AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಿಂದ ಹೆಚ್ಚುವರಿ ಹೆಸರುಕಾಳು ಖರೀದಿಗೆ ಕೇಂದ್ರ ಸರ್ಕಾರ ಆದೇಶ: ಸಚಿವ ಜೋಶಿ

ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಾಂಗಾಮಿನಲ್ಲಿ ಈಗಾಗಲೇ 22215 ಮೆಟ್ರಿಕ್​ ಟನ್ ಹೆಸರುಕಾಳನ್ನು ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಿದ್ದು, ಕರ್ನಾಟಕದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತರು ಹೆಸರು ಕಾಳು ಬೆಳೆದಿದ್ದು ಹೆಚ್ಚುವರಿಯಾಗಿ ಸುಮಾರು 16,105 ಸಾವಿರ ಮೆಟ್ರಿಕ್ ಟನ್ ಹೆಸರು ಖರೀದಿಸಲು ಕೇಂದ್ರ ಸರ್ಕಾರ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಲು ಮುಂದಾಗಿದೆ.

ಕರ್ನಾಟಕದಿಂದ ಹೆಚ್ಚುವರಿ ಹೆಸರುಕಾಳು ಖರೀದಿಗೆ ಕೇಂದ್ರ ಸರ್ಕಾರ ಆದೇಶ: ಸಚಿವ ಜೋಶಿ
ಪ್ರಹ್ಲಾದ್​ ಜೋಶಿ
ವಿವೇಕ ಬಿರಾದಾರ
|

Updated on:Nov 06, 2024 | 1:48 PM

Share

ಹುಬ್ಬಳ್ಳಿ, ನವೆಂಬರ್ ​06: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಾಂಗಾಮಿನಲ್ಲಿ ಈಗಾಗಲೇ 22,215 ಮೆಟ್ರಿಕ್​ ಟನ್ ಹೆಸರುಕಾಳನ್ನು (Mung Bean) ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಿದ್ದು, ಕರ್ನಾಟಕದಿಂದ (Karnataka) ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಕಾಳು ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಆಹಾರ ಸಾರ್ವಜನಿಕ ಸರಬರಾಜು ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಹೇಳಿದರು.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ರಾಜ್ಯದ ರೈತರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಕಾಳು ಬೆಳೆದಿದ್ದು ಹೆಚ್ಚುವರಿಯಾಗಿ ಸುಮಾರು 16,105 ಸಾವಿರ ಮೆಟ್ರಿಕ್ ಟನ್ ಹೆಸರು ಖರೀದಿಸಲು ಕೇಂದ್ರ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಲು ಮುಂದಾಗಿದೆ. ಇದರಿಂದಾಗಿ ಒಟ್ಟಾರೆಯಾಗಿ 38.320 ಮೆಟ್ರಿಕ್ ಟನ್ ಖರೀದಿಸಲು ಕೇಂದ್ರ ಒಪ್ಪಿಗೆ ನೀಡಿದೆ. ರಾಜ್ಯದ ರೈತರ ಹಿತದೃಷ್ಟಿಯಿಂದ ಪ್ರಹ್ಲಾದ್​ ಜೋಶಿಯವರು ಈ ಕುರಿತು ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಸೌರಶಕ್ತಿ ಸಾಧಿಸುವ ಕನಸು ನನಸಾಗುತ್ತಿದೆ: ಅಂತರರಾಷ್ಟ್ರೀಯ ಸೌರ ಮೈತ್ರಿ ಸಭೆಯಲ್ಲಿ ಪ್ರಹ್ಲಾದ್ ಜೋಶಿ

ಹೆಸರುಕಾಳು ಖರೀದಿ ಪ್ರಮಾಣ ಎಷ್ಟು

ಈಗಾಗಲೇ ರಾಜ್ಯದಿಂದ ಒಟ್ಟು 22,215 ಮೆಟ್ರಿಕ್ ಟನ್ ಹೆಸರುಕಾಳು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗಿದೆ. ಹೆಚ್ಚುವರಿಯಾಗಿ ರೈತರು ಬೆಳೆದಿರುವ ಸುಮಾರು 16,105 ಮೆಟ್ರಿಕ್‌ಟನ್‌ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗುವ ಹೆಸರುಕಾಳಿಗೆ ಎಫ್​ಎಕ್ಯೂ ಗುಣಮಟ್ಟದ ಮಾನದಂಡದಲ್ಲಿ ಕೇಂದ್ರ ಸಂಬಂಧಿತ ಸಂಸ್ಥೆಗಳು ಖರೀದಿ ಪ್ರಕ್ರಿಯೆ ಆರಂಭಿಸಲಿವೆ ಎಂದರು.

ಭಾರತ್​ ಬ್ರ್ಯಾಂಡ್ ಎರಡನೇ ಹಂತ ಆರಂಭ

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಭಾರತ್​ ಬ್ರ್ಯಾಂಡ್ ಎರಡನೇ ಹಂತದ ಮಾರಾಟ​​ ಆರಂಭವಾಗಿದೆ. 2023ರ ಅಕ್ಟೋಬರ್​ನಲ್ಲಿ ಮೊದಲ ಹಂತ ಆರಂಭವಾಗಿತ್ತು. ಎರಡನೇ ಹಂತದ ಭಾರತ್​ ಬ್ರ್ಯಾಂಡ್ ರೀಟೇಲ್​ ಮಾರಾಟ ಯೋಜನೆಯಲ್ಲಿ ಕೇಂದ್ರ ಸರ್ಕಾರ ಆಹಾರ ನಿಗಮದಿಂದ 3.69 ಲಕ್ಷ ಟನ್​ ಗೋಧಿ ಮತ್ತು 2.91 ಲಕ್ಷ ಟನ್​ ಅಕ್ಕಿಯನ್ನು ವಿತರಿಸುತ್ತಿದೆ.

ಯಾವೆಲ್ಲ ವಸ್ತು ಮಾರಾಟ, ಬೆಲೆ ಎಷ್ಟು?

ಎರಡನೇ ಹಂತದ ಭಾರತ್​ ಬ್ರ್ಯಾಂಡ್ ರೀಟೇಲ್​ ಮಾರಾಟದಲ್ಲಿ ಗೋಧಿ ಹಿಟ್ಟು, ಅಕ್ಕಿ, ಜೊತೆಗೆ ಕಡಲೆಬೇಳೆ, ಹೆಸರುಬೇಳೆಯ ಮಾರಾಟವೂ ಆಗಲಿದೆ. ಕಿಲೂಗೆ 30 ರೂನಂತೆ ಐದು ಕಿಲೋ ಗೋಧಿ ಹಿಟ್ಟು ಪ್ಯಾಕೆಟ್​ಗಳನ್ನು ಮಾರಾಟ ಮಾಡುತ್ತಿದೆ. ಹಾಗೆಯೇ, ಕಿಲೋಗೆ 34 ರೂಗಳಂತೆ 10 ಕಿಲೋ ಅಕ್ಕಿ ಚೀಲ ವಿತರಿಸಲಾಗುತ್ತಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:47 pm, Wed, 6 November 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?