ಸಿಸಿಬಿ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಚೈತ್ರಾ ಕುಂದಾಪುರ, ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು

Chaitra Kundapaura Cheating: ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬೆಂಗಳೂರಿನ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಹಾಗೂ ಆಕೆಯ ಗ್ಯಾಂಗ್ ಸತ್ಯ ಬಾಯ್ಬಿಟ್ಟಿದೆ. ಉದ್ಯಮಿ ಗೋವಿಂದ್​ ಬಾಬು ಅವರಿಂದ ಹಣ ಪಡೆದುಕೊಂಡು ಬಂದಿದ್ಯಾರು? ಬಳಿಕ ಆ ಹಣವನ್ನು ಯಾರಿಗೆ ಮುಟ್ಟಿಸಲಾಯ್ತು? ಈ ಎಲ್ಲಾ ಅಂಶಗಳನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಸಿಸಿಬಿ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಚೈತ್ರಾ ಕುಂದಾಪುರ, ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು
Follow us
| Updated By: ರಮೇಶ್ ಬಿ. ಜವಳಗೇರಾ

Updated on:Sep 15, 2023 | 1:24 PM

ಬೆಂಗಳೂರು, (ಸೆಪ್ಟೆಂಬರ್ 15): ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ(Cheating Case)  ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ(Chaitra Kundapaura) ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್​ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್​​ಗೆ ನೀಡಿದ್ದೇನೆ ಸತ್ಯ ಒಪ್ಪಿಕೊಂಡಿದ್ದಾನೆ. ಆದ್ರೆ, ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.

ಇದನ್ನೂ ಓದಿ: ವಿಶ್ವನಾಥ್ ಜೀ ಸಾವನಪ್ಪಿದ್ದಾರೆ ಗೋವಿಂದ ಗೋವಿಂದ ಎಂದಿದ್ದ ಗಗನ್, ಚೈತ್ರಾ ಜೋಡಿಗೆ ಹಾಲಶ್ರೀ ಸ್ವಾಮೀಜಿ ಎಂಟ್ರಿಯಿಂದ ಧೈರ್ಯ ಬಂದಿತ್ತು!

ಚೈತ್ರಾ ಕುಂದಾಪುರ.. ರಾಜ್ಯದ ಉದ್ದಗಲಕ್ಕೂ ಭಾಷಣ ಬಿಗಿಯುತ್ತಿದ್ದಾಕೆ. ಆದ್ರೆ ಇದೇ ಚೈತ್ರಾ ಕುಂದಾಪುರ ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸ್ತೀನಿ ಅಂತಾ ಗೋವಿಂದ್‌ ಬಾಬು ಎನ್ನುವರಿಗೆ ವಂಚನೆ ಮಾಡಿದ್ದು, ಬರೋಬ್ಬರಿ 5 ಕೋಟಿ ಹಣ ನುಂಗಿರೋ ಆರೋಪದಲ್ಲಿ ಮೊನ್ನೆ ಅರೆಸ್ಟ್‌ ಆಗಿದ್ದಾಳೆ. ಇದೀಗ ಸಿಸಿಬಿ ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಇನ್ನು ಸ್ವಾಮೀಜಿ ಅರೆಸ್ಟ್ ಆದ್ರೆ ದೊಡ್ಡವರ ಹೆಸರು ಬಯಲಾಗುತ್ತೆ ಎಂದು ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಅಷ್ಟಕ್ಕೂ 2017 ರಿಂದ ಇಂದಿರಾ ಕ್ಯಾಂಟೀನ್‌ಗೆ ಆಹಾರ ಪೂರೈಸ್ತಿರೋ ಗೋವಿಂದ್‌ಬಾಬುಗೆ ಸರ್ಕಾರದಿಂದ 35 ಕೋಟಿ ಹಣ ಬರಬೇಕಿದೆ. ಆ ಹಣಕ್ಕಾಗಿಯೇ ಈ ರೀತಿ ಆರೋಪ ಮಾಡಿದ್ದಾರೆ ಅನ್ನೋದು ಚೈತ್ರಾ ಆರೋಪ. ಆದ್ರೆ ಇದನ್ನ ತಳ್ಳಿಹಾಕಿರೋ ಗೋವಿಂದ್‌ ಬಾಬು, ಇದ್ರಲ್ಲಿ ಯಾರ ಪಾತ್ರವೂ ಇಲ್ಲ. ಯಾವ ಷಡ್ಯಂತ್ರ ಇಲ್ಲ. ಈಕೆಯೇ ಹಣ ನುಂಗಿದ್ದಾಳೆ. ಇಂದಿರಾ ಕ್ಯಾಂಟೀನ್‌ಗೂ ಇದಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ.

ಈವರೆಗೂ 8 ಆರೋಪಿಗಳು ಲಾಕ್ ಆಗಿದ್ದು ಎಲ್ಲರ ಮೊಬೈಲ್ ವಶಕ್ಕೆ ಪಡೆದಿರೋ ಸಿಸಿಬಿ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ ಕಳಿಸಿದೆ. ಅದೇನೇ ಇರಲಿ, ಈ ಕೇಸ್‌ ದಿನದಿನಕ್ಕೂ ಟ್ವಿಸ್ಟ್‌ ಪಡೆದುಕೊಳ್ತಿದ್ದು, ಹಾಲಶ್ರೀ ಸ್ವಾಮೀಜಿ ಬಂಧನ ಬಳಿಕ ಮತ್ತಷ್ಟು ತಿರುವು ಪಡೆಯಲಿದೆ.

Published On - 12:42 pm, Fri, 15 September 23

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!