AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ವಂಚನೆ: ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ: ಮಾಜಿ ಶಾಸಕ ಸಿಟಿ ರವಿ

ಬಿಜೆಪಿಯಲ್ಲಿ ಹಣ ಕೊಟ್ಟು ಟಿಕೆಟ್ ಖರೀದಿಸಲು ಸಾಧ್ಯವಿಲ್ಲ. ಹಣ ಮೂಲಕ ಟಿಕೆಟ್ ಪಡೆಯುವ ಪ್ರಯತ್ನ ಯಾರೂ ಮಾಡಬಾರದು. ಒಂದು ವೇಳೆ‌ ಯತ್ನಿಸಿದರೆ ಮತ್ತೊಬ್ಬ ಗೋವಿಂದಬಾಬು ಪೂಜಾರಿ ಆಗುತ್ತೀರಿ. ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ: ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ: ಮಾಜಿ ಶಾಸಕ ಸಿಟಿ ರವಿ
ಸಿ.ಟಿ. ರವಿ
ಹರೀಶ್ ಜಿ.ಆರ್​.
| Edited By: |

Updated on: Sep 15, 2023 | 5:11 PM

Share

ನವದೆಹಲಿ, ಸೆಪ್ಟೆಂಬರ್​ 15: ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ, ಇಲ್ಲಿ ಸಂದರ್ಭ ದುರ್ಬಳಕೆ ಆಗಿದೆ. ಮೋಸ ಹೋಗುವರು ಇರುವ ತನಕ ಮೋಸ ಮಾಡುವವರು ಇರುತ್ತಾರೆ. ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ (CT Ravi) ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಣ ಕೊಟ್ಟು ಟಿಕೆಟ್ ಖರೀದಿಸಲು ಸಾಧ್ಯವಿಲ್ಲ. ಹಣ ಮೂಲಕ ಟಿಕೆಟ್ ಪಡೆಯುವ ಪ್ರಯತ್ನ ಯಾರೂ ಮಾಡಬಾರದು. ಒಂದು ವೇಳೆ‌ ಯತ್ನಿಸಿದರೆ ಮತ್ತೊಬ್ಬ ಗೋವಿಂದಬಾಬು ಪೂಜಾರಿ ಆಗುತ್ತೀರಿ ಎಂದು ಹೇಳಿದ್ದಾರೆ.

ಮೋಸ ಮಾಡಲೆಂದು ದೊಡ್ಡವರ ಹೆಸರು ಬಳಕೆ ಮಾಡಲಾಗುತ್ತಿದೆ. ಚುನಾವಣಾ ಸಮಿತಿಯಲ್ಲಿದ್ದವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. ಬಿಜೆಪಿ ದೊಡ್ಡ ಪಕ್ಷವಾಗಿದೆ, ಎಲ್ಲಾ ರೀತಿಯ ಜನರು ಸಹ ಇದ್ದಾರೆ. ಕೆಲವರು‌ ಸಮಯದ ದುರ್ಬಳಕೆ ‌ಮಾಡಿಕೊಳ್ಳಲು ಪಕ್ಷಕ್ಕೆ ಬರುತ್ತಾರೆ ಎಂದರು.

ಬಿಜೆಪಿ ಹಿರಿಯ ನಾಯಕರು ಮೈತ್ರಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ

ಬಿಜೆಪಿ ಹಿರಿಯ ನಾಯಕರು ಮೈತ್ರಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ನಾನು ದೇವೇಗೌಡರು, ಯಡಿಯೂರಪ್ಪ ಹೇಳಿಕೆ‌ ಗಮನಿಸಿದ್ದೇನೆ. ನನ್ನಂತಹ ಕಾರ್ಯಕರ್ತ ಪಕ್ಷದ ನಿರ್ಧಾರವನ್ನು ಜಾರಿ ಮಾಡುತ್ತೇನೆ. ಸಾಧಕ ಬಾಧಕ ಕೇಳಿದರೆ ವರಿಷ್ಠರಿಗೆ ನಮ್ಮ ಅನುಭವ ತಿಳಿಸುತ್ತೇವೆ. ಈ ಹಿಂದೆ JDS, ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಏನಾಗುತ್ತದೆ ಎಂದು ಭವಿಷ್ಯ ಹೇಳುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಮೇಲೆ, ಕೆಳಗೆ ಆಗುವುದು ಸಾಮಾನ್ಯ

BBMP ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡಾಗ ಕೆಲವರು ಪಕ್ಷದಿಂದ ಹೋಗಬಹುದು. ರಾಜಕಾರಣದಲ್ಲಿ ಮೇಲೆ, ಕೆಳಗೆ ಆಗುವುದು ಸಾಮಾನ್ಯ. ಇದಕ್ಕಿಂತ ಕಷ್ಟ ಕಾಲದಲ್ಲೂ ಪಕ್ಷ ಕಟ್ಟಿದ್ದೇವೆ. ಎತ್ತಿನಗಾಡಿ ಮೇಲೆ ಹೆಚ್ಚು ಜನರು ಕೂತರೆ ಮುಂದೆ ಹೋಗಲ್ಲ. ಕಾಂಗ್ರೆಸ್ ತೊರೆದಿದ್ದನ್ನು ಡಿ.ಕೆ.ಶಿವಕುಮಾರ್​ ಸಹ ನೋಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಮೈತ್ರಿಗೆ ಸ್ಫೋಟಕ ತಿರುವು, ಇನ್ನೇನು ದೋಸ್ತಿ ಫೈನಲ್ ಎನ್ನುಷ್ಟರಲ್ಲೇ ಕತ್ರಿ ಬಿತ್ತೇ?

ಕಾಂಗ್ರೆಸ್​ನ ಹಾಲಿ ಶಾಸಕರು, ಸಚಿವರೇ ಬಿಜೆಪಿ ಸೇರಿದ್ದಾರೆ. ಈಗ ಮಾಜಿಗಳು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಹಾಲಿಗಳನ್ನು ಸೇರಿಸಿಕೊಂಡರೂ ನಾವು ಅಧಿಕಾರಕ್ಕೆ ಬರಲಿಲ್ಲ. ನೀವು ಮಾಜಿಗಳನ್ನು ಸೇರಿಸಿಕೊಂಡು ಅಧಿಕಾರಕ್ಕೆ ಬರ್ತೀರಾ ಎಂದು ಪ್ರಶ್ನಿಸಿದ್ದಾರೆ. ಈ ಸತ್ಯದ ಅರಿವು ಡಿ.ಕೆ.ಶಿವಕುಮಾರ್​ಗೆ ಇರಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್