AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ಥ್​​ಡೇ ಸಂಭ್ರಮದಲ್ಲಿ ಮಿಂಚಿದ ಟೈಗರ್ ಶ್ವಾನ! ಉಡುಗೊರೆಯಾಗಿ 25 ಗ್ರಾಂ ಚಿನ್ನದ ಹಾರ

ಸಂಗಯ್ಯ ಪತ್ರಿ ಮನೆಯಲ್ಲಿ ಮುದ್ದಿನಿಂದ ಸಾಕಿದ್ದ ಶ್ವಾನದ ಹುಟ್ಟುಹಬ್ಬವನ್ನು ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಿ ಸಂಭ್ರಮಿಸಿದ್ದಾರೆ. 25 ಗ್ರಾಂ ಚಿನ್ನವನ್ನು ಶ್ವಾನಕ್ಕೆ ಉಡುಗೊರೆಯಾಗಿ ನೀಡಲಾಗಿದೆ.

ಬರ್ಥ್​​ಡೇ ಸಂಭ್ರಮದಲ್ಲಿ ಮಿಂಚಿದ ಟೈಗರ್ ಶ್ವಾನ! ಉಡುಗೊರೆಯಾಗಿ 25 ಗ್ರಾಂ ಚಿನ್ನದ ಹಾರ
ಮೂರನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಟೈಗರ್ ಎಂಬ ಹೆಸರಿನ ಶ್ವಾನ
shruti hegde
|

Updated on: Dec 29, 2020 | 2:20 PM

Share

ವಿಜಯಪುರ: ಸಂಗಯ್ಯ ಪತ್ರಿ ಎಂಬುವವರು ತಾವು ಮುದ್ದಿನಿಂದ ಸಾಕಿದ್ದ ಶ್ವಾನದ ಹುಟ್ಟುಹಬ್ಬವನ್ನು ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಿ ಸಂಭ್ರಮಿಸಿದ್ದಾರೆ. T ಅಕ್ಷರದಿಂದ ಪದಕ ಸಿದ್ಧಪಡಿಸಿ, ಚಿನ್ನದ ಹಾರವನ್ನು ಉಡುಗೊರೆಯಾಗಿ ಶ್ವಾನಕ್ಕೆ ನೀಡಿದ್ದಾರೆ.

ಸಂಗಯ್ಯ ಪತ್ರಿ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ನಿವಾಸಿ. ತಮ್ಮ ಮನೆಯಲ್ಲಿ ಸಾಕಿದ್ದ ಶ್ವಾನಕ್ಕೆ ಟೈಗರ್​ಎಂದು ಹೆಸರಿಟ್ಟಿದ್ದರು. ನಿನ್ನೆ (ಡಿ. 28) ಟೈಗರ್ 3ನೇ ವರ್ಷಕ್ಕೆ ಕಾಲಿಟ್ಟಿದ್ದು,  25 ಗ್ರಾಂ ಚಿನ್ನದ ಹಾರವನ್ನು ಉಡುಗೊರೆಯಾಗಿ ನೀಡಿದ್ದು, ಚಿನ್ನದ ಸರಕ್ಕೆ T (ಟೈಗರ್) ಎಂಬ ಪದಕವನ್ನು ಜೋಡಿಸಲಾಗಿದೆ.

200 ಜನರಿಗೆ ಆಮಂತ್ರಣ ನೀಡಲಾಗಿದ್ದು, ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಸಂಭ್ರಮಿಸಲಾಗಿದೆ.  ಆಗಮಿಸಿದ್ದ ಅತಿಥಿಗಳಿಗೆ ಕೇಸರ್ ಬಾತ್​ ಹಾಗೂ ಉಪ್ಪಿಟ್ಟು ಉಪಹಾರ ಏರ್ಪಾಟು ಮಾಡಲಾಗಿದೆ.

ಕಳೆದ ವರ್ಷದ ಟೈಗರ್ ಹುಟ್ಟುಹಬ್ಬದ ದಿನ 50 ಗ್ರಾಂ ಚಿನ್ನ ಉಡುಗೊರೆಯಾಗಿ ನೀಡಲಾಗಿತ್ತು. 500 ಜನರಿಗೆ ಶಾವಿಗೆ ಪಾಯಸ, ಪೂರಿ, ಬಜ್ಜಿ ಸೇರಿದಂತೆ ವಿವಿಧ ತೆರೆನಾದ ಖಾದ್ಯಗಳ ಸಿದ್ಧತೆ ಮಾಡಲಾಗಿತ್ತು.

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ

Follow Us
shruti hegde
shruti hegde
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?