AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ಸಂಭಾವನೆ ಪಡೆಯದೆ ಕರ್ನಾಟಕ ಕೃಷಿ ಇಲಾಖೆ ರಾಯಭಾರಿಯಾದ ದರ್ಶನ್​

Karnataka Agriculture Ambassador: ರಾಯಭಾರಿಯಾಗಿ ಕಾರ್ಯ ನಿರ್ವಹಿಸುವ ಕುರಿತು ದರ್ಶನ್​, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಯಾವ ತೆರನಾದ ಯೋಜನೆ ರೂಪಿಸಬೇಕು, ರೈತರನ್ನು ಹೇಗೆ ತಲುಪಬೇಕು ಎಂಬಿತ್ಯಾದಿ ವಿಚಾರಗಳ ಕುರಿತು ಚರ್ಚಿಸಿದ್ದಾರೆ.

D Boss Darshan: ಸಂಭಾವನೆ ಪಡೆಯದೆ ಕರ್ನಾಟಕ ಕೃಷಿ ಇಲಾಖೆ ರಾಯಭಾರಿಯಾದ ದರ್ಶನ್​
ದರ್ಶನ್​ ತೂಗುದೀಪ
Skanda
|

Updated on: Feb 16, 2021 | 11:38 AM

Share

ಚಾಲೆಂಜಿಂಗ್ ಸ್ಟಾರ್ ದರ್ಶನ್​ (Challenging Star Darshan) ಸಾಮಾಜಿಕ ಕಳಕಳಿ ಮೆರೆಯುವುದರಲ್ಲಿ ಎತ್ತಿದ ಕೈ. ಮೊದಲಿನಿಂದಲೂ ಪ್ರಚಾರವನ್ನಾಗಲೀ, ಹಣವನ್ನಾಗಲೀ ಬಯಸದೆ ಬಡವರಿಗೆ, ಅಶಕ್ತರಿಗೆ ಸದ್ದಿಲ್ಲದೇ ಸಹಾಯ ಹಸ್ತ ಚಾಚುತ್ತಾ ಬಂದಿದ್ದಾರೆ. ಜೊತೆಗೆ, ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್​ ಅವರು ಯಾವುದೇ ಕೆಲಸ ಮಾಡಿದರೂ ಅದು ಬಲುಬೇಗನೇ ಪರಿಣಾಮ ಬೀರುತ್ತದೆ. ದರ್ಶನ್ ಅವರ ಈ ಜನಪ್ರಿಯತೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ 44ನೇ ವರ್ಷಕ್ಕೆ ಕಾಲಿಡುತ್ತಿರುವ ಚಾಲೆಂಜಿಂಗ್ ಸ್ಟಾರ್ ಅವರನ್ನು ಕರ್ನಾಟಕ ಕೃಷಿ ಇಲಾಖೆ ರಾಯಭಾರಿಯಾಗಿ ನೇಮಕ ಮಾಡಿದೆ. ಈ ಕುರಿತ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಸರ್ಕಾರ ರೈತರಿಗಾಗಿ ಜಾರಿಗೆ ತರುವ ಕೃಷಿ ಯೋಜನೆಗಳನ್ನು ಪ್ರಚುರಪಡಿಸಲು ಮತ್ತು ರೈತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ದರ್ಶನ್​ ಈ ಇಲಾಖೆಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅವರಿಗಿರುವ ಜನಪ್ರಿಯತೆ ಮತ್ತು ಶಕ್ತಿ ಕೃಷಿಕರಲ್ಲಿ ಆತ್ಮಸಥೈರ್ಯ ಹೆಚ್ಚಿಸುವ ಜೊತೆಗೆ ಧನಾತ್ಮಕ ಪರಿಣಾಮ ಬೀರಲಿದೆ. ಸ್ವತಃ ಕೃಷಿಕ ಮತ್ತು ಪ್ರಾಣಿಪ್ರಿಯರಾಗಿರುವ ದರ್ಶನ್​ ಈ ಯೋಜನೆಯ ರಾಯಭಾರಿಯಾಗಲು ಅತ್ಯಂತ ಸೂಕ್ತ ವ್ಯಕ್ತಿ ಎಂದು ಯೋಜನೆಗೆ ಸಂಬಂಧಿಸಿದವರು ಅಭಿಪ್ರಾಯಪಟ್ಟಿದ್ದಾರೆ. ರಾಯಭಾರಿಯಾಗಿ ಕಾರ್ಯ ನಿರ್ವಹಿಸುವ ಕುರಿತು ದರ್ಶನ್​, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಯಾವ ತೆರನಾದ ಯೋಜನೆ ರೂಪಿಸಬೇಕು, ರೈತರನ್ನು ಹೇಗೆ ತಲುಪಬೇಕು ಎಂಬಿತ್ಯಾದಿ ವಿಚಾರಗಳ ಕುರಿತು ಚರ್ಚಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಅಭಿನಯದ ರಾಬರ್ಟ್​ ಸಿನಿಮಾ ಟ್ರೇಲರ್​ ಬಿಡುಗಡೆ, ಕೆಲವೇ ನಿಮಿಷಗಳಲ್ಲಿ ದಾಖಲೆ ವೀಕ್ಷಣೆ

ರಾಯಭಾರಿಯಾಗಲು ಯಾವುದೇ ಸಂಭಾವನೆ ಪಡೆಯದ ದರ್ಶನ್​ ಸಾಮಾನ್ಯವಾಗಿ ಜನಪ್ರಿಯ ವ್ಯಕ್ತಿಗಳು ಹಾಗೂ ಸ್ಟಾರ್ ನಟರನ್ನು ಜಾಹೀರಾತಿಗೆ ಬಳಸಿಕೊಳ್ಳಲು ದೊಡ್ಡ ಮೊತ್ತದ ಹಣ ತೆರಬೇಕಾಗುತ್ತದೆ. ಆದರೆ, ಈ ವಿಚಾರದಲ್ಲಿ ದರ್ಶನ್ ಬಹಳ ಉದಾರಿಯಾಗಿದ್ದು ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ರಾಯಭಾರಿಯಾಗಲು ಯಾವುದೇ ಹಣ ಪಡೆದಿಲ್ಲ ಎಂದು ತಿಳಿದುಬಂದಿದೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್