AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ಗೆ ಸಿಡಿ ಲೇಡಿ ಹಾಜರ್​ ಸಾಧ್ಯತೆ! ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ

ಸಿಡಿ ಲೇಡಿ ಕೊರ್ಟ್‌ಗೆ ಹಾಜರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಭೆಯಲ್ಲಿ ಸಿಡಿ ಪ್ರಕರಣದ ಬಗ್ಗೆ ಪ್ರಸ್ತಾಪವಾಗುವ ಸಾಧ್ಯತೆಯಿದೆ. ಮುಂದಿನ ಪ್ರಕ್ರಿಯೆ, ಅಗತ್ಯ ಕ್ರಮಗಳ ಬಗ್ಗೆ ಚರ್ಚೆ ಸಾಧ್ಯತೆಯಿದೆ.

ಕೋರ್ಟ್​ಗೆ ಸಿಡಿ ಲೇಡಿ ಹಾಜರ್​ ಸಾಧ್ಯತೆ! ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
ಸಾಧು ಶ್ರೀನಾಥ್​
|

Updated on: Mar 30, 2021 | 12:01 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಪ್ರಕರಣದಲ್ಲಿ ಸಂತ್ರಸ್ಥೆ ಎನ್ನಲಾದ ಸಿಡಿ ಲೇಡಿ ಇಂದು ಕೋರ್ಟ್​ಗೆ ಹಾಜರ್​ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ದಿಢೀರನೆ ಮಹತ್ವದ ಸಭೆ ನಡೆಸಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆದಿದೆ.

ಹೆಚ್ಚುವರಿ ಪೊಲೀಸ್ ಆಯುಕ್ತ, ಪ್ರಕರಣದ ತನಿಖಾ ಜವಾಬ್ದಾರಿ ಹೊತ್ತಿರುವ ಎಸ್​ಐಟಿ ತಂಡದ ಮುಖ್ಯಸ್ಥ ಸೌಮೇಂದು ಮುಖರ್ಜಿ, ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಇಂಟಲಿಜೆನ್ಸ್ ಡಿಸಿಪಿ ಸಂತೋಷ್ ಬಾಬು ಭಾಗಿಯಾಗಿದ್ದಾರೆ. ಸಿಡಿ ಲೇಡಿ ಕೊರ್ಟ್‌ಗೆ ಹಾಜರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಭೆಯಲ್ಲಿ ಸಿಡಿ ಪ್ರಕರಣದ ಬಗ್ಗೆ ಪ್ರಸ್ತಾಪವಾಗುವ ಸಾಧ್ಯತೆಯಿದೆ. ಮುಂದಿನ ಪ್ರಕ್ರಿಯೆ, ಅಗತ್ಯ ಕ್ರಮಗಳ ಬಗ್ಗೆ ಚರ್ಚೆ ಸಾಧ್ಯತೆಯಿದೆ.

ಪ್ರಕರಣ ಬೆಳಕಿಗೆ ಬಂದು 27 ದಿನಗಳು ಕಳೆದಿವೆ. ಈ ಮಧ್ಯೆ ಸಿಡಿ ಯುವತಿ ಬಹಿರಂಗವಾಗಿ ಕಾಣಿಸಿಕೊಳ್ಳದೆ ವಿಡಿಯೋ ಸಂದೇಶಗಳನ್ನು ಕಾಲಕಾಲಕ್ಕೆ ರವಾನಿಸುತ್ತಿದ್ದಾರೆ. ಆದರೆ ಇದೀಗ ಆಕೆಯ ಪರ ವಕೀಲರಾದ ಜಗದೀಶ್​ ಕುಮಾರ್ ಅವರು ಇದೀಗ ಕೋರ್ಟ್​ ಆವರಣದಲ್ಲಿ ಕಾಣಿಸಿಕೊಂಡಿದ್ದು ಇನ್ನೇನು ಕೆಲವೇ ಕ್ಷಣಗಳಲ್ಲಿ ಯುವತಿಯ ಪರ ಕೋರ್ಟ್​ ಕಲಾಪದಲ್ಲಿ ಹಾಜರಾಗಲಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಅವರು ಯುವತಿ ಬೆಂಗಳೂರಿನಲ್ಲಿಯೇ ಇದ್ದು, ಕೋರ್ಟ್​ ಯಾವಾಗ ಆದೇಶ ಹೊರಡಿಸುತ್ತದೆಯೋ ಆಗ ಕೋರ್ಟ್​ಗೆ ಹಾಜರಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್