AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಆಗಮಿಸಿದ ಕೇಂದ್ರದ ಅಧ್ಯಯನ ತಂಡ: ನಾಳೆ 3 ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ

ಸೆಪ್ಟೆಂಬರ್, ಅಕ್ಟೋಬರ್​ ತಿಂಗಳಲ್ಲಿ ರಾಜ್ಯದಲ್ಲಿ ಎದುರಾದ ಪ್ರವಾಹದಿಂದ ಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ ಅದರ ಅಧ್ಯಯನ ನಡೆಸಲು ಇಂದು ಕೇಂದ್ರದ ಅಧ್ಯಯನ ತಂಡ ಭೇಟಿಕೊಟ್ಟಿದೆ. 3 ದಿನಗಳ ಕಾಲ ರಾಜ್ಯದಲ್ಲಿ ಕೇಂದ್ರ ತಂಡದಿಂದ ಅಧ್ಯಯನ ನಡೆಯಲಿದೆ.

ರಾಜ್ಯಕ್ಕೆ ಆಗಮಿಸಿದ ಕೇಂದ್ರದ ಅಧ್ಯಯನ ತಂಡ: ನಾಳೆ 3 ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ
ರಾಜ್ಯಕ್ಕೆ ಆಗಮಿಸಿದ ಕೇಂದ್ರದ ಅಧ್ಯಯನ ತಂಡ
KUSHAL V
|

Updated on:Dec 13, 2020 | 7:39 PM

Share

ಬೆಂಗಳೂರು: ಸೆಪ್ಟೆಂಬರ್, ಅಕ್ಟೋಬರ್​ ತಿಂಗಳಲ್ಲಿ ರಾಜ್ಯದಲ್ಲಿ ಎದುರಾದ ಪ್ರವಾಹದಿಂದ ಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ ಅದರ ಅಧ್ಯಯನ ನಡೆಸಲು ಇಂದು ಕೇಂದ್ರದ ಅಧ್ಯಯನ ತಂಡ ಭೇಟಿಕೊಟ್ಟಿದೆ. 3 ದಿನಗಳ ಕಾಲ ರಾಜ್ಯದಲ್ಲಿ ಕೇಂದ್ರ ತಂಡದಿಂದ ಅಧ್ಯಯನ ನಡೆಯಲಿದೆ.

ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ರಮೇಶ್ ಕುಮಾರ್‌ ಗಂಠಿ ನೇತೃತ್ವದ 6 ಅಧಿಕಾರಿಗಳ ತಂಡ ನೆರೆಯಿಂದ ಹಾನಿಯಾದ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಜಿಲ್ಲೆಗಳಿಗೆ ತೆರಳುವ ಮುನ್ನ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದರು. ಈ ವೇಳೆ, ಕೇಂದ್ರ ಅಧ್ಯಯನ ತಂಡಕ್ಕೆ ಬಿಎಸ್​ವೈ ಪ್ರವಾಹದಿಂದ ಉಂಟಾದ ಹಾನಿಯ ವಿವರಣೆ ನೀಡಿದರು.

ನಾಳೆ ರಾಜ್ಯದ 3 ಜಿಲ್ಲೆಗಳಲ್ಲಿ ಕೇಂದ್ರದ ತಂಡ ಪ್ರವಾಸ ಕೈಗೊಳ್ಳಲಿದ್ದು ಸೋಮವಾರ ಮೊದಲ ತಂಡ ಕಲಬುರಗಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ. ಎರಡನೇ ತಂಡ ವಿಜಯನಗರ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಿದ್ದು ಮೂರನೇ ತಂಡ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದೆ. ಮಂಗಳವಾರ ಮೂರೂ ತಂಡ ಬೆಂಗಳೂರಿಗೆ ಆಗಮಿಸಿ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸುವವು ಎಂದು ತಿಳಿದುಬಂದಿದೆ.

Published On - 7:35 pm, Sun, 13 December 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ