AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಿಂದ ಹೆಚ್ಚುವರಿ ಹೆಸರುಕಾಳು ಖರೀದಿಗೆ ಕೇಂದ್ರ ಸರ್ಕಾರ ಆದೇಶ: ಸಚಿವ ಜೋಶಿ

ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಾಂಗಾಮಿನಲ್ಲಿ ಈಗಾಗಲೇ 22215 ಮೆಟ್ರಿಕ್​ ಟನ್ ಹೆಸರುಕಾಳನ್ನು ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಿದ್ದು, ಕರ್ನಾಟಕದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತರು ಹೆಸರು ಕಾಳು ಬೆಳೆದಿದ್ದು ಹೆಚ್ಚುವರಿಯಾಗಿ ಸುಮಾರು 16,105 ಸಾವಿರ ಮೆಟ್ರಿಕ್ ಟನ್ ಹೆಸರು ಖರೀದಿಸಲು ಕೇಂದ್ರ ಸರ್ಕಾರ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಲು ಮುಂದಾಗಿದೆ.

ಕರ್ನಾಟಕದಿಂದ ಹೆಚ್ಚುವರಿ ಹೆಸರುಕಾಳು ಖರೀದಿಗೆ ಕೇಂದ್ರ ಸರ್ಕಾರ ಆದೇಶ: ಸಚಿವ ಜೋಶಿ
ಪ್ರಹ್ಲಾದ್​ ಜೋಶಿ
ವಿವೇಕ ಬಿರಾದಾರ
|

Updated on:Nov 06, 2024 | 1:48 PM

Share

ಹುಬ್ಬಳ್ಳಿ, ನವೆಂಬರ್ ​06: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಾಂಗಾಮಿನಲ್ಲಿ ಈಗಾಗಲೇ 22,215 ಮೆಟ್ರಿಕ್​ ಟನ್ ಹೆಸರುಕಾಳನ್ನು (Mung Bean) ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಿದ್ದು, ಕರ್ನಾಟಕದಿಂದ (Karnataka) ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಕಾಳು ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಆಹಾರ ಸಾರ್ವಜನಿಕ ಸರಬರಾಜು ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಹೇಳಿದರು.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ರಾಜ್ಯದ ರೈತರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಕಾಳು ಬೆಳೆದಿದ್ದು ಹೆಚ್ಚುವರಿಯಾಗಿ ಸುಮಾರು 16,105 ಸಾವಿರ ಮೆಟ್ರಿಕ್ ಟನ್ ಹೆಸರು ಖರೀದಿಸಲು ಕೇಂದ್ರ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಲು ಮುಂದಾಗಿದೆ. ಇದರಿಂದಾಗಿ ಒಟ್ಟಾರೆಯಾಗಿ 38.320 ಮೆಟ್ರಿಕ್ ಟನ್ ಖರೀದಿಸಲು ಕೇಂದ್ರ ಒಪ್ಪಿಗೆ ನೀಡಿದೆ. ರಾಜ್ಯದ ರೈತರ ಹಿತದೃಷ್ಟಿಯಿಂದ ಪ್ರಹ್ಲಾದ್​ ಜೋಶಿಯವರು ಈ ಕುರಿತು ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಸೌರಶಕ್ತಿ ಸಾಧಿಸುವ ಕನಸು ನನಸಾಗುತ್ತಿದೆ: ಅಂತರರಾಷ್ಟ್ರೀಯ ಸೌರ ಮೈತ್ರಿ ಸಭೆಯಲ್ಲಿ ಪ್ರಹ್ಲಾದ್ ಜೋಶಿ

ಹೆಸರುಕಾಳು ಖರೀದಿ ಪ್ರಮಾಣ ಎಷ್ಟು

ಈಗಾಗಲೇ ರಾಜ್ಯದಿಂದ ಒಟ್ಟು 22,215 ಮೆಟ್ರಿಕ್ ಟನ್ ಹೆಸರುಕಾಳು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗಿದೆ. ಹೆಚ್ಚುವರಿಯಾಗಿ ರೈತರು ಬೆಳೆದಿರುವ ಸುಮಾರು 16,105 ಮೆಟ್ರಿಕ್‌ಟನ್‌ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗುವ ಹೆಸರುಕಾಳಿಗೆ ಎಫ್​ಎಕ್ಯೂ ಗುಣಮಟ್ಟದ ಮಾನದಂಡದಲ್ಲಿ ಕೇಂದ್ರ ಸಂಬಂಧಿತ ಸಂಸ್ಥೆಗಳು ಖರೀದಿ ಪ್ರಕ್ರಿಯೆ ಆರಂಭಿಸಲಿವೆ ಎಂದರು.

ಭಾರತ್​ ಬ್ರ್ಯಾಂಡ್ ಎರಡನೇ ಹಂತ ಆರಂಭ

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಭಾರತ್​ ಬ್ರ್ಯಾಂಡ್ ಎರಡನೇ ಹಂತದ ಮಾರಾಟ​​ ಆರಂಭವಾಗಿದೆ. 2023ರ ಅಕ್ಟೋಬರ್​ನಲ್ಲಿ ಮೊದಲ ಹಂತ ಆರಂಭವಾಗಿತ್ತು. ಎರಡನೇ ಹಂತದ ಭಾರತ್​ ಬ್ರ್ಯಾಂಡ್ ರೀಟೇಲ್​ ಮಾರಾಟ ಯೋಜನೆಯಲ್ಲಿ ಕೇಂದ್ರ ಸರ್ಕಾರ ಆಹಾರ ನಿಗಮದಿಂದ 3.69 ಲಕ್ಷ ಟನ್​ ಗೋಧಿ ಮತ್ತು 2.91 ಲಕ್ಷ ಟನ್​ ಅಕ್ಕಿಯನ್ನು ವಿತರಿಸುತ್ತಿದೆ.

ಯಾವೆಲ್ಲ ವಸ್ತು ಮಾರಾಟ, ಬೆಲೆ ಎಷ್ಟು?

ಎರಡನೇ ಹಂತದ ಭಾರತ್​ ಬ್ರ್ಯಾಂಡ್ ರೀಟೇಲ್​ ಮಾರಾಟದಲ್ಲಿ ಗೋಧಿ ಹಿಟ್ಟು, ಅಕ್ಕಿ, ಜೊತೆಗೆ ಕಡಲೆಬೇಳೆ, ಹೆಸರುಬೇಳೆಯ ಮಾರಾಟವೂ ಆಗಲಿದೆ. ಕಿಲೂಗೆ 30 ರೂನಂತೆ ಐದು ಕಿಲೋ ಗೋಧಿ ಹಿಟ್ಟು ಪ್ಯಾಕೆಟ್​ಗಳನ್ನು ಮಾರಾಟ ಮಾಡುತ್ತಿದೆ. ಹಾಗೆಯೇ, ಕಿಲೋಗೆ 34 ರೂಗಳಂತೆ 10 ಕಿಲೋ ಅಕ್ಕಿ ಚೀಲ ವಿತರಿಸಲಾಗುತ್ತಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:47 pm, Wed, 6 November 24

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!