AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ST Status: ಕರ್ನಾಟಕದ ಬೆಟ್ಟ ಕುರುಬ ಸೇರಿ ಹಲವು ಸಮುದಾಯಗಳಿಗೆ ಎಸ್​ಟಿ ಸ್ಥಾನಮಾನ ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿ

Betta Kuruba: ಕರ್ನಾಟಕದ ಬೆಟ್ಟ-ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೇಂದ್ರ ಸಚಿವ ಸಂಪುಟವು ಬುಧವಾರ ಒಪ್ಪಿಗೆ ಸೂಚಿಸಿದೆ.

ST Status: ಕರ್ನಾಟಕದ ಬೆಟ್ಟ ಕುರುಬ ಸೇರಿ ಹಲವು ಸಮುದಾಯಗಳಿಗೆ ಎಸ್​ಟಿ ಸ್ಥಾನಮಾನ ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿ
ಕೇಂದ್ರ ಸಚಿವ ಅರ್ಜುನ್ ಮುಂಡಾ
TV9 Web
| Edited By: |

Updated on:Sep 14, 2022 | 9:56 PM

Share

ದೆಹಲಿ: ಕರ್ನಾಟಕದ ಬೆಟ್ಟ-ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ (Scheduled Tribe) ಪಟ್ಟಿಗೆ ಸೇರಿಸಲು ಕೇಂದ್ರ ಸಚಿವ ಸಂಪುಟವು ಬುಧವಾರ ಒಪ್ಪಿಗೆ ಸೂಚಿಸಿದೆ. ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಸಿರ್ಮೌರ್ ಪ್ರದೇಶದಲ್ಲಿ ವಾಸಿಸುತ್ತಿರುವ ಹಟ್ಟಿ ಸಮುದಾಯ, ತಮಿಳುನಾಡಿನ ನಾರಿಕುರವರ್ ಸೇರಿದಂತೆ ಒಟ್ಟು ಐದು ರಾಜ್ಯಗಳ ಅಧಿಸೂಚಿತ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಹಲವು ಬುಡಕಟ್ಟುಗಳನ್ನು ಸೇರಿಸುವ ಪ್ರಸ್ತಾವವನ್ನೂ ಒಪ್ಪಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ‘5 ರಾಜ್ಯಗಳಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬುಡಕಟ್ಟು ಸಂಬಂಧಿತ ವಿವಿಧ ವಿಷಯಗಳ ಬಗ್ಗೆ  ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು. ಛತ್ತೀಸಗಡ ಮತ್ತು ಉತ್ತರ ಪ್ರದೇಶದ ಸಮುದಾಯಗಳಿಗೂ ಈ ಪಟ್ಟಿಯಲ್ಲಿ ಸ್ಥಾನ ದೊರೆತಿದೆ.

ತಮಿಳುನಾಡಿನ ಕುರಿವಿಕ್ಕರಣ್ ಸಮುದಾಯದ ಜೊತೆಗೆ ಬ್ರಿಜ್ಜಿಯಾ ಸಮುದಾಯ ಮತ್ತು ಛತ್ತೀಸಗಡದ ಇತರ 11 ಬುಡಕಟ್ಟು ಜನಾಂಗಗಳನ್ನು ಪಟ್ಟಿಗೆ ಸೇರಿಸಲು ಸಂಪುಟವು ಅನುಮೋದನೆ ನೀಡಿದೆ. ಈ ಹಿಂದೆ ಸಂತ ರವಿದಾಸ್ ನಗರ ಎಂದು ಕರೆಯಲ್ಪಡುತ್ತಿದ್ದ ಕುಶಿನಗರ, ಚಂದೌಲಿ ಮತ್ತು ಸಂತ ಕಬೀರ್ ನಗರ ಮತ್ತು ಭದೋಹಿ ಜಿಲ್ಲೆಯಾದ್ಯಂತ ಹರಡಿರುವ ಉತ್ತರ ಪ್ರದೇಶದ ಐದು ಉಪಜಾತಿಗಳೊಂದಿಗೆ ಗೊಂಡ ಸಮುದಾಯವನ್ನು ಎಸ್​ಟಿ ಸಮುದಾಯದ ಪಟ್ಟಿಗೆ ಸೇರಿಸಲು ಕೇಂದ್ರ ಸಚಿವ ಸಂಪುಟವು ಒಪ್ಪಿಕೊಂಡಿದೆ.

ಹಿಮಾಚಲ ಪ್ರದೇಶದ ಟ್ರಾನ್ಸ್-ಗಿರಿ ಪ್ರದೇಶದ ನಾಲ್ಕು ವಲಯಗಳಲ್ಲಿ ವಾಸಿಸುತ್ತಿರುವ ಹಟ್ಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಸ್ಥಾನ ದೊರೆತಿರುವುದು ಮಹತ್ವದ ವಿದ್ಯಮಾನ ಎನಿಸಿದೆ. ಚುನಾವಣೆಯ ಹೊಸಿಲಲ್ಲಿರುವ ರಾಜ್ಯಗಳಲ್ಲಿ ಮೀಸಲಾತಿ ಸಂಬಂಧಿತ ಚರ್ಚೆಯು ಇತ್ತೀಚೆಗೆ ಗರಿಗೆದರಿತ್ತು. ಉತ್ತರಾಖಂಡದಲ್ಲಿ ಈ ಸಮುದಾಯವು ಅದಾಗಲೇ ಎಸ್​ಟಿ ಪಟ್ಟಿಗೆ ಸೇರಿತ್ತು. ಎಸ್​ಟಿ ಪಟ್ಟಿಗೆ ಹಟ್ಟಿ ಜಾತಿಯನ್ನು ಸೇರಿಸುವುದರಿಂದ 1.6 ಲಕ್ಷ ಜನರಿಗೆ ಪ್ರಯೋಜನವಾಗಿದೆ ಎಂದು ಮುಂಡಾ ಹೇಳಿದರು.

ರಾಜ್ಯವಾರು ಎಸ್​ಟಿ ಮೀಸಲಾತಿ ಪ್ರಕಟಣೆಗಾಗಿ ಕೇಂದ್ರ ಸರ್ಕಾರವು ಈಗ ಸಾಂವಿಧಾನಿಕ (ಅನುಸೂಚಿತ ಬುಡಕಟ್ಟುಗಳು) ಆದೇಶ 1950ಕ್ಕೆ ತಿದ್ದುಪಡಿ ತರಲಿದೆ. ಇದಕ್ಕಾಗಿ ಪ್ರತ್ಯೇಕ ಮಸೂದೆ ಮಂಡಿಸಲಿದೆ.

Published On - 9:56 pm, Wed, 14 September 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್