AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಯುವತಿ ಸದ್ಯಕ್ಕೆ ಬರೋಲ್ಲ; ಕೋರ್ಟ್​ ಆದೇಶಕ್ಕೆ ಕಾಯುತ್ತಿದ್ದೇವೆ- ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್

ಯುವತಿಯನ್ನು ಕೋರ್ಟ್‌ಗೆ ಹಾಜರುಪಡಿಸಲು ನಿರ್ಧರಿಸಿದ್ದೆವು. ಆದರೆ ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಕೋರ್ಟ್ ಏನು ಆದೇಶವನ್ನು ನೀಡುತ್ತೋ ಅದನ್ನ ಪಾಲಿಸ್ತೇವೆ. ನ್ಯಾಯಾಲಯದ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರು ಕೋರ್ಟ್​ ಆವರಣದಲ್ಲಿ ಇದೀಗತಾನೆ ಹೇಳಿದ್ದಾರೆ

ಸಿಡಿ ಯುವತಿ ಸದ್ಯಕ್ಕೆ ಬರೋಲ್ಲ; ಕೋರ್ಟ್​ ಆದೇಶಕ್ಕೆ ಕಾಯುತ್ತಿದ್ದೇವೆ- ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್
ಸಿಡಿ ಯುವತಿ ಸದ್ಯಕ್ಕೆ ಬರೋಲ್ಲ; ಕೋರ್ಟ್​ ಆದೇಶಕ್ಕೆ ಕಾಯುತ್ತಿದ್ದೇವೆ- ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್
ಸಾಧು ಶ್ರೀನಾಥ್​
|

Updated on:Mar 30, 2021 | 3:54 PM

Share

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣದಲ್ಲಿ CRPC ಸೆಕ್ಷನ್ 164ರಡಿ ಯುವತಿ ಹೇಳಿಕೆ ದಾಖಲು ಮಾಡುವ ವಿಚಾರವಾಗಿ ಸಿಡಿ ಯುವತಿ ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಹಾಜರಾಗಬೇಕಿತ್ತು. ಈ ಮಧ್ಯೆ, ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಅವರು ಎಸಿಪಿ ಕವಿತಾ ಅವರನ್ನು ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ನೇಮಕ ಮಾಡಿದ್ದಾರೆ. ಹಾಗಾಗಿ ಅವರು ಕೂಡ ಇಂದು 12 ಗಂಟೆಗೆ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

ಯುವತಿಯನ್ನು ಕೋರ್ಟ್‌ಗೆ ಹಾಜರುಪಡಿಸಲು ನಿರ್ಧರಿಸಿದ್ದೆವು. ಆದರೆ ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಕೋರ್ಟ್ ಏನು ಆದೇಶವನ್ನು ನೀಡುತ್ತೋ ಅದನ್ನ ಪಾಲಿಸ್ತೇವೆ. ನ್ಯಾಯಾಲಯದ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರು ಕೋರ್ಟ್​ ಆವರಣದಲ್ಲಿ ಇದೀಗತಾನೆ ಹೇಳಿದ್ದಾರೆ.

CDಯಲ್ಲಿದ್ದ ಯುವತಿ ಬೆಂಗಳೂರಿನಲ್ಲಿಯೇ ಇದ್ದಾರೆ. ಮಧ್ಯಾಹ್ನ 12.30ರಿಂದ 1 ಗಂಟೆಯೊಳಗೆ ಹಾಜರಾಗಬಹುದು. ನ್ಯಾಯಾಲಯದ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ ಎಂದೂ CD ಲೇಡಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಹೇಳಿರುವುದು ಗಮನಾರ್ಹವಾಗಿದೆ.

ಸಿಆರ್‌ಪಿಸಿ 164ರಡಿ ಆದೇಶದ ಬಗ್ಗೆ ಎಸಿಪಿ ಕವಿತಾ ಅವರು ಕೋರ್ಟ್‌ಗೆ ಕೆಲವು ದಾಖಲೆ ಸಲ್ಲಿಸಲಿದ್ದಾರೆ. ತನಿಖಾಧಿಕಾರಿ ಮೂಲಕ ಯುವತಿಯನ್ನು ಹಾಜರುಪಡಿಸಲು ಎಸ್ಐಟಿ ತನಿಖಾಧಿಕಾರಿ ಕವಿತಾ ಕೋರ್ಟ್‌ಗೆ ಮನವಿ ಸಲ್ಲಿಸಲ್ಲಿಸುವ ಅಂದಾಜಿದೆ.

ಸಿಡಿ ಯುವತಿ ನೀಡಿದ್ದ ದೂರಿನ ಸಂಬಂಧ ಈ ತನಿಖಾಧಿಕಾರಿ ನೇಮಕವಾಗಿದೆ. ಹಾಗಾಗಿ ತನಿಖಾಧಿಕಾರಿ ಎಸಿಪಿ ಕವಿತಾ ಮೂಲಕವೇ ಯುವತಿ ಹಾಜರಾಗಬಹುದು. ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆಯನ್ನು ತನಿಖಾಧಿಕಾರಿ ಗುರುತಿಸಬೇಕಾಗಿದೆ. ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯ ಇನ್ಸ್‌ಪೆಕ್ಟರ್ ಮಾರುತಿ ಸೇರಿದಂತೆ 8 ಅಧಿಕಾರಿಗಳ ತಂಡ ಕವಿತಾ ಅವರಿಗೆ ಸಾಥ್​ ನೀಡಲಿದ್ದಾರೆ.

ಈ ಬೆಳವಣಿಗೆಗಳ ಸಮ್ಮುಖದಲ್ಲಿ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ 24ನೇ ACMM ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಪೊಲೀಸ್ ಭದ್ರತೆ ಹಾಕಲಾಗಿದೆ. ಭದ್ರತೆಗಾಗಿ ಮಹಿಳಾ ಪೊಲೀಸರನ್ನೂ ನಿಯೋಜನೆ ಮಾಡಲಾಗಿದೆ.

Published On - 11:03 am, Tue, 30 March 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ