AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

475 ಕೋಟಿ ರೂ. ನರೇಗಾ ಹಣವನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ: ಸಚಿವ ಕೃಷ್ಣ ಬೈರೇಗೌಡ

ಕೇಂದ್ರ ಬರ ಅಧ್ಯಯನ ತಂಡಕ್ಕೆ ನಾವು ನೀಡಿದ ವರದಿ ಬರದ ಪರಿಸ್ಥಿತಿ ವಸ್ತುಸ್ಥಿತಿಯಿಂದ ಕೂಡಿದೆ. ಬರುವ ದಿನಗಳಲ್ಲಿ ಹಿಂಗಾರು ಪರಿಸ್ಥಿತಿಗೂ ತೊಂದರೆ ಆಗಬಹುದು. ಕುಡಿಯುವ ನೀರಿಗೂ ತೊಂದರೆ ಆಗಬಹುದು ಅಂತ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳು ಸಹ ನಮ್ಮ ವರದಿ ವಸ್ಥು ಸ್ಥಿತಿಯಿಂದ ಕೂಡಿದೆ ಅಂತ ಹೇಳಿದ್ದಾರೆ ಎಂದು ಸಚಿವ ಕೇಷ್ಣ ಬೈರೇಗೌಡ ತಿಳಿಸಿದರು.

475 ಕೋಟಿ ರೂ. ನರೇಗಾ ಹಣವನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ: ಸಚಿವ ಕೃಷ್ಣ ಬೈರೇಗೌಡ
ಸಚಿವ ಕೃಷ್ಣ ಬೈರೇಗೌಡ
Follow us
Malatesh Jaggin
| Updated By: ವಿವೇಕ ಬಿರಾದಾರ

Updated on:Oct 09, 2023 | 1:06 PM

ಬೆಂಗಳೂರು ಅ.09: ಆಗಸ್ಟ್​, ಸೆಪ್ಟೆಂಬರ್​ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆ (Rain) ಆಗಿದೆ. ಜೂನ್​ ತಿಂಗಳಿನಲ್ಲಿ ಶೇಕಡಾ 56ರಷ್ಟು ಮಳೆಯಾಗಿದೆ. ಈ ವಿಚಾರವವನ್ನು ಕೇಂದ್ರ ಸರ್ಕಾರ (Central Government) ಗಂಭೀರವಾಗಿ ಪರಿಗಣಿಸಬೇಕು. 195 ತಾಲೂಕುಗಳನ್ನು ಬರಪೀಡಿತ (Drought) ಎಂದು ಘೋಷಣೆ ಮಾಡಲಾಗಿದೆ. ಇನ್ನೂ 41 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಆಗಿಲ್ಲ. 21 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ತೀರ್ಮಾನ ಮಾಡಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಉದ್ಯೋಗಕ್ಕೆ ಬರುವವರ ಕೂಲಿ ಬಾಕಿ ಇದೆ. ಹೀಗಾಗಿ ಕೇಂದ್ರ ಸರ್ಕಾರ 475 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ (Krishna Byregowda) ಆಗ್ರಹಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬರ ಅಧ್ಯಯನಕ್ಕೆ ಬಂದಿದ್ದ ಕೇಂದ್ರ ಸರ್ಕಾರದ ತಂಡ ರಾಜ್ಯದ್ಯಂತ ಪ್ರವಾಸ ಮಾಡಿದ್ದಾರೆ. ಬರಗಾಲ, ನರೇಗಾ ಕಾಮಗಾರಿ ಕುರಿತಂತೆ ಎಲ್ಲವನ್ನೂ ಗಮನಿಸಿದ್ದಾರೆ. ಕೆಂದ್ರದ ಗೃಹ ಸಚಿವರು ಮತ್ತು ಕೃಷಿ ಸಚಿವರನ್ನು ಭೇಟಿ ಮಾಡಿ ವರದಿ ಸಲ್ಲಿಸಲು ಸಮಯ ಕೇಳಿದ್ದೇವೆ. ನಮ್ಮ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಗದಗ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಹೇಳೋರಿಲ್ಲ, ಕೇಳೋರಿಲ್ಲ! ಮತ್ತೊಂದೆಡೆ ಭೀಕರ ಬರಗಾಲದಿಂದ ಅನ್ನದಾತರು ವಿಲವಿಲ!

ಇನ್ನು ಅಧ್ಯಯನ ತಂಡಕ್ಕೆ ನಾವು ನೀಡಿದ ವರದಿ ಬರದ ಪರಿಸ್ಥಿತಿ ವಸ್ತುಸ್ಥಿತಿಯಿಂದ ಕೂಡಿದೆ. ಬರುವ ದಿನಗಳಲ್ಲಿ ಹಿಂಗಾರು ಪರಿಸ್ಥಿತಿಗೂ ತೊಂದರೆ ಆಗಬಹುದು. ಕುಡಿಯುವ ನೀರಿಗೂ ತೊಂದರೆ ಆಗಬಹುದು ಅಂತ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳು ಸಹ ನಮ್ಮ ವರದಿ ವಸ್ಥು ಸ್ಥಿತಿಯಿಂದ ಕೂಡಿದೆ ಅಂತ ಹೇಳಿದ್ದಾರೆ. ನಮ್ಮಿಂದ ಕೆಲವು ಅಂಕಿ ಅಂಶಗಳನ್ನು ಕೇಳಿದ್ದಾರೆ. ಅವುಗಳನ್ನು ಒದಗಿಸಿ ಕೊಡಲಾಗುತ್ತೆ. ಅಧ್ಯಯನ ತಂಡ ಮುಂದಿನ ಒಂದು ವಾರದ ಒಳಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರದ ಅಧಿಕಾರಿಗಳ ತಂಡ 13 ಜಿಲ್ಲೆಗಳಲ್ಲಿನ ಬರ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದೆ. ದೆಹಲಿಗೆ ವಾಪಸ್ ತೆರಳುವ ಮುನ್ನ ಕೇಂದ್ರದ ಅಧಿಕಾರಿಗಳು ರಾಜ್ಯ ಸರ್ಕಾರದ ಜೊತೆಗೆ ಸಭೆ ನಡೆಸಿದರು. ಸಭೆಯಲ್ಲಿ ನಾನು (ಕೃಷ್ಣಾ ಬೈರೆಗೌಡ), ಕೃಷಿ ಸಚಿವ ಚಲುವರಾಯಸ್ವಾಮಿ, ಸಹಕಾರ ಸಚಿವ ರಾಜಣ್ಣ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿಸಿದರು.

ಮಾನವ ದಿನಗಳನ್ನು ಹೆಚ್ಚಿಸುವಂತೆ ಕೇಂದ್ರಕ್ಕೆ ಪ್ರಿಯಾಂಕ್​ ಖರ್ಗೆ ಪತ್ರ

ರಾಜ್ಯದಲ್ಲಿ ತೀರ್ವ ಬರಗಾಲ ಆವರಿಸಿದ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು. 1300 ಲಕ್ಷ ಮಾನವ ದಿನಗಳನ್ನು 1800 ಲಕ್ಷ ಮಾನವ ದಿನಗಳಿಗೆ ಏರಿಕೆ ಮಾಡಬೇಕೆಂದು ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ ರಾಜ್​ ಇಲಾಖೆ ಸಚಿವ ಪ್ರಿಯಾಂಕ್​ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್​​ ಸಿಂಗ್​ ಅವರಿಗೆ ಪತ್ರ ಬರೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Mon, 9 October 23

ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​