AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಪಾಸಿಟಿವ್​ ವಿದ್ಯಾರ್ಥಿಗಳಿಗೆ CET ಬರೆಯಲು ಅವಕಾಶವಿದೆ’

ಬೆಂಗಳೂರು: ಈ ಬಾರಿ CET ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್ ಇರಲಿದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಶ್ವಥ್ ನಾರಾಯಣ್ ದಾಖಲಾತಿ ಪರಿಶೀಲನೆ ಇಂದ ಹಿಡಿದು ವಿದ್ಯಾರ್ಥಿಗಳು ಕಾಲೇಜಿಗೆ ದಾಖಲಾಗೋವರೆಗೂ ಎಲ್ಲಾ ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್​ನಲ್ಲಿ ನಡೆಯಲಿದೆ ಎಂದಿದ್ದಾರೆ. CET ಪರೀಕ್ಷೆ ಮುಗಿದ 20-25 ದಿನಗಳಲ್ಲಿ ರಿಸಲ್ಟ್ ಸಹ ನೀಡುತ್ತೇವೆ. ಪರೀಕ್ಷೆ ಪ್ರವೇಶ ಪತ್ರ ಆನ್​ಲೈನ್​ನಲ್ಲಿ ಲಭ್ಯವಿರಲಿದೆ ಎಂಬ ಮಾಹಿತಿ ನೀಡಿದ್ದಾರೆ. KEA ವೆಬ್​ಸೈಟ್​ಗೆ ಹೋಗಿ ಪ್ರವೇಶ ಪತ್ರ ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದಿದ್ದಾರೆ. […]

‘ಕೊರೊನಾ ಪಾಸಿಟಿವ್​ ವಿದ್ಯಾರ್ಥಿಗಳಿಗೆ CET ಬರೆಯಲು ಅವಕಾಶವಿದೆ’
KUSHAL V
| Edited By: |

Updated on:Jul 22, 2020 | 8:07 PM

Share

ಬೆಂಗಳೂರು: ಈ ಬಾರಿ CET ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್ ಇರಲಿದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಶ್ವಥ್ ನಾರಾಯಣ್ ದಾಖಲಾತಿ ಪರಿಶೀಲನೆ ಇಂದ ಹಿಡಿದು ವಿದ್ಯಾರ್ಥಿಗಳು ಕಾಲೇಜಿಗೆ ದಾಖಲಾಗೋವರೆಗೂ ಎಲ್ಲಾ ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್​ನಲ್ಲಿ ನಡೆಯಲಿದೆ ಎಂದಿದ್ದಾರೆ.

CET ಪರೀಕ್ಷೆ ಮುಗಿದ 20-25 ದಿನಗಳಲ್ಲಿ ರಿಸಲ್ಟ್ ಸಹ ನೀಡುತ್ತೇವೆ. ಪರೀಕ್ಷೆ ಪ್ರವೇಶ ಪತ್ರ ಆನ್​ಲೈನ್​ನಲ್ಲಿ ಲಭ್ಯವಿರಲಿದೆ ಎಂಬ ಮಾಹಿತಿ ನೀಡಿದ್ದಾರೆ. KEA ವೆಬ್​ಸೈಟ್​ಗೆ ಹೋಗಿ ಪ್ರವೇಶ ಪತ್ರ ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದಿದ್ದಾರೆ.

ಇನ್ನು, ನಿಗದಿಯಂತೆ ಜುಲೈ 30 ಹಾಗೂ 31 ರಂದು ಪರೀಕ್ಷೆ ನಡೆಯಲಿದೆ ಹಾಗೂ ಆಗಸ್ಟ್ 1ರಂದು ಗಡಿನಾಡು ಕನ್ನಡಿಗರಿಗೆ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದರು. ಎಂದಿನಂತೆ ದಿನಕ್ಕೆ ಎರಡು ವಿಷಯಗಳ ಪರೀಕ್ಷೆ ಇರಲಿದ್ದು SSLC ಪರೀಕ್ಷೆ ಮಾದರಿಯಲ್ಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಕೊರೊನಾ ಪಾಸಿಟಿವ್​ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಹೊರ ರಾಜ್ಯದಿಂದ ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಕ್ವಾರಂಟೈನ್ ನಿಯಮಗಳಿಂದ ವಿನಾಯ್ತಿ ಸಹ ನೀಡಲಾಗಿದೆ. ಜೊತೆಗೆ, ಕೊರೊನಾ ಪಾಸಿಟಿವ್​ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

Published On - 5:35 pm, Tue, 21 July 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ