AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಯುವತಿ ಸದ್ಯಕ್ಕೆ ಬರೋಲ್ಲ; ಕೋರ್ಟ್​ ಆದೇಶಕ್ಕೆ ಕಾಯುತ್ತಿದ್ದೇವೆ- ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್

ಯುವತಿಯನ್ನು ಕೋರ್ಟ್‌ಗೆ ಹಾಜರುಪಡಿಸಲು ನಿರ್ಧರಿಸಿದ್ದೆವು. ಆದರೆ ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಕೋರ್ಟ್ ಏನು ಆದೇಶವನ್ನು ನೀಡುತ್ತೋ ಅದನ್ನ ಪಾಲಿಸ್ತೇವೆ. ನ್ಯಾಯಾಲಯದ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರು ಕೋರ್ಟ್​ ಆವರಣದಲ್ಲಿ ಇದೀಗತಾನೆ ಹೇಳಿದ್ದಾರೆ

ಸಿಡಿ ಯುವತಿ ಸದ್ಯಕ್ಕೆ ಬರೋಲ್ಲ; ಕೋರ್ಟ್​ ಆದೇಶಕ್ಕೆ ಕಾಯುತ್ತಿದ್ದೇವೆ- ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್
ಸಿಡಿ ಯುವತಿ ಸದ್ಯಕ್ಕೆ ಬರೋಲ್ಲ; ಕೋರ್ಟ್​ ಆದೇಶಕ್ಕೆ ಕಾಯುತ್ತಿದ್ದೇವೆ- ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್
ಸಾಧು ಶ್ರೀನಾಥ್​
|

Updated on:Mar 30, 2021 | 3:54 PM

Share

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣದಲ್ಲಿ CRPC ಸೆಕ್ಷನ್ 164ರಡಿ ಯುವತಿ ಹೇಳಿಕೆ ದಾಖಲು ಮಾಡುವ ವಿಚಾರವಾಗಿ ಸಿಡಿ ಯುವತಿ ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಹಾಜರಾಗಬೇಕಿತ್ತು. ಈ ಮಧ್ಯೆ, ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಅವರು ಎಸಿಪಿ ಕವಿತಾ ಅವರನ್ನು ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ನೇಮಕ ಮಾಡಿದ್ದಾರೆ. ಹಾಗಾಗಿ ಅವರು ಕೂಡ ಇಂದು 12 ಗಂಟೆಗೆ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

ಯುವತಿಯನ್ನು ಕೋರ್ಟ್‌ಗೆ ಹಾಜರುಪಡಿಸಲು ನಿರ್ಧರಿಸಿದ್ದೆವು. ಆದರೆ ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಕೋರ್ಟ್ ಏನು ಆದೇಶವನ್ನು ನೀಡುತ್ತೋ ಅದನ್ನ ಪಾಲಿಸ್ತೇವೆ. ನ್ಯಾಯಾಲಯದ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಯುವತಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರು ಕೋರ್ಟ್​ ಆವರಣದಲ್ಲಿ ಇದೀಗತಾನೆ ಹೇಳಿದ್ದಾರೆ.

CDಯಲ್ಲಿದ್ದ ಯುವತಿ ಬೆಂಗಳೂರಿನಲ್ಲಿಯೇ ಇದ್ದಾರೆ. ಮಧ್ಯಾಹ್ನ 12.30ರಿಂದ 1 ಗಂಟೆಯೊಳಗೆ ಹಾಜರಾಗಬಹುದು. ನ್ಯಾಯಾಲಯದ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ ಎಂದೂ CD ಲೇಡಿ ಪರ ವಕೀಲ ಕೆ.ಎನ್.ಜಗದೀಶ್ ಕುಮಾರ್ ಹೇಳಿರುವುದು ಗಮನಾರ್ಹವಾಗಿದೆ.

ಸಿಆರ್‌ಪಿಸಿ 164ರಡಿ ಆದೇಶದ ಬಗ್ಗೆ ಎಸಿಪಿ ಕವಿತಾ ಅವರು ಕೋರ್ಟ್‌ಗೆ ಕೆಲವು ದಾಖಲೆ ಸಲ್ಲಿಸಲಿದ್ದಾರೆ. ತನಿಖಾಧಿಕಾರಿ ಮೂಲಕ ಯುವತಿಯನ್ನು ಹಾಜರುಪಡಿಸಲು ಎಸ್ಐಟಿ ತನಿಖಾಧಿಕಾರಿ ಕವಿತಾ ಕೋರ್ಟ್‌ಗೆ ಮನವಿ ಸಲ್ಲಿಸಲ್ಲಿಸುವ ಅಂದಾಜಿದೆ.

ಸಿಡಿ ಯುವತಿ ನೀಡಿದ್ದ ದೂರಿನ ಸಂಬಂಧ ಈ ತನಿಖಾಧಿಕಾರಿ ನೇಮಕವಾಗಿದೆ. ಹಾಗಾಗಿ ತನಿಖಾಧಿಕಾರಿ ಎಸಿಪಿ ಕವಿತಾ ಮೂಲಕವೇ ಯುವತಿ ಹಾಜರಾಗಬಹುದು. ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆಯನ್ನು ತನಿಖಾಧಿಕಾರಿ ಗುರುತಿಸಬೇಕಾಗಿದೆ. ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯ ಇನ್ಸ್‌ಪೆಕ್ಟರ್ ಮಾರುತಿ ಸೇರಿದಂತೆ 8 ಅಧಿಕಾರಿಗಳ ತಂಡ ಕವಿತಾ ಅವರಿಗೆ ಸಾಥ್​ ನೀಡಲಿದ್ದಾರೆ.

ಈ ಬೆಳವಣಿಗೆಗಳ ಸಮ್ಮುಖದಲ್ಲಿ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ 24ನೇ ACMM ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಪೊಲೀಸ್ ಭದ್ರತೆ ಹಾಕಲಾಗಿದೆ. ಭದ್ರತೆಗಾಗಿ ಮಹಿಳಾ ಪೊಲೀಸರನ್ನೂ ನಿಯೋಜನೆ ಮಾಡಲಾಗಿದೆ.

Published On - 11:03 am, Tue, 30 March 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!