AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ವಶದಲ್ಲಿದ್ದ ಜಾಗ್ವಾರ್ ಕಾರು ಮಾರಿದ ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್​

ಸದ್ಯ ಚಿಕ್ಕಮಗಳೂರಿನಲ್ಲಿ ಎಸ್ಐ ಆಗಿರುವ ಕಬಾಳ್ ರಾಜ್ ಉದ್ಯಮಿ ಕರುಣಾಕರ ಭಂಡಾರಿ ಎಂಬುವವರ ಮೇಲೆ ಬಿಟ್ಟಿಂಗ್ ವಿಚಾರದಲ್ಲಿ ದಾಳಿ ನಡೆಸಿ ಸುಮಾರು 55 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಸಿಸಿಬಿ ವಶದಲ್ಲಿದ್ದ ಜಾಗ್ವಾರ್ ಕಾರು ಮಾರಿದ ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್​
CCB PSI ಕಬ್ಬಾಳ್ ರಾಜ್
sandhya thejappa
| Edited By: |

Updated on:Feb 27, 2021 | 3:05 PM

Share

ಮಂಗಳೂರು:  ಕಾರು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಧಿಕಾರಿಗಳನ್ನು ಡಿಜಿ ಮತ್ತು ಐಜಿಪಿ ಅಮಾನತುಗೊಳಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಯೊಬ್ಬರನ್ನು ಸಿಲುಕಿಸಿ ಹಣ ವಸೂಲಿ ಮಾಡಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ಮಂಗಳೂರು ನಾರ್ಕೋಟಿಕ್ ಠಾಣೆಯ ಇನ್ಸ್​ಪೆಕ್ಟರ್​ ರಾಮಕೃಷ್ಣ ಮತ್ತು ಸಿಸಿಬಿಯ ಹಿಂದಿನ ಎಸ್ಐ ಕಬ್ಬಾಳ್ ರಾಜ್ ಅಮಾನತುಗೊಂಡಿದ್ದಾರೆ.

ಸದ್ಯ ಚಿಕ್ಕಮಗಳೂರಿನಲ್ಲಿ ಎಸ್ಐ ಆಗಿರುವ ಕಬಾಳ್ ರಾಜ್ ಉದ್ಯಮಿ ಕರುಣಾಕರ ಭಂಡಾರಿ ಎಂಬುವವರ ಮೇಲೆ ಬೆಟ್ಟಿಂಗ್ ವಿಚಾರದಲ್ಲಿ ದಾಳಿ ನಡೆಸಿ ಸುಮಾರು 55 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಮನಿ ಡಬ್ಲಿಂಗ್ ಆಮಿಷವೊಡ್ಡಿ ಹಣ ಸಂಗ್ರಹಿಸಿದ್ದ ಎಲಿಯಾ ಕನ್​ಸ್ಟ್ರಕ್ಷನ್ ಕಂಪನಿ ವಿರುದ್ಧ ನಡೆದಿದ್ದ ತನಿಖೆ ವೇಳೆ ಬಿ ಎಂಡಬ್ಲ್ಯೂ, ಪಾರ್ಷೆ ಹಾಗೂ ಜಾಗ್ವಾರ್ ಕಾರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಇದರಲ್ಲಿ ಜಾಗ್ವಾರ್ ಕಾರನ್ನು ಪೊಲೀಸರೇ ಮಾರಾಟ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಡಿಜಿಪಿ ಪ್ರವೀಣ್ ಸೂದ್ ಅವರು ಸಿಐಡಿ ತನಿಖೆಗೆ ಆದೇಶ ನೀಡಿದ್ದರು.

ಕ್ರಿಕೆಟ್ ಬೆಟ್ಟಿಂಗ್ ದಂಧೆ ಹೆಸರಲ್ಲಿ 2019ರ ಜೂನ್ 25 ರಂದು ಮಂಗಳೂರು ಕಚೇರಿ ಮೇಲೆ ದಾಳಿ ಮಾಡಿದ್ದರು.  66 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡು ದಾಖಲೆಯಲ್ಲಿ 51 ಲಕ್ಷದ 74 ಸಾವಿರ ರೂ ಎಂದು ಉಲ್ಲೇಖವಾಗಿತ್ತು. ಐಸ್ ಪ್ಲ್ಯಾಂಟ್ ನಿರ್ಮಾಣಕ್ಕೆ ಬ್ಯಾಂಕ್​ನಿಂದ ಸಾಲ ಪಡೆದ ಹಣವಾಗಿತ್ತು. ಐಟಿ ಅಧಿಕಾರಿಗಳ ಮುಂದೆ ಹಣವನ್ನು ಕ್ಲೈಮ್ ಮಾಡಿಕೊಂಡೆ. ಉಳಿದ 14 ಲಕ್ಷದ 26 ಸಾವಿರ ನಾಪತ್ತೆಯಾಗಿದೆ. ಅಂದಿನ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್​ಗೂ ಈ ಬಗ್ಗೆ ದೂರು ನೀಡಿದ್ದರೂ ಪ್ರಯೋಜನವಾಗಿರಲಿಲ್ಲ ಎಂದು ಅನ್ಯಾಯಕ್ಕೊಳಗಾದ ಕರುಣಾಕರ ಭಂಡಾರಿ ತಿಳಿಸಿದ್ದಾರೆ.

ಇದನ್ನೂ ಓದಿ

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಗಳನ್ನ ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ: ಮಂಗಳೂರು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ

ಸಿಸಿಬಿ ಪೊಲೀಸರಿಂದ ಮೂರು ರೌಡಿ ಗ್ಯಾಂಗ್​​ಗಳ 11 ಜನರ ಬಂಧನ: ಆಯುಕ್ತ ಕಮಲ್ ಪಂಥ್ ಮಾಹಿತಿ

Published On - 2:37 pm, Sat, 27 February 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!