AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದಲೇ CET ಪರೀಕ್ಷೆ, ಕಂಟೈನ್‌ಮೆಂಟ್‌ ಜೋನ್‌ ವಿದ್ಯಾರ್ಥಿಗಳಿಗೂ ಅವಕಾಶ

ಬೆಂಗಳೂರು: ಜುಲೈ 30ರಿಂದ ಆರಂಭವಾಗುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಅಂದ್ರೆ ಸಿಇಟಿ ಬಗ್ಗೆ ಇದ್ದ ಅನಿಶ್ಚಿತತೆ ಬಗೆ ಹರಿದಿದ್ದು, ಈ ಮೊದಲು ನಿಗದಿ ಪಡಿಸಿದಂತೆ ರಾಜ್ಯಾದಂತ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ. ಕೆಲ ವಿದ್ಯಾರ್ಥಿಗಳು ಮತ್ತು ವಕೀಲರು ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದ ನ್ಯಾಯಾಲಯ, ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡವ ಅವಶ್ಯಕತೆ ಇಲ್ಲ ಎಂದಿದೆ. ಹಾಗೇನೆ ರಾಜ್ಯ […]

ನಾಳೆಯಿಂದಲೇ CET ಪರೀಕ್ಷೆ, ಕಂಟೈನ್‌ಮೆಂಟ್‌ ಜೋನ್‌ ವಿದ್ಯಾರ್ಥಿಗಳಿಗೂ ಅವಕಾಶ
Guru
Guru| Edited By: |

Updated on:Jul 31, 2020 | 12:31 AM

Share

ಬೆಂಗಳೂರು: ಜುಲೈ 30ರಿಂದ ಆರಂಭವಾಗುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಅಂದ್ರೆ ಸಿಇಟಿ ಬಗ್ಗೆ ಇದ್ದ ಅನಿಶ್ಚಿತತೆ ಬಗೆ ಹರಿದಿದ್ದು, ಈ ಮೊದಲು ನಿಗದಿ ಪಡಿಸಿದಂತೆ ರಾಜ್ಯಾದಂತ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ.

ಕೆಲ ವಿದ್ಯಾರ್ಥಿಗಳು ಮತ್ತು ವಕೀಲರು ಸಿಇಟಿ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದ ನ್ಯಾಯಾಲಯ, ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡವ ಅವಶ್ಯಕತೆ ಇಲ್ಲ ಎಂದಿದೆ. ಹಾಗೇನೆ ರಾಜ್ಯ ಸರ್ಕಾರಕ್ಕೆ ಕೆಲ ಸೂಚನೆಗಳನ್ನು ಕೂಡಾ ನೀಡಿದೆ. ಎಲ್ಲಾ ಪರೀಕ್ಷಾರ್ಥಿಗಳಿಗೂ ಸರ್ಕಾರ ಅವಕಾಶ ನೀಡಬೇಕು. ಯಾವುದೇ ನೆಪ ಹೇಳಿ ಪರೀಕ್ಷಾರ್ಥಿಗಳಿಗೆ ಅವಕಾಶ ನಿರಾಕರಿಸಬಾರದು. ಹಾಗೇನೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದೆ.

ಕೊರೊನಾ ಹಿನ್ನೆಲೆಯಲ್ಲಿ ಪೊಲೀಸರು ಕಂಟೈನ್ಮೆಂಟ್ ಜೋನ್ ವಿದ್ಯಾರ್ಥಿಗಳನ್ನು ತಡೆಯಬಾರದು. ವಿದ್ಯಾರ್ಥಿಗಳೊಂದಿಗೆ ತೆರಳಲು ಪೋಷಕರಿಗೂ ಅವಕಾಶ ನೀಡಬೇಕು ಎಂದು ಸ್ಪಷ್ಟವಾಗಿ ಪೊಲೀಸರಿಗೆ ಸೂಚಿಸಿದೆ. ಇದರೊಂದಿಗೆ ಸಿಇಟಿ ಪರೀಕ್ಷೆ ಕುರಿತು ಇದ್ದ ಗೊಂದಲ ಈಗ ನಿವಾರಣೆಯಾಗಿದ್ದು, ನಾಳೆಯಿಂದ ಪರೀಕ್ಷೆ ಆರಂಭವಾಗಲಿದೆ.

Published On - 7:58 pm, Wed, 29 July 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?