AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್​ ನಾಯಕ್​ಗೆ ಗಂಭೀರ ಗಾಯ, ಪತ್ನಿ ಸಾವು

ಅಂಕೋಲ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶ್ರೀಪಾದ್ ನಾಯಕ್ ಅವರ ಪತ್ನಿ ವಿಜಯಾ ನಾಯಕ್​ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್​ ನಾಯಕ್​ಗೆ ಗಂಭೀರ ಗಾಯ, ಪತ್ನಿ ಸಾವು
ಶ್ರೀಪಾದ್ ನಾಯಕ್ (ಸಂಗ್ರಹ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Jan 12, 2021 | 7:21 AM

Share

ಕಾರವಾರ: ಅಂಕೋಲ ತಾಲ್ಲೂಕಿನ ಹೊಸಕಂಬಿ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಸಚಿವ ಶ್ರೀಪಾದ್​ ನಾಯಕ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಗೋವಾ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಲ್ಲಾಪುರದಿಂದ ಗೋಕರ್ಣಕ್ಕೆ ಹೊರಟಿದ್ದ ಸಚಿವರಿದ್ದ ಕಾರು ಹೊಸಕಂಬಿ ಸಮೀಪ ಪಲ್ಟಿಯಾಗಿತ್ತು.

ಕಾರಿನಲ್ಲಿದ್ದ ಸಚಿವರ ಪತ್ನಿ ವಿಜಯಾ ನಾಯಕ್​ ಹಾಗೂ ಸಚಿವರ ಶ್ರೀಪಾದ್ ಆಪ್ತ ಕಾರ್ಯದರ್ಶಿ ದೀಪಕ್‌ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಚಿವ ಶ್ರೀಪಾದ್ ನಾಯಕ್, ಸಾಯಿಕಿರಣ್, ತುಕಾರಾಮ್ ಪಾಟೀಲ್‌, ಚಂದನ್ ಯಶವಂತ್ ನಾಯ್ಕ್‌ ಅವರಿಗೆ ಗೋವಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಚಿವರು ತಮ್ಮ ಪತ್ನಿ ಮತ್ತು ಆಪ್ತರೊಂದಿಗೆ ಯಲ್ಲಾಪುರದ ಗಂಟೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಚಿವರು, ಅಲ್ಲಿಂದ ಗೋಕರ್ಣಕ್ಕೆ ತೆರಳುತ್ತಿದ್ದರು.

ಗೋವಾ ಮುಖ್ಯಮಂತ್ರಿಯೊಂದಿಗೆ ಪ್ರಧಾನಿ ಚರ್ಚೆ ಶ್ರೀಪಾದ್​ ನಾಯಕ್ ಆರೋಗ್ಯ ಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚಿಸಿದರು. ಸಚಿವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.

ಯಡಿಯೂರಪ್ಪ ಸಂತಾಪ ಕಾರು ಅಪಘಾತದಲ್ಲಿ ಮೃತಪಟ್ಟ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ವಿಜಯಾ ನಾಯಕ್ ಅವರ ಸಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ವಿಜಯಾ ನಾಯ್ಕ್​ ಅವರ ಸಾವು ಅತ್ಯಂತ ದುರದೃಷ್ಟಕರ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ. ಗಾಯಗೊಂಡಿರುವ ಕೇಂದ್ರಸಚಿವ ಶ್ರೀಪಾದ್ ನಾಯ್ಕ್​​ ಶೀಘ್ರ ಗುಣಮುಖರಾಗಲಿ. ಸಚಿವರಿಗೆ ಎಲ್ಲ ಅಗತ್ಯ ನೆರವು ನೀಡುವಂತೆ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಲ್ಹಾದ್ ಜೋಶಿ ಸಂತಾಪ ವಿಜಯಾ ನಾಯಕ್ ನಿಧನಕ್ಕೆ ಸಂತಾಪ ಸೂಚಿಸಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. 

ಶ್ರೀಪಾದ್ ನಾಯ್ಕ್ ಹಾಗೂ ಪತ್ನಿ ವಿಜಯಾ ನಾಯ್ಕ್

ಸಚಿವ ಶ್ರೀಪಾದ ನಾಯಕ ದಂಪತಿ ಯಲ್ಲಾಪುರ ತಾಲೂಕಿನಲ್ಲಿ ಸೋಮವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಚಂದಗುಳಿ, ಕವಡಿಕೆರೆ, ಯಲ್ಲಾಪುರದ ಈಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ್ದರು.

Published On - 9:31 pm, Mon, 11 January 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?