AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ ಕರ್ನಾಟಕದ ಪರವಿದೆ: ಸಂಸದ ತೇಜಸ್ವಿ ಸೂರ್ಯ

ಇಂದು ಸಿಎಂ ಸಿದ್ದರಾಮಯ್ಯ ಸರ್ವಪಕ್ಷ ಸಭೆ ಮಾಡಲಾಗಿದೆ. ಕಾವೇರಿ ವಿಚಾರವಾಗಿಯೂ ಚರ್ಚಿಸಲಾಗಿದೆ. ಈ ಕುರಿತಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದು, ಬೆಂಗಳೂರು ಕಾವೇರಿ ನೀರಿನ ಮೇಲೆ ಅವಲಂಬನೆ ಆಗಿದೆ. ಕಾವೇರಿ ನೀರು ವಿಚಾರದಲ್ಲಿ ಕೇಂದ್ರ ಬಿಜೆಪಿ ಕರ್ನಾಟಕದ ಪರ ಇದೆ ಎಂದು ಹೇಳಿದ್ದಾರೆ.

ಕಿರಣ್​ ಹನಿಯಡ್ಕ
| Edited By: |

Updated on:Aug 23, 2023 | 3:08 PM

Share

ಬೆಂಗಳೂರು, ಆಗಸ್ಟ್​ 23: ಬೆಂಗಳೂರು ಕಾವೇರಿ ನೀರಿನ ಮೇಲೆ ಅವಲಂಬನೆ ಆಗಿದೆ. ಕಾವೇರಿ ನೀರು ವಿಚಾರದಲ್ಲಿ ಕೇಂದ್ರ ಬಿಜೆಪಿ ಕರ್ನಾಟಕದ ಪರ ಇದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮವದವರೊಂದಿಗೆ ಮಾತನಾಡಿದ ಅವರು, ಕಾವೇರಿ ಬೋರ್ಡ್ ಮುಂದೆ ರಾಜ್ಯ ಸರ್ಕಾರ ಸರಿಯಾಗಿ ವಾದ ಮಾಡಿಲ್ಲ. ಇದಕ್ಕೆ ನಮ್ಮ ವಿರೋಧ ಮಾಡಿದ್ದೇವೆ. ಆದರೆ ನೆಲ, ಜಲ ವಿಷಯದಲ್ಲಿ ನಾವು ಸರ್ಕಾರದ ಜೊತೆ ಇರುತ್ತೇವೆ ಅಂತ ಹೇಳಿದ್ದೇವೆ ಎಂದರು.

ಶುಕ್ರವಾರ ಅರ್ಜಿ ವಿಚಾರ‌ಣೆಗೆ ಬಂದಾಗ ಸಮರ್ಥ ವಾದ ಮಂಡಿಸಬೇಕು. ತಮಿಳುನಾಡು ಹೆಚ್ಚು ನೀರು ಸಂಗ್ರಹ ಮಾಡಿದ್ದ ಬಗ್ಗೆ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಬೇಕು. ಕರ್ನಾಟಕದಲ್ಲಿ ಮುಂಗಾರು ಮುಗಿದು ಹೋಗಿದ್ದು, 42% ಮಳೆ ಕೊರತೆ ಆಗಿದ್ದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು ಅಂತ ತಿಳಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಕಾವೇರಿ ಕಿಚ್ಚು.. ಅನ್ನದಾತರ ಸಿಟ್ಟು: ಸರ್ವಪಕ್ಷ ಸಭೆ ಬಳಿಕ ವಿರೋಧ ಪಕ್ಷಗಳ ನಾಯಕರು ಹೇಳಿದ್ದೇನು?

ಬಿಜೆಪಿ ಸರ್ಕಾರ ಕರ್ನಾಟಕದ ಪರವಾಗಿಯೇ ಹಿಂದೆಲ್ಲಾ ನಿಲುವು ತಳೆದಿದೆ. ಈಗ ಸುಪ್ರೀಂಕೋರ್ಟ್​ಗೆ ಮನವರಿಕೆ ಮಾಡುವುದು ಕರ್ನಾಟಕದ ಪ್ರಾಥಮಿಕ ಕೆಲಸವಾಗಿದೆ ಎಂದರು. ಮಹದಾಯಿ, ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರ ಕೋರ್ಟ್​​ನಲ್ಲಿ ಇದೆ. ಇದನ್ನು ಕೋರ್ಟ್ ವ್ಯಾಪ್ತಿಯಲ್ಲಿ ಇತ್ಯರ್ಥ ಮಾಡಿಕೊಳ್ಳಲು‌ ಸಲಹೆ ಕೊಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾವೇರಿ ಪ್ರತಿಭಟನೆ, ಸೋತು ಸುಣ್ಣವಾಗಿರುವ ಬಿಜೆಪಿಯಿಂದ ಭಾವನಾತ್ಮಕ ರಾಜಕೀಯ; ಎಂಬಿ ಪಾಟೀಲ್ ಕಿಡಿ

ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಬಳಿ ನಿಯೋಗ ಹೋಗುವುದು ರಾಜಕೀಯ ವಿಚಾರ. ಮೊದಲು ಕೋರ್ಟ್​ನಲ್ಲಿ ಪ್ರಬಲವಾಗಿ ವಾದ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ಜಲ ವಿವಾದಗಳ ಶಾಶ್ವತ ಪರಿಹಾರಕ್ಕೆ ಮನವಿ: ಮಂಡ್ಯ ಸಂಸದೆ ಸುಮಲತಾ

ವಿಧಾನಸೌಧದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಮಾತನಾಡಿದ್ದು, ರಾಜ್ಯದ ಜಲ ವಿವಾದಗಳ ಶಾಶ್ವತ ಪರಿಹಾರಕ್ಕೆ ಮನವಿ ಮಾಡಿದ್ದೇವೆ. ಸಮಸ್ಯೆಯನ್ನು ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಿದ್ದೇವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ಮುಂದೆ ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಲಾಗಿದೆ ಎಂದು ಹೇಳಿದರು.

ಇಡಿ ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಸಂಸದೆ ಸುಮಲತಾ

ಚಂದ್ರಯಾನ 3 ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ನಿಜವಾಗಿಯೂ ಇವತ್ತು ಐತಿಹಾಸಿಕ ದಿನ. ಹೆಮ್ಮೆಯ ದಿನ. ಈ ದಿನಕ್ಕೊಸ್ಕರ ಇಡಿ ದೇಶ‌‌ ಕಾಯುತ್ತಿದೆ. ಚಂದ್ರಯಾನ 3 ಯಶಸ್ವಿಯಾಗಲಿ‌ ಎಂದು ಇಡಿ ಇಸ್ರೋ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:07 pm, Wed, 23 August 23

Follow Us
Kiran Haniyadka
Kiran Haniyadka
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ