AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET-KSET Free Coaching: ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿ, ಕೆಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ; ಎಲ್ಲಿ ಎಂಬ ವಿವರ ಇಲ್ಲಿದೆ

ಇಂದಿನಿಂದ ‘ಜ್ಞಾನ-ವಿಜ್ಞಾನ ತರಂಗ’ ಕಾರ್ಯಕ್ರಮ ವೀಕ್ಷಣೆಗೆ ಲಭ್ಯವಿದ್ದು, ಪ್ರತಿ ದಿನ ಸಂಜೆ 5ರಿಂದ ರಾತ್ರಿ 8 ಗಂಟೆವರೆಗೆ ನೇರ ಪ್ರಸಾರ ಮಾಡಲಾಗುವುದು. 100ಕ್ಕೂ ಹೆಚ್ಚು ವಿಷಯ ತಜ್ಞರು ತರಬೇತಿ ನೀಡಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

CET-KSET Free Coaching: ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿ, ಕೆಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ; ಎಲ್ಲಿ ಎಂಬ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 14, 2021 | 8:09 PM

Share

ಬೆಂಗಳೂರು: ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಖಾಸಗಿ ಸಂಸ್ಥೆಯೊಂದರ ಸಹಯೋಗದಲ್ಲಿ ‘ಜ್ಞಾನ-ವಿಜ್ಞಾನ ತರಂಗ’ ಎಂಬ ಆನ್​ಲೈನ್​ ಕ್ಲಾಸ್ ಯೋಜನೆ ರೂಪಿಸಿದೆ. ವಿಜ್ಞಾನ ವಿದ್ಯಾರ್ಥಿಗಳು ಸಿಇಟಿಗೆ ತಯಾರಾಗಲು ಈ ಯೋಜನೆ ನೆರವಾಗಲಿದ್ದು ಈಗಾಗಲೇ 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು https://forms.gle/ydfjc1vAbGpg1F7i8  ಲಿಂಕ್​ ಬಳಸಿ  ನೋಂದಣಿಯಾಗಲು ಅವಕಾಶವಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. 

ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯಗಳಲ್ಲಿ ತಲಾ 25 ಅಧಿವೇಶನ, ತಲಾ ಒಂದು ಪ್ರಶ್ನೆಪತ್ರಿಕೆ ಬಿಡಿಸುವಿಕೆ ಕಾರ್ಯಕ್ರಮ ನಡೆಸಲಾಗುವುದು. ಇಂದಿನಿಂದ ‘ಜ್ಞಾನ-ವಿಜ್ಞಾನ ತರಂಗ’ ಕಾರ್ಯಕ್ರಮ ವೀಕ್ಷಣೆಗೆ ಲಭ್ಯವಿದ್ದು, ಪ್ರತಿ ದಿನ ಸಂಜೆ 5ರಿಂದ ರಾತ್ರಿ 8 ಗಂಟೆವರೆಗೆ ನೇರ ಪ್ರಸಾರ ಮಾಡಲಾಗುವುದು. 100ಕ್ಕೂ ಹೆಚ್ಚು ವಿಷಯ ತಜ್ಞರು ತರಬೇತಿ ನೀಡಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಸಿಇಟಿ ಪರೀಕ್ಷೆಗೂ ಇದೆ ತರಬೇತಿ ಸಂಪೂರ್ಣ ಉಚಿತವಾಗಿ ತಮಗೆ ಆನ್​ಲೈನ್ ಮೂಲಕ ಕರ್ನಾಟಕ ಸಿಇಟಿ ತರಬೇತಿಯನ್ನು ಶೈಕ್ಷಣಿಕ ಸೇವಾ ಸ್ವಯಂಸೇವಕರ ತಂಡ ಹಮ್ಮಿಕೊಂಡಿದೆ. ಇದು 30 ದಿನಗಳ ತರಬೇತಿ ಸಾಮಾನ್ಯವಾಗಿ ಸಂಜೆ 5 ರಿಂದ 8 ಗಂಟೆಯವರೆಗೆ ನಡೆಯಲಿದ್ದು, ಇದರಲ್ಲಿ ರಾಜ್ಯದ ನುರಿತ ತಜ್ಞ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ. ಆಸಕ್ತ ಪರೀಕ್ಷಾರ್ಥಿಗಳು  https://forms.gle/ydFjC1vAbGpq1F7i8 ಲಿಂಕ್ ಅನ್ನು ಬಳಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಜುಲೈ 3ನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶ್ ಕುಮಾರ್ ಘೋಷಣೆ

Karnataka SSLC Exam 2021: ಶಿಕ್ಷಣ ಸಚಿವರಿಗೊಂದು ಪತ್ರ; ವಿದ್ಯಾರ್ಥಿನಿಯ ಮನ ಮುಟ್ಟುವ ಮಾತು! ( CET and KSET exam 2021 free coaching in Karnataka here is the details)

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್