AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ವಂಚನೆ: ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ: ಮಾಜಿ ಶಾಸಕ ಸಿಟಿ ರವಿ

ಬಿಜೆಪಿಯಲ್ಲಿ ಹಣ ಕೊಟ್ಟು ಟಿಕೆಟ್ ಖರೀದಿಸಲು ಸಾಧ್ಯವಿಲ್ಲ. ಹಣ ಮೂಲಕ ಟಿಕೆಟ್ ಪಡೆಯುವ ಪ್ರಯತ್ನ ಯಾರೂ ಮಾಡಬಾರದು. ಒಂದು ವೇಳೆ‌ ಯತ್ನಿಸಿದರೆ ಮತ್ತೊಬ್ಬ ಗೋವಿಂದಬಾಬು ಪೂಜಾರಿ ಆಗುತ್ತೀರಿ. ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ: ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ: ಮಾಜಿ ಶಾಸಕ ಸಿಟಿ ರವಿ
ಸಿ.ಟಿ. ರವಿ
ಹರೀಶ್ ಜಿ.ಆರ್​.
| Edited By: |

Updated on: Sep 15, 2023 | 5:11 PM

Share

ನವದೆಹಲಿ, ಸೆಪ್ಟೆಂಬರ್​ 15: ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ, ಇಲ್ಲಿ ಸಂದರ್ಭ ದುರ್ಬಳಕೆ ಆಗಿದೆ. ಮೋಸ ಹೋಗುವರು ಇರುವ ತನಕ ಮೋಸ ಮಾಡುವವರು ಇರುತ್ತಾರೆ. ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ (CT Ravi) ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಣ ಕೊಟ್ಟು ಟಿಕೆಟ್ ಖರೀದಿಸಲು ಸಾಧ್ಯವಿಲ್ಲ. ಹಣ ಮೂಲಕ ಟಿಕೆಟ್ ಪಡೆಯುವ ಪ್ರಯತ್ನ ಯಾರೂ ಮಾಡಬಾರದು. ಒಂದು ವೇಳೆ‌ ಯತ್ನಿಸಿದರೆ ಮತ್ತೊಬ್ಬ ಗೋವಿಂದಬಾಬು ಪೂಜಾರಿ ಆಗುತ್ತೀರಿ ಎಂದು ಹೇಳಿದ್ದಾರೆ.

ಮೋಸ ಮಾಡಲೆಂದು ದೊಡ್ಡವರ ಹೆಸರು ಬಳಕೆ ಮಾಡಲಾಗುತ್ತಿದೆ. ಚುನಾವಣಾ ಸಮಿತಿಯಲ್ಲಿದ್ದವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. ಬಿಜೆಪಿ ದೊಡ್ಡ ಪಕ್ಷವಾಗಿದೆ, ಎಲ್ಲಾ ರೀತಿಯ ಜನರು ಸಹ ಇದ್ದಾರೆ. ಕೆಲವರು‌ ಸಮಯದ ದುರ್ಬಳಕೆ ‌ಮಾಡಿಕೊಳ್ಳಲು ಪಕ್ಷಕ್ಕೆ ಬರುತ್ತಾರೆ ಎಂದರು.

ಬಿಜೆಪಿ ಹಿರಿಯ ನಾಯಕರು ಮೈತ್ರಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ

ಬಿಜೆಪಿ ಹಿರಿಯ ನಾಯಕರು ಮೈತ್ರಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ನಾನು ದೇವೇಗೌಡರು, ಯಡಿಯೂರಪ್ಪ ಹೇಳಿಕೆ‌ ಗಮನಿಸಿದ್ದೇನೆ. ನನ್ನಂತಹ ಕಾರ್ಯಕರ್ತ ಪಕ್ಷದ ನಿರ್ಧಾರವನ್ನು ಜಾರಿ ಮಾಡುತ್ತೇನೆ. ಸಾಧಕ ಬಾಧಕ ಕೇಳಿದರೆ ವರಿಷ್ಠರಿಗೆ ನಮ್ಮ ಅನುಭವ ತಿಳಿಸುತ್ತೇವೆ. ಈ ಹಿಂದೆ JDS, ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಏನಾಗುತ್ತದೆ ಎಂದು ಭವಿಷ್ಯ ಹೇಳುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಮೇಲೆ, ಕೆಳಗೆ ಆಗುವುದು ಸಾಮಾನ್ಯ

BBMP ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡಾಗ ಕೆಲವರು ಪಕ್ಷದಿಂದ ಹೋಗಬಹುದು. ರಾಜಕಾರಣದಲ್ಲಿ ಮೇಲೆ, ಕೆಳಗೆ ಆಗುವುದು ಸಾಮಾನ್ಯ. ಇದಕ್ಕಿಂತ ಕಷ್ಟ ಕಾಲದಲ್ಲೂ ಪಕ್ಷ ಕಟ್ಟಿದ್ದೇವೆ. ಎತ್ತಿನಗಾಡಿ ಮೇಲೆ ಹೆಚ್ಚು ಜನರು ಕೂತರೆ ಮುಂದೆ ಹೋಗಲ್ಲ. ಕಾಂಗ್ರೆಸ್ ತೊರೆದಿದ್ದನ್ನು ಡಿ.ಕೆ.ಶಿವಕುಮಾರ್​ ಸಹ ನೋಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಮೈತ್ರಿಗೆ ಸ್ಫೋಟಕ ತಿರುವು, ಇನ್ನೇನು ದೋಸ್ತಿ ಫೈನಲ್ ಎನ್ನುಷ್ಟರಲ್ಲೇ ಕತ್ರಿ ಬಿತ್ತೇ?

ಕಾಂಗ್ರೆಸ್​ನ ಹಾಲಿ ಶಾಸಕರು, ಸಚಿವರೇ ಬಿಜೆಪಿ ಸೇರಿದ್ದಾರೆ. ಈಗ ಮಾಜಿಗಳು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಹಾಲಿಗಳನ್ನು ಸೇರಿಸಿಕೊಂಡರೂ ನಾವು ಅಧಿಕಾರಕ್ಕೆ ಬರಲಿಲ್ಲ. ನೀವು ಮಾಜಿಗಳನ್ನು ಸೇರಿಸಿಕೊಂಡು ಅಧಿಕಾರಕ್ಕೆ ಬರ್ತೀರಾ ಎಂದು ಪ್ರಶ್ನಿಸಿದ್ದಾರೆ. ಈ ಸತ್ಯದ ಅರಿವು ಡಿ.ಕೆ.ಶಿವಕುಮಾರ್​ಗೆ ಇರಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ