AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಳಿಗೂ ಮುನ್ನ ಪರಪ್ಪನ ಅಗ್ರಹಾರದ ಮುಂದೆ ಅರ್ಧಗಂಟೆ ಕಾಯ್ದಿದ್ದ ಸಿಸಿಬಿ: ತನಿಖೆಗೆ ಆದೇಶ

ಸಿಸಿಬಿ ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡುವ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಪ್ರಕರಣ ಸಂಬಂಧ ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಾಳಿಗೂ ಮುನ್ನ ಪರಪ್ಪನ ಅಗ್ರಹಾರದ ಮುಂದೆ ಅರ್ಧಗಂಟೆ ಕಾಯ್ದಿದ್ದ ಸಿಸಿಬಿ: ತನಿಖೆಗೆ ಆದೇಶ
ಸಿಸಿಬಿ ಅಧಿಕಾರಿಗಳ ದಾಳಿ
ವಿವೇಕ ಬಿರಾದಾರ
|

Updated on:Aug 27, 2024 | 11:02 AM

Share

ಬೆಂಗಳೂರು, ಆಗಸ್ಟ್​​ 27: ನಾಲ್ಕು ದಿನಗಳ ಹಿಂದೆ ಶನಿವಾರ (ಆ.​ 24) ರಂದು ಸಿಸಿಬಿ (CCB) ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ (Bengaluru Central Jail) ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. ದಾಳಿ ಮಾಡಿದ ಮರು ದಿನವೇ (ಆ.25) ರಂದು ಕೊಲೆ ಆರೋಪಿ ದರ್ಶನ್​ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮಗ್​ ಮತ್ತು ಎಡಗೈನಲ್ಲಿ ಸಿಗರೇಟ್​ ಹಿಡಿದಿರುವ ಫೋಟೋ ವೈರಲ್​ ಆಗಿತ್ತು. ಈ ಫೋಟೋ ವೈರಲ್​ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳ ದಾಳಿ ಮಾಹಿತಿ ಸೋರಿಕೆಯಾಗಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಶನಿವಾರ ಸಿಸಿಬಿ ಅಧಿಕಾರಿಗಳು ಜೈಲಿನೊಳಗೆ ಪ್ರವೇಶಿಸುವ ಮುನ್ನ ಅರ್ಧಗಂಟೆ ಹೊರಗಡೆ ಕಾಯ್ದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಸಿಸಿಬಿ ಅಧಿಕಾರಿಗಳು ದಾಳಿಗೆ ಬಂದಿದ್ದಾಗ ಜೈಲಧಿಕಾರಿಗಳು ಅರ್ಧ ಗಂಟೆ ಒಳಗೆ ಬಿಡಲಿಲ್ಲ. ಈ ವೇಳೆ ಸಿಸಿಬಿ ಅಧಿಕಾರಿಗಳು ಏಕೆ ಕಾಯಬೇಕು ಎಂದು ಜೈಲು ಸಿಬ್ಬಂದಿಗೆ ಪ್ರಶ್ನೆ ಮಾಡಿದ್ದಾರೆ. ಜೈಲು ಅಧೀಕ್ಷಕ ಬಂದಿಲ್ಲ, ಅವರಿಲ್ಲದೆ ಒಳಗೆ ಬಿಡಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಹೀಗಾಗಿ, ಸಿಸಿಬಿ ಅಧಿಕಾರಿಗಳು ಸುಮಾರು ಅರ್ಧಗಂಟೆ ಜೈಲಿನ ಬಾಗಿಲಿನಲ್ಲೇ ಕಾಯ್ದಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ: ಪ್ರಕರಣದ ತನಿಖೆಗಾಗಿ 3 ವಿಶೇಷ ತಂಡ ರಚನೆ

ಬ್ಯಾರಕ್‌ನಲ್ಲಿ ನಾಲ್ಕು ರಟ್ಟಿನ ಬಾಕ್ಸ್​ಗಳನ್ನು ಶಿಫ್ಟ್ ಮಾಡಿದ ಬಗ್ಗೆಯೂ ಜೈಲು ಸಿಬ್ಬಂದಿಯನ್ನು ಸಿಸಿಬಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಬಾಕ್ಸ್​​ಗಳಲ್ಲಿ ಕಸ ಇತ್ತು ಜೈಲು ಸಿಬ್ಬಂದಿ ಹೇಳಿದ್ದಾರೆ. ಆದರೆ, ಜೈಲಿನ ಯಾವ ಬ್ಯಾರಕ್​​ನಿಂದಲೂ ಕಸ ತೆಗೆದುಕೊಂಡು ಹೋಗಿಲ್ಲ, ಕೇವಲ ಬ್ಯಾರಕ್ ನಂಬರ್ 10 ರಿಂದ ಏಕೆ ಕಸ ತೆಗೆದುಕೊಂಡು ಹೋಗಿದ್ದೀರಿ ಎಂದು ಸಿಸಿಬಿ ಪೊಲೀಸರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಪ್ರಾಥಮಿಕ ವರದಿ ನೀಡಿದ್ದಾರೆ. ಜೈಲು ಅಧಿಕಾರಿಗಳ ಈ ನಡೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿಯ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಸೂಚನೆ ನೀಡಿದ್ದಾರೆ. ತನಿಖೆ ನಡೆಸಿ ವರದಿ ನೀಡಲು ಸಿಸಿಬಿ ಹೆಚ್ಚುವರಿ ಆಯುಕ್ತ ಡಾ.ಚಂದ್ರಗುಪ್ತಗೆ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Tue, 27 August 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ