AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊವಿಡ್ 3ನೇ ಅಲೆಯ ತಯಾರಿ ಮಾಡಿಕೊಳ್ಳಿ: ಕೇಂದ್ರ ಸಚಿವ ಸದಾನಂದಗೌಡ

ಕೊವಿಡ್ ಲಸಿಕೆಗೆ ರಾಜ್ಯ ಸರ್ಕಾರ ಗ್ಲೋಬಲ್ ಟೆಂಡರ್ ಕರೆದಿದ್ದ ವಿಚಾರವಾಗಿ ಮಾಹಿತಿ ನೀಡಿದ ಕೇಂದ್ರ ಸಚಿವ ಸದಾನಂದಗೌಡ, ರಾಜ್ಯ ಸರ್ಕಾರ ಕರೆದಿದ್ದ ಟೆಂಡರ್​ಗೆ ಇಬ್ಬರು ಸ್ಪಂದಿಸಿ ಕೋಟ್ ಮಾಡಿದ್ದರು. ಆದರೆ ಇಬ್ಬರು ಕೂಡ ರಾಜ್ಯ ನೀಡಿದ್ದ ಅರ್ಹತೆಯಲ್ಲಿ ಅನರ್ಹರಾಗಿದ್ದಾರೆ ಎಂದರು.

ರಾಜ್ಯದಲ್ಲಿ ಕೊವಿಡ್ 3ನೇ ಅಲೆಯ ತಯಾರಿ ಮಾಡಿಕೊಳ್ಳಿ: ಕೇಂದ್ರ ಸಚಿವ ಸದಾನಂದಗೌಡ
ಕೇಂದ್ರ ಸಚಿವ ಡಿ ವಿ ಸದಾನಂದಗೌಡ
guruganesh bhat
|

Updated on: May 29, 2021 | 6:20 PM

Share

ಬೆಂಗಳೂರು: ರಾಜ್ಯ ಸರ್ಕಾರ ಕೊವಿಡ್ 3ನೇ ಅಲೆ ತಡೆಯಲು ಅಗತ್ಯವಾದ ಪ್ರಮಾಣದಲ್ಲಿ ರೆಮ್​ಡಿಸಿವಿರ್ ಔಷಧವನ್ನು ಈಗಿನಿಂದಲೇ ಸಂಗ್ರಹಿಸಬೇಕು. ರಾಜ್ಯಕ್ಕೆ ಬೇಕಿರುವ ಎಲ್ಲ ರೀತಿಯ ಔಷಧಗಳನ್ನೂ ಕೇಂದ್ರದಿಂದ ವಿತರಣೆ ಮಾಡಿದ್ದೇವೆ. ಕೊವಿಡ್ 2 ಅಲೆಯ ಗಂಭೀರತೆಯನ್ನು ಅರಿತು 3ನೇ ಅಲೆಯ ತಯಾರಿ ಮಾಡಿಕೊಳ್ಳಬೇಕು. ಕೇಂದ್ರ ಹಂಚಿಕೆ ಮಾಡಿರುವ ರೆಮ್​ಡಿಸಿವಿರ್​ನ್ನು ಸಂಗ್ರಹಿಸಿ ಇಡಬೇಕು ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ  ಸೂಚನೆ ನೀಡಿದರು.

ರೆಮಿಡಿಸಿವಿರ್ ರೀತಿಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಆಂಪಟೋರಿಸನ್ ಪೂರೈಕೆ ಸಾಧ್ಯವಾಗುವುದಿಲ್ಲ. ಫಂಗಸ್​ಗೆ ತುತ್ತಾದವರ ಸಂಖ್ಯೆಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಕಳಿಸಬೇಕು. ಅದರ ಆಧಾರದಲ್ಲಿ ಔಷಧ ಬಿಡುಗಡೆ ಮಾಡಲಾಗುತ್ತದೆ. ಬ್ಲ್ಯಾಕ್​ ಫಂಗಸ್​ ಕೇಸ್​​ನಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಔಷಧ ಉತ್ಪಾದನೆಗೆ ಐದು ಹೊಸ ಲೈಸೆನ್ಸ್ ನೀಡಲಾಗಿದೆ. ನಿನ್ನೆ 10,600ರಷ್ಟು ಆಂಪಟೋರಿಸನ್ ಔಷಧವನ್ನು ರಾಜ್ಯಕ್ಕೆ ವಿತರಿಸಲಾಗಿದೆ.ಮೂರು ದಿನಗಳಲ್ಲಿ ಎಲ್ಲಾ ಬೇಡಿಕೆಯನ್ನು ಪೂರೈಸಲಾಗುವುದು ಎಂದು ಅವರು ತಿಳಿಸಿದರು.

ಕೊವಿಡ್ ಲಸಿಕೆಗೆ ರಾಜ್ಯ ಸರ್ಕಾರ ಗ್ಲೋಬಲ್ ಟೆಂಡರ್ ಕರೆದಿದ್ದ ವಿಚಾರವಾಗಿ ಮಾಹಿತಿ ನೀಡಿದ ಕೇಂದ್ರ ಸಚಿವ ಸದಾನಂದಗೌಡ, ರಾಜ್ಯ ಸರ್ಕಾರ ಕರೆದಿದ್ದ ಟೆಂಡರ್​ಗೆ ಇಬ್ಬರು ಸ್ಪಂದಿಸಿ ಕೋಟ್ ಮಾಡಿದ್ದರು. ಆದರೆ ಇಬ್ಬರು ಕೂಡ ರಾಜ್ಯ ನೀಡಿದ್ದ ಅರ್ಹತೆಯಲ್ಲಿ ಅನರ್ಹರಾಗಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚು ಲಸಿಕೆ ನೀಡುವ ವಿಚಾರದ ಬಗ್ಗೆ ಸೋಮವಾರ ಉನ್ನತ ಮಟ್ಟದ ಸಮಿತಿಯಲ್ಲಿ ಮಾತಾಡುತ್ತೇನೆ ಎಂದರು.

ಇದನ್ನೂ ಓದಿ: ಕೊವಿಡ್ ಲಸಿಕೆಗೆ ಕಮಿಷನ್ ಆರೋಪ: ಕಮಲ್ ಪಂತ್​ಗೆ ದೂರು; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ರವಿಸುಬ್ರಹ್ಮಣ್ಯ

ಕೊವಿಡ್ ಕಡಿಮೆ ಆಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ; ಸಿಎಂ ಯಡಿಯೂರಪ್ಪ ಖಡಕ್ ಸೂಚನೆ

( Central Minister DV Sadananda Gowda directs make preferation to Covid 3rd wave in Karnataka)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?