AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮಾವು ಬೆಳಗಾರರ ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಗುಡ್​ ನ್ಯೂಸ್​ ನೀಡಿದೆ. 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ ನೀಡಿದೆ. ಆ ಮೂಲಕ ಮಾವಿನ ಬೆಲ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸಮ್ಮತಿಸಿದೆ.

ಕರ್ನಾಟಕ ಮಾವು ಬೆಳಗಾರರ ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ
ಮಾವು
ಗಂಗಾಧರ​ ಬ. ಸಾಬೋಜಿ
|

Updated on: Jun 22, 2025 | 8:44 AM

Share

ಬೆಂಗಳೂರು, ಜೂನ್​ 22: ಹಣ್ಣುಗಳ ರಾಜ ಮಾವಿನ ಹಣ್ಣಿಗೆ (mango) ಸಂಕಷ್ಟ ಎದುರಾಗಿದೆ. ಬಗೆ ಬಗೆ ಮಾವನ್ನ ಕೇಳೋರಿಲ್ಲ. ಬೆಳೆದ ರೈತರಿಗೆ ಬೆಲೆಯೂ ಸಿಗುತ್ತಿಲ್ಲ. ಮಾವು ಬೆಳೆದವರ ಗೋಳು ಹೇಳ ತೀರದಾಗಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಕರ್ನಾಟಕದ ಮಾವು ಬೆಳಗಾರರ ನೆರವಿಗೆ ಮುಂದಾಗಿದ್ದು, 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ ಸೂಚಿಸಿದೆ. ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮತ್ತು ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ಅವರ  ವಿಡಿಯೋ ಸಂವಾದದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಬೆಲೆಗಳಲ್ಲಿನ ವ್ಯತ್ಯಾಸದ ವೆಚ್ಚವನ್ನು ಭರಿಸುತ್ತವೆ ಮತ್ತು ಅದನ್ನು ರೈತರಿಗೆ ಪಾವತಿಸುತ್ತದೆ. ಒಟ್ಟು 2.5 ಲಕ್ಷ ಟನ್​​ ಮಾವು ಖರೀದಿಗೆ ಕೇಂದ್ರ ಒಪ್ಪಿಗೆ ಸೂಚಿಸಿದ್ದು, ಅಧಿಕೃತ ಆದೇಶ ಬಾಕಿ ಇದೆ. ಈ ಮಹತ್ವ ನಿರ್ಧಾರಕ್ಕೆ ಸಚಿವ ಚಲುವರಾಯ ಸ್ವಾಮಿ ಅವರು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ರಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಜಸ್ಟ್​ ಸಿಂಗಲ್​​ ಮಾವಿನ ಹಣ್ಣಿಗೆ 10 ಸಾವಿರ ರೂ.: ಇದು ಕರ್ನಾಟಕದಲ್ಲೇ ಬೆಳೆದ ತಳಿ ಯಾವುದು ಗೊತ್ತಾ?

ಇದನ್ನೂ ಓದಿ
Image
ಕರ್ನಾಟಕದ 6 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​
Image
ಹೆಚ್ಚುತ್ತಿದೆ ಕೊವಿಡ್‌ ರೂಪಾಂತರಿ; ಒಮಿಕ್ರಾನ್ ಬಗ್ಗೆ ಇರಲಿ ಎಚ್ಚರ!
Image
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
Image
ಮಾವು ಇಳುವರಿ ಕುಸಿತ: ಬಂಪರ್ ನಿರೀಕ್ಷೆಯಲ್ಲಿದ್ದ ಬೆಳೆಗಾರರು ಕಂಗಾಲು

ಕರ್ನಾಟಕದಲ್ಲಿ ಉತ್ಪಾದನೆಯಾದ ಅಂದಾಜು 10 ಲಕ್ಷ ಮೆಟ್ರಿಕ್ ಟನ್​​ಗಳಲ್ಲಿ 2.5 ಲಕ್ಷ ಮೆಟ್ರಿಕ್ ಟನ್‌ ಗಳವರೆಗೆ ಪರಿಹಾರ ನೀಡುವ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ತೋತಾಪುರಿ ಮಾವಿನಹಣ್ಣಿಗೆ ರೈತರು ಸಾಮಾನ್ಯಕ್ಕಿಂತ ಕಡಿಮೆ ಬೆಲೆಯನ್ನು ಪಡೆಯುತ್ತಿರುವುದರಿಂದ, ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾನ್ಯ ಮಾರುಕಟ್ಟೆ ದರಕ್ಕಿಂತ ಕಡಿಮೆಯಾದ ವ್ಯತ್ಯಾಸದ ವೆಚ್ಚವನ್ನು ಸಮಾನವಾಗಿ ಭರಿಸಬೇಕೆಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನೂ ಓದಿ: ಮಾವು ಬೆಳೆಗೆ ಬೆಂಬಲ ಘೋಷಿಸುವಂತೆ ಬೆಳೆಗಾರರಿಂದ ಶ್ರೀನಿವಾಸಪುರ ಬಂದ್, ವಾಹನ ಸಂಚಾರ ಅಸ್ತವ್ಯಸ್ತ

ಈ ಮುಂಚೆ ಕರ್ನಾಟಕ ಸರ್ಕಾರವು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು, ಅದರಲ್ಲಿ ಟೊಮೆಟೊ ಮತ್ತು ಮಾವಿನಹಣ್ಣುಗಳ ಬೆಲೆಗಳು, ವಿಶೇಷವಾಗಿ ತೋತಾಪುರಿ ಮಾವಿನ ಬೆಲೆಯಲ್ಲಿ ನಿರಂತರವಾಗಿ ಕುಸಿಯುತ್ತಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಟೊಮೆಟೊ ಬೆಲೆ ಕಡಿಮೆಯಾಗಿದ್ದರೂ, ಸ್ಥಿರವಾಗಿದೆ. ಆದ್ದರಿಂದ ಟೊಮೆಟೊಗೆ ಯಾವುದೇ ತಕ್ಷಣದ ಕ್ರಮ ಅಗತ್ಯವಿಲ್ಲ ಎಂದು ಕೃಷಿ ಸಚಿವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್