AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಳಿಗೂ ಮುನ್ನ ಪರಪ್ಪನ ಅಗ್ರಹಾರದ ಮುಂದೆ ಅರ್ಧಗಂಟೆ ಕಾಯ್ದಿದ್ದ ಸಿಸಿಬಿ: ತನಿಖೆಗೆ ಆದೇಶ

ಸಿಸಿಬಿ ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡುವ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಪ್ರಕರಣ ಸಂಬಂಧ ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಾಳಿಗೂ ಮುನ್ನ ಪರಪ್ಪನ ಅಗ್ರಹಾರದ ಮುಂದೆ ಅರ್ಧಗಂಟೆ ಕಾಯ್ದಿದ್ದ ಸಿಸಿಬಿ: ತನಿಖೆಗೆ ಆದೇಶ
ಸಿಸಿಬಿ ಅಧಿಕಾರಿಗಳ ದಾಳಿ
ವಿವೇಕ ಬಿರಾದಾರ
|

Updated on:Aug 27, 2024 | 11:02 AM

Share

ಬೆಂಗಳೂರು, ಆಗಸ್ಟ್​​ 27: ನಾಲ್ಕು ದಿನಗಳ ಹಿಂದೆ ಶನಿವಾರ (ಆ.​ 24) ರಂದು ಸಿಸಿಬಿ (CCB) ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ (Bengaluru Central Jail) ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. ದಾಳಿ ಮಾಡಿದ ಮರು ದಿನವೇ (ಆ.25) ರಂದು ಕೊಲೆ ಆರೋಪಿ ದರ್ಶನ್​ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮಗ್​ ಮತ್ತು ಎಡಗೈನಲ್ಲಿ ಸಿಗರೇಟ್​ ಹಿಡಿದಿರುವ ಫೋಟೋ ವೈರಲ್​ ಆಗಿತ್ತು. ಈ ಫೋಟೋ ವೈರಲ್​ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳ ದಾಳಿ ಮಾಹಿತಿ ಸೋರಿಕೆಯಾಗಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಶನಿವಾರ ಸಿಸಿಬಿ ಅಧಿಕಾರಿಗಳು ಜೈಲಿನೊಳಗೆ ಪ್ರವೇಶಿಸುವ ಮುನ್ನ ಅರ್ಧಗಂಟೆ ಹೊರಗಡೆ ಕಾಯ್ದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಸಿಸಿಬಿ ಅಧಿಕಾರಿಗಳು ದಾಳಿಗೆ ಬಂದಿದ್ದಾಗ ಜೈಲಧಿಕಾರಿಗಳು ಅರ್ಧ ಗಂಟೆ ಒಳಗೆ ಬಿಡಲಿಲ್ಲ. ಈ ವೇಳೆ ಸಿಸಿಬಿ ಅಧಿಕಾರಿಗಳು ಏಕೆ ಕಾಯಬೇಕು ಎಂದು ಜೈಲು ಸಿಬ್ಬಂದಿಗೆ ಪ್ರಶ್ನೆ ಮಾಡಿದ್ದಾರೆ. ಜೈಲು ಅಧೀಕ್ಷಕ ಬಂದಿಲ್ಲ, ಅವರಿಲ್ಲದೆ ಒಳಗೆ ಬಿಡಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಹೀಗಾಗಿ, ಸಿಸಿಬಿ ಅಧಿಕಾರಿಗಳು ಸುಮಾರು ಅರ್ಧಗಂಟೆ ಜೈಲಿನ ಬಾಗಿಲಿನಲ್ಲೇ ಕಾಯ್ದಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ: ಪ್ರಕರಣದ ತನಿಖೆಗಾಗಿ 3 ವಿಶೇಷ ತಂಡ ರಚನೆ

ಬ್ಯಾರಕ್‌ನಲ್ಲಿ ನಾಲ್ಕು ರಟ್ಟಿನ ಬಾಕ್ಸ್​ಗಳನ್ನು ಶಿಫ್ಟ್ ಮಾಡಿದ ಬಗ್ಗೆಯೂ ಜೈಲು ಸಿಬ್ಬಂದಿಯನ್ನು ಸಿಸಿಬಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಬಾಕ್ಸ್​​ಗಳಲ್ಲಿ ಕಸ ಇತ್ತು ಜೈಲು ಸಿಬ್ಬಂದಿ ಹೇಳಿದ್ದಾರೆ. ಆದರೆ, ಜೈಲಿನ ಯಾವ ಬ್ಯಾರಕ್​​ನಿಂದಲೂ ಕಸ ತೆಗೆದುಕೊಂಡು ಹೋಗಿಲ್ಲ, ಕೇವಲ ಬ್ಯಾರಕ್ ನಂಬರ್ 10 ರಿಂದ ಏಕೆ ಕಸ ತೆಗೆದುಕೊಂಡು ಹೋಗಿದ್ದೀರಿ ಎಂದು ಸಿಸಿಬಿ ಪೊಲೀಸರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಪ್ರಾಥಮಿಕ ವರದಿ ನೀಡಿದ್ದಾರೆ. ಜೈಲು ಅಧಿಕಾರಿಗಳ ಈ ನಡೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿಯ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಸೂಚನೆ ನೀಡಿದ್ದಾರೆ. ತನಿಖೆ ನಡೆಸಿ ವರದಿ ನೀಡಲು ಸಿಸಿಬಿ ಹೆಚ್ಚುವರಿ ಆಯುಕ್ತ ಡಾ.ಚಂದ್ರಗುಪ್ತಗೆ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Tue, 27 August 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್