ಚೈತ್ರಾ ಕುಂದಾಪುರ ಪ್ರಕರಣ; ವಂಚನೆಯ ಹಣದಿಂದ ಜಮೀನು ಖರೀದಿ, ಪೆಟ್ರೋಲ್​ ಬಂಕ್​ನಲ್ಲಿ ಹೂಡಿಕೆ ಮಾಡಿದ್ದ ಹಾಲಶ್ರೀ

| Updated By: ಗಣಪತಿ ಶರ್ಮ

Updated on: Sep 14, 2023 | 6:52 PM

Chaitra Kundapur case; ಇತ್ತೀಚೆಗೆ ಸ್ವಾಮೀಜಿ ಜೀವನಶೈಲಿ ಬದಲಾಗಿತ್ತು. 68 ಲಕ್ಷ ರೂ. ಕೊಟ್ಟು ಅವರ ಮಾವನ ಹೆಸರಿನಲ್ಲಿ ಎಂಟು ಎಕರೆ ಜಮೀನು ಖರೀದಿಸಿದ್ದರು ಎನ್ನಲಾಗಿದೆ. ಚಂದ್ರಪ್ಪ ಎಂಬುವವರ ಒಡೆತನದ ಪೆಟ್ರೋಲ್ ಬಂಕ್​ನಲ್ಲಿಯೂ 40 ಲಕ್ಷ ರೂ. ಹೂಡಿಕೆ ಮಾಡಿದ್ದರು ಎನ್ನಲಾಗಿದೆ.

ಚೈತ್ರಾ ಕುಂದಾಪುರ ಪ್ರಕರಣ; ವಂಚನೆಯ ಹಣದಿಂದ ಜಮೀನು ಖರೀದಿ, ಪೆಟ್ರೋಲ್​ ಬಂಕ್​ನಲ್ಲಿ ಹೂಡಿಕೆ ಮಾಡಿದ್ದ ಹಾಲಶ್ರೀ
ಹಾಗಾದರೆ ಹಾಲಶ್ರೀ, ಬಿಎಸ್ ಯಡಿಯೂರಪ್ಪ, ಗೋವಿಂದ ಪೂಜಾರಿ ಭೇಟಿಯ ರಹಸ್ಯ ಏನು? ಉದ್ಯಮಿ ಗೋವಿಂದ ಬಾಬು ಪೂಜಾರಿಯವರನ್ನು ಬಿಎಸ್​ವೈಗೆ ಪರಿಚಯಿಸಿದ ಉದ್ದೇಶ ಏನು? ವಂಚನೆಗೊಂಡ ಗೋವಿಂದಬಾಬು ಅವರನ್ನು ಪರಿಚಿಯಿಸಿದ್ದು ಯಾಕೆ? ಹೀಗೆ ಹತ್ತು ಹಲವು ಪ್ರಶ್ನೆಗಳು ಹುಟ್ಟುಕೊಂಡಿವೆ.
Follow us on

ಬೆಂಗಳೂರು, ಸೆಪ್ಟೆಂಬರ್ 14: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ (Chaitra Kundapura case) ಮತ್ತು ಇತರ ಐವರನ್ನು ಬಂಧಿಸಿದ ಎರಡು ದಿನಗಳ ನಂತರ, ಮತ್ತೊಬ್ಬ ಆರೋಪಿ ಸ್ವಾಮೀಜಿ ಕುರಿತು ಹೆಚ್ಚಿನ ವಿವರಗಳು ಬಹಿರಂಗವಾಗಿವೆ. ದೂರುದಾರ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ರೂ. ಪಡೆದಿದ್ದ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ (Abhinava Halashree seer) ಕಳೆದ ಕೆಲವು ತಿಂಗಳಲ್ಲಿ ಕೃಷಿ ಜಮೀನು ಖರೀದಿಸಿದ್ದರು. ಅಲ್ಲದೆ, ಪೆಟ್ರೋಲ್ ಬಂಕ್‌ನಲ್ಲಿ ಹೂಡಿಕೆ ಮಾಡಿದ್ದರು ಎಂಬುದು ಬೆಳಕಿಗೆ ಬಂದಿದೆ.

ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಚೈತ್ರಾ ಮತ್ತು ಇತರ ಆರು ಮಂದಿಯನ್ನು ಬಂಧಿಸಿದ ನಂತರ ತಲೆಮರೆಸಿಕೊಂಡಿದ್ದಾರೆ.

ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಐದು ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ದೂರುದಾರ ಪೂಜಾರಿ ಅವರು ಒಟ್ಟು ಎಂಟು ಮಂದಿಯನ್ನು ಹೆಸರಿಸಿದ್ದರು. ಪೂಜಾರಿಯವರು ಕಂತುಗಳಲ್ಲಿ ಹಣ ಪಾವತಿಸಿದ್ದು, ಅದರಲ್ಲಿ ಒಂದನ್ನು ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಚೈತ್ರಾ ಅವರು ದೂರುದಾರರನ್ನು ಮಠಕ್ಕೆ ಕರೆದೊಯ್ದು ಶ್ರೀಗಳಿಗೆ ಪರಿಚಯಿಸಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಸ್ವಾಮೀಜಿ ಜೀವನಶೈಲಿ ಬದಲಾಗಿತ್ತು. 68 ಲಕ್ಷ ರೂ. ಕೊಟ್ಟು ಅವರ ಮಾವನ ಹೆಸರಿನಲ್ಲಿ ಎಂಟು ಎಕರೆ ಜಮೀನು ಖರೀದಿಸಿದ್ದರು ಎನ್ನಲಾಗಿದೆ. ಚಂದ್ರಪ್ಪ ಎಂಬುವವರ ಒಡೆತನದ ಪೆಟ್ರೋಲ್ ಬಂಕ್​ನಲ್ಲಿಯೂ 40 ಲಕ್ಷ ರೂ. ಹೂಡಿಕೆ ಮಾಡಿದ್ದರು ಎನ್ನಲಾಗಿದೆ.

ದೂರುದಾರರು ತಮ್ಮ ಹಣವನ್ನು ಹಿಂಪಡೆಯಲು ಕೋರಿದ ನಂತರ, ಸ್ವಾಮೀಜಿ ಸ್ಥಳೀಯ ಮುಖಂಡರಿಂದ 10 ಲಕ್ಷ ರೂಪಾಯಿ ಸಾಲವನ್ನು ಕೇಳಿದ್ದರು ಎನ್ನಲಾಗಿದೆ. ಸ್ವಾಮೀಜಿಯು ತಮ್ಮ ಹಣವನ್ನು ಹಿಂದಿರುಗಿಸಲು ಸಮಯ ಕೋರಿದ್ದಾರೆ ಮತ್ತು ಅವರ ಹೆಸರನ್ನು ಬಹಿರಂಗಪಡಿಸದಂತೆ ಕೇಳಿಕೊಂಡಿದ್ದಾರೆ ಎಂದು ದೂರುದಾರರು ಹೇಳಿದ್ದರು.

ಸ್ವಾಮೀಜಿಯನ್ನು ಬಂಧಿಸಿದ ನಂತರ ಹಲವಾರು ದೊಡ್ಡ ನಾಯಕರ ಹೆಸರುಗಳನ್ನು ಬಹಿರಂಗಪಡಿಸಲಾಗುವುದು ಎಂದು ಚೈತ್ರಾ ಅವರು ಸಿಟಿ ಕ್ರೈಂ ಬ್ರಾಂಚ್ ಕಚೇರಿಗೆ ಬಂದ ನಂತರ ಗುರುವಾರ ಹೇಳಿದ್ದರು.

ಇದನ್ನೂ ಓದಿ: NIA ಪೊಲೀಸರ ಕಾರ್ಯಚರಣೆ; ಕರ್ನಾಟಕದಲ್ಲಿನ ಭಯೋತ್ಪಾದನಾ ಚಟುವಟಿಕೆಯ ಕಿಂಗ್ ಪಿನ್ ಅರಾಫತ್ ಅಲಿ ಬಂಧನ

ಸ್ವಾಮೀಜಿ ಮತ್ತು ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಇದೇ ವೇಳೆ, ತಮ್ಮ ಮಗಳು ನಿರಪರಾಧಿಯಾಗಿದ್ದು, ಇದು ಆಕೆಯ ವಿರುದ್ಧ ನಡೆದ ಷಡ್ಯಂತ್ರ ಎಂದು ಚೈತ್ರಾ ಅವರ ತಾಯಿ ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ