಸಿಕ್ಕ ಬಳಿಕ ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಲ್ಲಿ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾದ್ರು.

ಆಪರೇಷನ್ ಆದಿತ್ಯ ಆಳ್ವಾ: ಸಿಸಿಬಿ ತಂಡದಿಂದ ನಡೀತು ರಾತ್ರೋರಾತ್ರಿ ಕಾರ್ಯಾಚರಣೆ
ಕೇಂದ್ರ ಅಪರಾಧ ವಿಭಾಗ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jan 12, 2021 | 10:25 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಸಂಬಂಧ ನಾಪತ್ತೆಯಾಗಿದ್ದ ಎ6 ಆದಿತ್ಯ ಆಳ್ವಾ 130 ದಿನಗಳ ಬಳಿಕ ಸೆರೆ ಸಿಕ್ಕಿದ್ದಾನೆ. ಈತನನ್ನು ಸೆರೆ ಹಿಡಿಯಲು ಸಿಸಿಬಿ ಪೊಲೀಸರು ಮಾಡಿದ ಪ್ಲಾನ್ ರೋಚಕ.

ಆದಿತ್ಯಾ ಆಳ್ವಾ ನಿಗಾಗಿ ಸಿಸಿಬಿ ಪೊಲೀಸರಿಂದ ತೀವ್ರ ಶೋಧ ನಡೆಯುತ್ತಿತ್ತು. ಆಳ್ವಾ ಸಂಪರ್ಕದಲ್ಲಿದ್ದವರ ಮೊಬೈಲ್ ಟವರ್ ಲೋಕೆಷನ್ ಟ್ರೇಸ್ ಮಾಡುವ ಮೂಲಕ ಆದಿತ್ಯನ ಸಂಬಂಧಿಕರ, ಆಪ್ತರ ಕರೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಇನ್ನು ಅರೆಸ್ಟ್ ಆಗುವ ಭೀತಿಯಲ್ಲಿ ಆದಿತ್ಯ ಪದೇ ಪದೆ ಜಾಗ ಬದಲಾವಣೆ ಮಾಡುತ್ತಿದ್ದ.

ಭಾನುವಾರ(ಜ.10) ಸಂಜೆ ಆದಿತ್ಯನ ಬಗ್ಗೆ ಸಿಸಿಬಿಗೆ ಮಾಹಿತಿ ಸಿಕ್ಕಿತ್ತು. ಚೆನ್ನೈನ ಓಲ್ಡ್‌ ಮಹಾಬಲೀಪುರಂ (OMR) ರಸ್ತೆಯ ಕಣತ್ತೂರು ಬಳಿ ಆದಿತ್ಯ ತಲೆಮರಿಸಿಕೊಂಡಿದ್ದಾನೆ ಎಂಬ ಬಗ್ಗೆ ಖಚಿತ ಮಾಹಿತಿ ಸಿಕ್ಕ ಬಳಿಕ ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಲ್ಲಿ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾದ್ರು.

ಸಿಸಿಬಿ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದ ತಂಡ ಭಾನುವಾರ ರಾತ್ರಿಯೇ ಚೆನ್ನೈ ಕಡೆ ದೌಡಾಯಿಸಿತು. ನಿನ್ನೆ ಇಡೀ ದಿನ ಆರೋಪಿ ಚಲನವಲನಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ರು. ಬಳಿಕ ಕಣತ್ತೂರಿನ ರೆಸಾರ್ಟ್​ನಲ್ಲಿ ಆರೋಪಿ ಆದಿತ್ಯ ಆಳ್ವಾ ಇರೋದನ್ನ ಖಚಿತಪಡಿಸಿಕೊಂಡು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಆದಿತ್ಯ ಅಳ್ವಾನನ್ನು ವಶಕ್ಕೆ ಪಡೆದ್ರು. ಸದ್ಯ ಆದಿತ್ಯನನ್ನು ಅರೆಸ್ಟ್ ಮಾಡಿದ್ದು ಬೆಂಗಳೂರಿನ ಸಿಸಿಬಿ ಕಚೇರಿಗೆ ಕರೆತರಲಾಗಿದೆ.

ಸಿಸಿಬಿ ಪೊಲೀಸರು, ಆದಿತ್ಯನನ್ನು ಇಂದು ಸಿಸಿಹೆಚ್ 33ರ NDPS ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ಮಾಡಬೇಕಾದ ಹಿನ್ನೆಲೆಯಲ್ಲಿ ಸಿಸಿಬಿ ವಶಕ್ಕೆ ನೀಡುವಂತೆ ಮನವಿ ಮಾಡುವ ಸಾಧ್ಯತೆ ಇದೆ.

ಕೊನೆಗೂ ಅರೆಸ್ಟ್ ಆದ ಆದಿತ್ಯ ಆಳ್ವಾ.. ಕೆಲ ರಾಜಕಾರಣಿಗಳು, ಸೆಲೆಬ್ರೆಟಿಗಳಿಗೆ ಒಳಗೊಳಗೆ ಶುರುವಾಯ್ತು ಭಯ

Published On - 8:52 am, Tue, 12 January 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!