AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ವಶದಲ್ಲಿದ್ದ ಜಾಗ್ವಾರ್ ಕಾರು ಮಾರಿದ ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್​

ಸದ್ಯ ಚಿಕ್ಕಮಗಳೂರಿನಲ್ಲಿ ಎಸ್ಐ ಆಗಿರುವ ಕಬಾಳ್ ರಾಜ್ ಉದ್ಯಮಿ ಕರುಣಾಕರ ಭಂಡಾರಿ ಎಂಬುವವರ ಮೇಲೆ ಬಿಟ್ಟಿಂಗ್ ವಿಚಾರದಲ್ಲಿ ದಾಳಿ ನಡೆಸಿ ಸುಮಾರು 55 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಸಿಸಿಬಿ ವಶದಲ್ಲಿದ್ದ ಜಾಗ್ವಾರ್ ಕಾರು ಮಾರಿದ ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್​
CCB PSI ಕಬ್ಬಾಳ್ ರಾಜ್
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on:Feb 27, 2021 | 3:05 PM

Share

ಮಂಗಳೂರು:  ಕಾರು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಧಿಕಾರಿಗಳನ್ನು ಡಿಜಿ ಮತ್ತು ಐಜಿಪಿ ಅಮಾನತುಗೊಳಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಯೊಬ್ಬರನ್ನು ಸಿಲುಕಿಸಿ ಹಣ ವಸೂಲಿ ಮಾಡಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ಮಂಗಳೂರು ನಾರ್ಕೋಟಿಕ್ ಠಾಣೆಯ ಇನ್ಸ್​ಪೆಕ್ಟರ್​ ರಾಮಕೃಷ್ಣ ಮತ್ತು ಸಿಸಿಬಿಯ ಹಿಂದಿನ ಎಸ್ಐ ಕಬ್ಬಾಳ್ ರಾಜ್ ಅಮಾನತುಗೊಂಡಿದ್ದಾರೆ.

ಸದ್ಯ ಚಿಕ್ಕಮಗಳೂರಿನಲ್ಲಿ ಎಸ್ಐ ಆಗಿರುವ ಕಬಾಳ್ ರಾಜ್ ಉದ್ಯಮಿ ಕರುಣಾಕರ ಭಂಡಾರಿ ಎಂಬುವವರ ಮೇಲೆ ಬೆಟ್ಟಿಂಗ್ ವಿಚಾರದಲ್ಲಿ ದಾಳಿ ನಡೆಸಿ ಸುಮಾರು 55 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಮನಿ ಡಬ್ಲಿಂಗ್ ಆಮಿಷವೊಡ್ಡಿ ಹಣ ಸಂಗ್ರಹಿಸಿದ್ದ ಎಲಿಯಾ ಕನ್​ಸ್ಟ್ರಕ್ಷನ್ ಕಂಪನಿ ವಿರುದ್ಧ ನಡೆದಿದ್ದ ತನಿಖೆ ವೇಳೆ ಬಿ ಎಂಡಬ್ಲ್ಯೂ, ಪಾರ್ಷೆ ಹಾಗೂ ಜಾಗ್ವಾರ್ ಕಾರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಇದರಲ್ಲಿ ಜಾಗ್ವಾರ್ ಕಾರನ್ನು ಪೊಲೀಸರೇ ಮಾರಾಟ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಡಿಜಿಪಿ ಪ್ರವೀಣ್ ಸೂದ್ ಅವರು ಸಿಐಡಿ ತನಿಖೆಗೆ ಆದೇಶ ನೀಡಿದ್ದರು.

ಕ್ರಿಕೆಟ್ ಬೆಟ್ಟಿಂಗ್ ದಂಧೆ ಹೆಸರಲ್ಲಿ 2019ರ ಜೂನ್ 25 ರಂದು ಮಂಗಳೂರು ಕಚೇರಿ ಮೇಲೆ ದಾಳಿ ಮಾಡಿದ್ದರು.  66 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡು ದಾಖಲೆಯಲ್ಲಿ 51 ಲಕ್ಷದ 74 ಸಾವಿರ ರೂ ಎಂದು ಉಲ್ಲೇಖವಾಗಿತ್ತು. ಐಸ್ ಪ್ಲ್ಯಾಂಟ್ ನಿರ್ಮಾಣಕ್ಕೆ ಬ್ಯಾಂಕ್​ನಿಂದ ಸಾಲ ಪಡೆದ ಹಣವಾಗಿತ್ತು. ಐಟಿ ಅಧಿಕಾರಿಗಳ ಮುಂದೆ ಹಣವನ್ನು ಕ್ಲೈಮ್ ಮಾಡಿಕೊಂಡೆ. ಉಳಿದ 14 ಲಕ್ಷದ 26 ಸಾವಿರ ನಾಪತ್ತೆಯಾಗಿದೆ. ಅಂದಿನ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್​ಗೂ ಈ ಬಗ್ಗೆ ದೂರು ನೀಡಿದ್ದರೂ ಪ್ರಯೋಜನವಾಗಿರಲಿಲ್ಲ ಎಂದು ಅನ್ಯಾಯಕ್ಕೊಳಗಾದ ಕರುಣಾಕರ ಭಂಡಾರಿ ತಿಳಿಸಿದ್ದಾರೆ.

ಇದನ್ನೂ ಓದಿ

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಉದ್ಯಮಿಗಳನ್ನ ಸಿಲುಕಿಸಿ ಲಕ್ಷ ಲಕ್ಷ ಹಣ ಸುಲಿಗೆ: ಮಂಗಳೂರು ಸಿಸಿಬಿ ಪೊಲೀಸರ ವಿರುದ್ಧ ಗಂಭೀರ ಆರೋಪ

ಸಿಸಿಬಿ ಪೊಲೀಸರಿಂದ ಮೂರು ರೌಡಿ ಗ್ಯಾಂಗ್​​ಗಳ 11 ಜನರ ಬಂಧನ: ಆಯುಕ್ತ ಕಮಲ್ ಪಂಥ್ ಮಾಹಿತಿ

Published On - 2:37 pm, Sat, 27 February 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ