AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂದನ ಉಳಿಸು ಕರ್ನಾಟಕ’ ಟಿವಿ9 ಅಭಿಯಾನಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ

ಜನೀಶ್ ಉಳಿವಿಗಾಗಿ ಫೆಬ್ರವರಿ 15 ರಂದು ಸಂಸದರು ಬರೆದಿದ್ದ ಪತ್ರ ಪ್ರಧಾನಿಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ತಲುಪಿತ್ತು. ಹೀಗಾಗಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಹಣ ನೀಡಲು ಸಕಾರಾತ್ಮಕ ಸ್ಪಂದನೆ ಸಿಕ್ಕಿದ್ದು, ಮಗುವಿನ ಸಂಪೂರ್ಣ ವಿವರ, ಕಾಯಿಲೆಯ ವಿವರ ಮತ್ತು ಕಾಯಿಲೆಗೆ ತಗಲುವ ವೆಚ್ಚದ ದಾಖಲೆಗಳನ್ನು ಒದಗಿಸಲು ಸೂಚನೆ ನೀಡಿದೆ.

‘ಕಂದನ ಉಳಿಸು ಕರ್ನಾಟಕ’ ಟಿವಿ9 ಅಭಿಯಾನಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ
ಎಸ್ಎಂಎ ಕಾಯಿಲೆಯಿಂದ ಬಳಲುತ್ತಿರುವ ಮಗು ಜನೀಶ್
sandhya thejappa
| Updated By: ರಾಜೇಶ್ ದುಗ್ಗುಮನೆ|

Updated on: Apr 07, 2021 | 4:21 PM

Share

ಬೆಂಗಳೂರು: ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ (ಎಸ್ಎಂಎ) ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ಜನೀಶ್ ಉಳಿವಿಗಾಗಿ ನಡೆಸುತ್ತಿರುವ ಟಿವಿ 9 ಅಭಿಯಾನಕ್ಕೆ ಪ್ರಧಾನಿ ಕಾರ್ಯಾಲಯ ಸ್ಪಂದಿಸಿದೆ. ಮಗುವಿನ ಚಿಕಿತ್ಸೆಗಾಗಿ ಅನುದಾನ ಕೋರಿ ಸಂಸದ ಜಿ.ಸಿ.ಚಂದ್ರಶೇಖರ್​​ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಚಂದ್ರಶೇಖರ್ ಮನವಿಗೆ ಸ್ಪಂದಿಸಿರುವ ಪ್ರಧಾನಿಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಕಾರ್ಯಲಯ, ಮೂರು ತಿಂಗಳ ಒಳಗೆ ಸಂಪೂರ್ಣ ದಾಖಲೆಗಳನ್ನು ಒದಗಿಸಿ ಎಂದು ತಿಳಿಸಿದ್ದಾರೆ. ಈ ಮೂಲಕ ಸಹಾಯ ದೊರಕುವ ಭರವಸೆ ಸಿಕ್ಕಂತಾಗಿದೆ. 

11 ತಿಂಗಳ ಮಗು ಜನೀಶ್ ಉಳಿವಿಗಾಗಿ ಫೆಬ್ರವರಿ 15 ರಂದು ಚಂದ್ರಶೇಖರ್ ಬರೆದಿದ್ದ ಪತ್ರ ಪ್ರಧಾನಿಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ತಲುಪಿತ್ತು. ರಾಷ್ಟ್ರೀಯ ಪರಿಹಾರ ನಿಧಿಯಿಂದ ಈ ಪತ್ರಕ್ಕೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದ್ದು, ಮಗುವಿನ ಸಂಪೂರ್ಣ ವಿವರ, ಕಾಯಿಲೆಯ ವಿವರ ಮತ್ತು ಕಾಯಿಲೆಗೆ ತಗಲುವ ವೆಚ್ಚದ ದಾಖಲೆಗಳನ್ನು ಒದಗಿಸಲು ಸೂಚನೆ ನೀಡಿದೆ.

ಫೆಬ್ರವರಿ 5 ರಿಂದ ಟಿವಿ9 ಕನ್ನಡ ವಾಹಿನಿ ನಿರಂತರವಾಗಿ ‘ಕಂದನ ಉಳಿಸು ಕರ್ನಾಟಕ’ ಅಭಿಯಾನವನ್ನು ನಡೆಸಿತ್ತು. ಇದಕ್ಕೆ ಅತ್ಯುತ್ತಮ ಸ್ಪಂದನೆ ಕೂಡ ದೊರಕ್ಕಿತ್ತು. 11 ತಿಂಗಳ ಪುಟ್ಟ ಮಗುವನ್ನು ಕಾಡುತ್ತಿರುವ ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ (Spinal muscular atrophy) ಸಮಸ್ಯೆಯನ್ನು ಬಗೆಹರಿಸಲು 16 ಕೋಟಿ ರೂ. ಮೊತ್ತದ ಇಂಜೆಕ್ಷನ್ ನೀಡಬೇಕಿದ್ದು, ಈ ದುಬಾರಿ ಚುಚ್ಚುಮದ್ದನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಿದೆ.

ಲಕ್ಷಾಂತರ ಮಕ್ಕಳಲ್ಲಿ ಒಬ್ಬರಿಗೆ ಕಾಡುವ ಈ ಸಮಸ್ಯೆಗೆ ತುತ್ತಾಗಿರುವ ಜನೀಶ್ ಎಂಬ ಪುಟ್ಟ ಮಗುವನ್ನು ನೋಡಿ ಕನ್ನಡಿಗರ ಕಣ್ಣಾಲಿ ಒದ್ದೆಯಾಗಿದ್ದು, ಸಹೃದಯರು ಈಗಾಗಲೇ ಸಹಾಯ ಹಸ್ತ ಚಾಚಿದ್ದಾರೆ.

ಇದನ್ನೂ ಓದಿ

ಅಜ್ಜಂಪುರ ತಾಲೂಕಿನ ಶಿವಾನಂದ ಆಶ್ರಮ.. ಇಲ್ಲೀಗ ಭಗವದ್ಗೀತೆ ಪುಸ್ತಕ ಮುದ್ರಣ ಚಟುವಟಿಕೆ ಬಂದ್

ಕುಡಿಯಲು ಕಲುಷಿತ ಕಾಳಿ ನದಿ ನೀರು; ಬೃಹತ್ ವೆಚ್ಚದ ಯೋಜನೆಗೆ ಸಾರ್ವಜನಿಕರ ವಿರೋಧ

(central government responded to Kandana Ulisu Karnataka Campaign)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ