AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚೈನ್ ಸ್ನ್ಯಾಚಿಂಗ್: ಬೈಕ್​ ಹೋಯ್ತು ಈಗ ಕಾರಿನಲ್ಲಿ ಬಂದು ಸರ ಎಗರಿಸ್ತಾರೆ

ಬೈಕ್​ನಲ್ಲಿ ಬಂದು ಸರ ಕಿತ್ತುಕೊಂಡು ಹೋಗುವ ಪ್ರಕರಣಗಳು ನಡೆಯುತ್ತಿವೆ. ಅದರಲ್ಲೂ ಬೆಂಗಳೂರಿನಲ್ಲಿ ಒಂದಷ್ಟು ದಿನ ಬ್ಲ್ಯಾಕ್ ಪಲ್ಸರ್​​ನಲ್ಲೇ ಬಂದು ಚೈನ್​ ಕಿತ್ತುಕೊಂಡು ಹೋಗಿದ್ದು, ಪಲ್ಸರ್ ಬೈಕ್​ ಕಂಡ್ರೆ ಸ್ವಲ್ಪ ದಿನ ಭಯ ಹುಟ್ಟಿಸಿತ್ತು. ಈಗ ಅಪ್ಡೇಟ್ ಆಗಿದ್ದಾರೋ ಏನೋ ಕಾರಿನಲ್ಲಿ ಬಂದು ಮಹಿಳೆಯೊಬ್ಬರ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಚೈನ್ ಸ್ನ್ಯಾಚಿಂಗ್: ಬೈಕ್​ ಹೋಯ್ತು ಈಗ ಕಾರಿನಲ್ಲಿ ಬಂದು ಸರ ಎಗರಿಸ್ತಾರೆ
ಬೆಂಗಳೂರಿನಲ್ಲಿ ಚೈನ್ ಸ್ನ್ಯಾಚಿಂಗ್: ಬೈಕ್​ ಹೋಯ್ತು ಈಗ ಕಾರಿನಲ್ಲಿ ಬಂದು ಸರ ಎಗರಿಸ್ತಾರೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Aug 30, 2024 | 9:53 PM

Share

ಬೆಂಗಳೂರು ಗ್ರಾಮಾಂತರ, ಆಗಸ್ಟ್​ 30: ಕಾರಿನಲ್ಲಿ ಬಂದು ಮಹಿಳೆಯ ಸರವನ್ನು ಖದೀಮರು (Chain snatching) ಎಗರಿಸಿರುವಂತಹ ಘಟನೆ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ತೋಟನಹಳ್ಳಿ ಗ್ರಾಮದ ಉಷಾ ಎಂಬುವರ 2 ಲಕ್ಷ 52 ಸಾವಿರ ರೂ. ಬೆಲೆ ಬಾಳುವ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿ ಖದೀಮರು ಕಾರಿನಲ್ಲಿ ಪರಾರಿ ಆಗಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಷಾ ಅವರು ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬಳಿ ಬಣ್ಣದ ಐ10 ಕಾರಿನಲ್ಲಿ ಬಂದಿದ್ದ ಮೂವರು ಕಳ್ಳರಿಂದ ಕೃತ್ಯವೆಸಲಾಗಿದೆ. ಕಳ್ಳರಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಮೂವರು ಮನೆಗಳ್ಳರ ಬಂಧನ

ಬೆಂಗಳೂರಿನ ಸಂಜಯನಗರ ಪೊಲೀಸರಿಂದ ಉತ್ತರ ಪ್ರದೇಶ ಮೂಲದ ಮೂವರು ಮನೆಗಳ್ಳರ ಬಂಧನ ಮಾಡಲಾಗಿದೆ. ಅಕ್ಬರ್, ಮೊಬಿನಾ ಮತ್ತು ಸೋನು ಯಾದವ್ ಬಂಧಿತರು. ಸಂಜಯನಗರದ 1ನೇ ಮುಖ್ಯರಸ್ತೆಯ ಮನೆಯೊಂದರ ಬೀಗ ಮುರಿದು ಚಿನ್ನಾಭರಣ ದೋಚಿ ಉತ್ತರ ಪ್ರದೇಶಕ್ಕೆ ಪರಾರಿಯಾಗಿದ್ದರು. ಸದ್ಯ ಬಂಧಿತರಿಂದ 30 ಲಕ್ಷ ರೂ. ಮೌಲ್ಯದ 405 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಸಂಜಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಕಲಿ ವೈದ್ಯನ ಚಿಕಿತ್ಸೆಯಿಂದ ಯುವಕ ಸಾವು ಆರೋಪ

ಕೋಲಾರ: ನಕಲಿ ಕ್ಲಿನಿಕ್ ವೈದ್ಯನ ಚಿಕಿತ್ಸೆಯಿಂದ ಯುವಕ ಸಾವು ಆರೋಪ ಕೇಳಿಬಂದಿದೆ. ಮುಳಬಾಗಲು ನಗರದ ನೂಗಲಬಂಡೆ ಫಿಜಾ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದ ಸಲ್ಮಾನ್ ಪಾಷಾ (22) ಮೃತ ಯುವಕ. ಆರ್.ಎಂ.ಪಿ ವೈದ್ಯ ಮುಬಾರಕ್ ಎಂಬುವರಿಂದ ಚಿಕಿತ್ಸೆ ನೀಡಿದ್ದ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಗಂಡನ ಶವ: ಖಡಕ್​ ಪೊಲೀಸ್ ಶ್ವಾನ ಮನೆಯಲ್ಲಿದ್ದ ಪತ್ನಿ ಮುಂದೆ ಬಂದು ನಿಂತಿದ್ದೇಕೆ ಗೊತ್ತಾ?

ಕಳೆದ ಒಂದು ವಾರದಿಂದ ಫಿಜಾ ಕ್ಲಿನಿಕ್​ನಲ್ಲಿ ಯುವಕ ಚಿಕಿತ್ಸೆ ಪಡೆದಿದ್ದ. ಕಾಲು ಊತ, ಅಲರ್ಜಿಯಾಗಿ ಇಂದು ಮೃತಪಟ್ಟಿದ್ದಾನೆ. ಮುಳಬಾಗಲು ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

ಅಂಜನಾದ್ರಿ ಬೆಟ್ಟ ಏರಿದ ಬಳಿಕ ಹೃದಯಾಘಾತದಿಂದ ಭಕ್ತ ಸಾವು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಏರಿದ ಬಳಿಕ ಹೃದಯಾಘಾತದಿಂದ ಭಕ್ತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಭಕ್ತ ಭಾಗಚಂದ್ ಠಾಲ್(63) ಮೃತ ವ್ಯಕ್ತಿ. ಆಂಜನೇಯ ಜನ್ಮಸ್ಥಳ ಎಂದು ಅಂಜನಾದ್ರಿ ಬೆಟ್ಟ ಪ್ರಸಿದ್ಧಿ ಪಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ