AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET 2021: ಪಿಯು ಪರೀಕ್ಷೆ ರದ್ದುಗೊಂಡರೂ ಸಿಇಟಿ ನಡೆಯಲಿದೆ: ಡಿಸಿಎಂ ಅಶ್ವತ್ಥ್ ನಾರಾಯಣ

ಈ ಮೊದಲು ಮೆಡಿಕಲ್, ಡೆಂಟಲ್ ಹಾಗೂ ಎಂಜಿನಿಯರಿಂಗ್ ಸೀಟ್ ಹಂಚಿಕೆ ಆಯ್ಕೆ ಮಾಡಲು ಕನಿಷ್ಠ ಅಂಕ ನಿಗದಿ ಇತ್ತು. ಆದರೆ ಈ ಬಾರಿ ಕನಿಷ್ಠ ಮಾರ್ಕ್ಸ್ ನಿಗದಿಯಿಂದ ಅಡಚಣೆ ಆಗೋದು ಬೇಡ. ಸಿಇಟಿ ಮಾರ್ಕ್ಸ್ ಮಾತ್ರ ಪರಿಗಣನೆ ಆಗಲಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

CET 2021: ಪಿಯು ಪರೀಕ್ಷೆ ರದ್ದುಗೊಂಡರೂ ಸಿಇಟಿ ನಡೆಯಲಿದೆ: ಡಿಸಿಎಂ ಅಶ್ವತ್ಥ್ ನಾರಾಯಣ
ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ
TV9 Web
| Edited By: |

Updated on:Jun 05, 2021 | 2:38 PM

Share

ಬೆಂಗಳೂರು: ರಾಜ್ಯದಲ್ಲಿ ಪಿಯು ಪರೀಕ್ಷೆಗಳು ರದ್ದುಗೊಂಡರೂ ಸಿಇಟಿ ನಡೆಯಲಿದೆ. ಸಿಇಟಿ ಅಂಕ ಆಧರಿಸಿ ಮೆಡಿಕಲ್, ಇಂಜಿನಿಯರಿಂಗ್​, ಡೆಂಟಲ್ ಸೀಟ್​ಗಳನ್ನು ಹಂಚಲಾಗುವುದು. ಸಿಇಟಿಯನ್ನು ಕೂಡ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬಹುದಿತ್ತು. ಆದರೆ ಸಿಇಟಿಯನ್ನೂ ರದ್ದುಗೊಳಿಸಿದರೆ ಮುಂದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಬ ಕಾರಣಕ್ಕೆ ಸಿಇಟಿ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ತಿಳಿಸಿದರು.

ಪಿಯುಸಿಗೆ ಪರೀಕ್ಷೆ ಆಗಿರದ‌ ಕಾರಣ ಮೆಡಿಕಲ್, ಎಂಜಿನಿಯರಿಂಗ್ ಸೀಟ್ ಪಡೆಯಲು ಪರೀಕ್ಷೆ ಆಗಬೇಕು. ಹೀಗಾಗಿ ಸಿಇಟಿ ನಡೆಸುತ್ತೇವೆ. ಈ ಕುರಿತು ಸಂಬಂಧಿತ ಅಧಿಕಾರಿಗಳ ಜತೆ ಸಭೆ ನಡೆಸುತ್ತೇವೆ. ಈ ಮೊದಲು ಮೆಡಿಕಲ್, ಡೆಂಟಲ್ ಹಾಗೂ ಎಂಜಿನಿಯರಿಂಗ್ ಸೀಟ್ ಹಂಚಿಕೆ ಆಯ್ಕೆ ಮಾಡಲು ಕನಿಷ್ಠ ಅಂಕ ನಿಗದಿ ಇತ್ತು. ಆದರೆ ಈ ಬಾರಿ ಕನಿಷ್ಠ ಮಾರ್ಕ್ಸ್ ನಿಗದಿಯಿಂದ ಅಡಚಣೆ ಆಗೋದು ಬೇಡ. ಸಿಇಟಿ ಮಾರ್ಕ್ಸ್ ಮಾತ್ರ ಪರಿಗಣನೆ ಆಗಲಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಅವರ ಸಲಹೆ ಸಮರ್ಪಕವಾಗಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚೆ ನಡೆಸುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಮಾಹಿತಿ ನೀಡದರು.

ಪಿಯು ಪರೀಕ್ಷೆ ರದ್ದು ಕೇಂದ್ರ ಸರ್ಕಾರವೇ ಸಿಬಿಎಸ್ಇ, ಐಸಿಎಸ್ಇ ಎಕ್ಸಾಂ ರದ್ದು ಮಾಡಿದೆ. ಇದಕ್ಕೆ ಸುಪ್ರೀಂಕೋರ್ಟ್​ ಅನುಮೋದನೆಯೂ ದೊರೆತಿದೆ. ಆದರೆ ಯಾವುದಕ್ಕೂ ಜಗ್ಗದೆ ಕೊರೊನಾ ಮಹಾಮಾರಿ ಮಾತ್ರ ತಾನು ನುಗ್ಗಿದ್ದೇ ದಾರಿ ಎಂಬಂತಾಗಿದೆ. ಅದು ಪರೀಕ್ಷಾ ಕೇಂದ್ರಗಳಿಗೂ ಎಡತಾಕಿ, ಮಕ್ಕಳ ಜೀವಕ್ಕೆ ಎರವಾದರೆ ಹೇಗೆ ಎಂಬ ಚಿಂತೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಎಕ್ಸಾಂ ನಡೆಸುವುದಿಲ್ಲ ಆದರೆ ಈ ಬಾರಿ SSLC ಗೆ ಎರಡು ಪೇಪರ್​ ಪರೀಕ್ಷೆಗಳನ್ನು ನಡೆಸುವುದಾಗಿ  ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ.  ಕೊರೊನಾ ಕೇಕೆಯ ಮಧ್ಯೆ, ಪರೀಕ್ಷೆ ರದ್ದು ಮಾಡುವಂತೆ ಶಿಕ್ಷಣ ತಜ್ಞರು ಸೇರಿದಂತೆ ಎಲ್ಲ ಕಡೆಗಳಿಂದಲೂ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಚಿವ ಸುರೇಶ್ ಕುಮಾರ್ ಅವರು ಅಳೆದು ತೂಗಿ ಪಿಯುಸಿ ಪರೀಕ್ಷೆ ನಡೆಸುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. SSLC ವಿದ್ಯಾರ್ಥಿಗಳಿಗೆ ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ: ಕೊವಿಡ್ 19 ಲಸಿಕೆ ಸರ್ಟಿಫಿಕೇಟ್​ ಮೇಲೆ ಇನ್ಮುಂದೆ ಮಮತಾ ಬ್ಯಾನರ್ಜಿ ಫೋಟೋ; ಟಿಎಂಸಿ ಸರ್ಕಾರದ ನಿರ್ಧಾರ

ಪ್ರಚಾರಕ್ಕಾಗಿ ಮಾಡಿದ ಪ್ರಯತ್ನವಿದು: 5ಜಿ ಬಗ್ಗೆ ಪ್ರಶ್ನಿಸಿ ಕೇಸ್ ಹಾಕಿದ್ದಕ್ಕೆ ನಟಿ ಜೂಹಿ ಚಾವ್ಲಾಗೆ ದೆಹಲಿ ಹೈಕೋರ್ಟ್​ ತರಾಟೆ, 20 ಲಕ್ಷ ದಂಡ

(CET Exams 2021 will be held even if PU exam is canceled in Karnataka says DCM Ashwathth Narayana)

Published On - 2:38 pm, Sat, 5 June 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್