AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತೆ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದ ಗೌಡ

ಬಿಜೆಪಿ ಯುವ ಮೋರ್ಚಾ ಮುಖಂಡ  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಜೆಪಿಯದ್ದೇ ಇದ್ದು ಕೂಡ, ಪ್ರವೀಣ್ ಹತ್ಯೆ ಖಂಡನೀಯವಾಗಿದೆ ಎಂದು  ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭದ್ರತೆ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದ ಗೌಡ
ಕೇಂದ್ರ ಸಚಿವ ಸದಾನಂದ ಗೌಡ
TV9 Web
| Edited By: |

Updated on:Aug 01, 2022 | 3:54 PM

Share

ದಕ್ಷಿಣ ಕನ್ನಡ : ಬಿಜೆಪಿ (BJP) ಯುವ ಮೋರ್ಚಾ ಮುಖಂಡ  ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಜೆಪಿಯದ್ದೇ ಇದ್ದು ಕೂಡ, ಪ್ರವೀಣ್ ಹತ್ಯೆ ಖಂಡನೀಯವಾಗಿದೆ ಎಂದು ಕೇಂದ್ರ ಮಾಜಿ ಸಚಿವ ಡಿವಿ ಸದಾನಂದಗೌಡ (DV Sadananda Gowda) ಮಂಗಳೂರಿನಲ್ಲಿ (Mangalore) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಯಾಕೆ ದಿಟ್ಟ ಹೆಜ್ಜೆ ಇಡಲು ಹಿಂದೇಟು ಹಾಕುತ್ತಿದೆ ಅನ್ನೋ ಪ್ರಶ್ನೆ  ಕಾರ್ಯಕರ್ತರಲ್ಲಿ ಇದೆ. ಸರ್ಕಾರ ದಿಟ್ಟ ಹೆಜ್ಜೆಯನ್ನು ಈಗಾಗಲೇ ಇಡಬೇಕಿತ್ತು ಎಂದು ಹೇಳಿದ್ದಾರೆ.

ಹರ್ಷ ಕೊಲೆ ಹಾಗೂ ಹಿಂದೆ ನಡೆದ ಕೊಲೆ ಸಂದರ್ಭದಲ್ಲಿ ದಿಟ್ಟ ಹೆಜ್ಜೆ ತಗೋಬೇಕಿತ್ತು. ಅದರಲ್ಲಿ ರಾಜ್ಯ ಸರ್ಕಾರ ಎಡವಿದೆ ಅನ್ನೋದನ್ನ ಒಪ್ಪಿಕೊಳ್ಳುತ್ತೇನೆ. ಪೊಲೀಸ್ ಇಲಾಖೆ ದುರ್ಬಲವಾಗುತ್ತಿದೆ. ಯಾರು ಹೆದರದ ವಾತಾವರಣ ಸೃಷ್ಟಿಯಾಗಿರೋದು ದುರ್ದೈವ. ಪ್ರವೀಣ್ ಪತ್ನಿ ಎರಡು ತಿಂಗಳಿಂದ ಬೆದರಿಕೆ ಬರ್ತಾ ಇತ್ತು ಅಂತಾ ಹೇಳಿದ್ದಾರೆ ಎಂದು ಹೇಳಿದರು.

ಅದನ್ನು ಪೊಲೀಸರಿಗೆ ಹೇಳಿದರೂ ಪ್ರಯೋಜನವಾಗಿಲ್ಲ ಎಂದಿದ್ದಾರೆ. ಹೀಗೆನಾದರೂ ಆಗಿದ್ದರೇ ಅದು ನಿಜಕ್ಕೂ ಖಂಡನೀಯವಾದದ್ದು. ಶೀಘ್ರವಾಗಿ ಆರೋಪಿಗಳ ಪತ್ತೆಯಾಗಬೇಕು. ಮಸೂದ್ ಮನೆಗೆ  ಮುಖ್ಯಮಂತ್ರಿ  ಭೇಟಿ ನೀಡಿಲ್ಲ ಅನ್ನೋ ವಿಚಾರವಾಗಿ ಮಾತನಾಡಿದ ಅವರು ಯಾರೆ ಇದ್ದರೂ ಅವರ ಮನೆಗೆ ಹೋಗಬೇಕು. ಜವಾಬ್ದಾರಿ ಇದ್ದವರು ಆ ಕೆಲಸ ಮಾಡಬೇಕು ಎಂದು ಚಾಟಿ ಬೀಸಿದ್ದಾರೆ.

ಕಾಂಗ್ರೆಸ್ ಇದ್ದಾಗ ನಾವು ಸಾಕಷ್ಟು ಪ್ರತಿಭಟನೆ ನಡೆಸಿದ್ದೇವೆ. ಆಗ ಹಿಂದೂ ಸಮಾಜದವರಿಗೆ ನಮ್ಮ ಸರ್ಕಾರ ಬಂದರೆ ರಕ್ಷಣೆ ಸಿಗತ್ತೆ ಅನ್ನೋ ಭಾವನೆ ಇತ್ತು. ಅದು ಕಡಿಮೆ ಆಗಿದೆ ಅನ್ನೋದಕ್ಕೆ ವ್ಯಕ್ತವಾಗುತ್ತಿರುವ ವಿರೋಧ ಸಾಕ್ಷಿಯಾಗಿದೆ ಎಂದರು.

ತೇಜಸ್ವಿ ಸೂರ್ಯ ಹೇಳಿಕೆ ವಿಚಾರ ಮಾತನಾಡಿದ ಅವರು ಒಬ್ಬೊಬ್ಬರಿಗೆ ರಕ್ಷಣೆ ಕೊಡಲು ಸಾಧ್ಯವಿಲ್ಲ. ಆದರೆ ಸರ್ಕಾರ ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎಂದು ತಿಳಿಸಿದರು.

Published On - 2:34 pm, Sat, 30 July 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​