AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ಸಂಭಾವನೆ ಪಡೆಯದೆ ಕರ್ನಾಟಕ ಕೃಷಿ ಇಲಾಖೆ ರಾಯಭಾರಿಯಾದ ದರ್ಶನ್​

Karnataka Agriculture Ambassador: ರಾಯಭಾರಿಯಾಗಿ ಕಾರ್ಯ ನಿರ್ವಹಿಸುವ ಕುರಿತು ದರ್ಶನ್​, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಯಾವ ತೆರನಾದ ಯೋಜನೆ ರೂಪಿಸಬೇಕು, ರೈತರನ್ನು ಹೇಗೆ ತಲುಪಬೇಕು ಎಂಬಿತ್ಯಾದಿ ವಿಚಾರಗಳ ಕುರಿತು ಚರ್ಚಿಸಿದ್ದಾರೆ.

D Boss Darshan: ಸಂಭಾವನೆ ಪಡೆಯದೆ ಕರ್ನಾಟಕ ಕೃಷಿ ಇಲಾಖೆ ರಾಯಭಾರಿಯಾದ ದರ್ಶನ್​
ದರ್ಶನ್​ ತೂಗುದೀಪ
Skanda
|

Updated on: Feb 16, 2021 | 11:38 AM

Share

ಚಾಲೆಂಜಿಂಗ್ ಸ್ಟಾರ್ ದರ್ಶನ್​ (Challenging Star Darshan) ಸಾಮಾಜಿಕ ಕಳಕಳಿ ಮೆರೆಯುವುದರಲ್ಲಿ ಎತ್ತಿದ ಕೈ. ಮೊದಲಿನಿಂದಲೂ ಪ್ರಚಾರವನ್ನಾಗಲೀ, ಹಣವನ್ನಾಗಲೀ ಬಯಸದೆ ಬಡವರಿಗೆ, ಅಶಕ್ತರಿಗೆ ಸದ್ದಿಲ್ಲದೇ ಸಹಾಯ ಹಸ್ತ ಚಾಚುತ್ತಾ ಬಂದಿದ್ದಾರೆ. ಜೊತೆಗೆ, ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್​ ಅವರು ಯಾವುದೇ ಕೆಲಸ ಮಾಡಿದರೂ ಅದು ಬಲುಬೇಗನೇ ಪರಿಣಾಮ ಬೀರುತ್ತದೆ. ದರ್ಶನ್ ಅವರ ಈ ಜನಪ್ರಿಯತೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ 44ನೇ ವರ್ಷಕ್ಕೆ ಕಾಲಿಡುತ್ತಿರುವ ಚಾಲೆಂಜಿಂಗ್ ಸ್ಟಾರ್ ಅವರನ್ನು ಕರ್ನಾಟಕ ಕೃಷಿ ಇಲಾಖೆ ರಾಯಭಾರಿಯಾಗಿ ನೇಮಕ ಮಾಡಿದೆ. ಈ ಕುರಿತ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಸರ್ಕಾರ ರೈತರಿಗಾಗಿ ಜಾರಿಗೆ ತರುವ ಕೃಷಿ ಯೋಜನೆಗಳನ್ನು ಪ್ರಚುರಪಡಿಸಲು ಮತ್ತು ರೈತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ದರ್ಶನ್​ ಈ ಇಲಾಖೆಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅವರಿಗಿರುವ ಜನಪ್ರಿಯತೆ ಮತ್ತು ಶಕ್ತಿ ಕೃಷಿಕರಲ್ಲಿ ಆತ್ಮಸಥೈರ್ಯ ಹೆಚ್ಚಿಸುವ ಜೊತೆಗೆ ಧನಾತ್ಮಕ ಪರಿಣಾಮ ಬೀರಲಿದೆ. ಸ್ವತಃ ಕೃಷಿಕ ಮತ್ತು ಪ್ರಾಣಿಪ್ರಿಯರಾಗಿರುವ ದರ್ಶನ್​ ಈ ಯೋಜನೆಯ ರಾಯಭಾರಿಯಾಗಲು ಅತ್ಯಂತ ಸೂಕ್ತ ವ್ಯಕ್ತಿ ಎಂದು ಯೋಜನೆಗೆ ಸಂಬಂಧಿಸಿದವರು ಅಭಿಪ್ರಾಯಪಟ್ಟಿದ್ದಾರೆ. ರಾಯಭಾರಿಯಾಗಿ ಕಾರ್ಯ ನಿರ್ವಹಿಸುವ ಕುರಿತು ದರ್ಶನ್​, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಯಾವ ತೆರನಾದ ಯೋಜನೆ ರೂಪಿಸಬೇಕು, ರೈತರನ್ನು ಹೇಗೆ ತಲುಪಬೇಕು ಎಂಬಿತ್ಯಾದಿ ವಿಚಾರಗಳ ಕುರಿತು ಚರ್ಚಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಅಭಿನಯದ ರಾಬರ್ಟ್​ ಸಿನಿಮಾ ಟ್ರೇಲರ್​ ಬಿಡುಗಡೆ, ಕೆಲವೇ ನಿಮಿಷಗಳಲ್ಲಿ ದಾಖಲೆ ವೀಕ್ಷಣೆ

ರಾಯಭಾರಿಯಾಗಲು ಯಾವುದೇ ಸಂಭಾವನೆ ಪಡೆಯದ ದರ್ಶನ್​ ಸಾಮಾನ್ಯವಾಗಿ ಜನಪ್ರಿಯ ವ್ಯಕ್ತಿಗಳು ಹಾಗೂ ಸ್ಟಾರ್ ನಟರನ್ನು ಜಾಹೀರಾತಿಗೆ ಬಳಸಿಕೊಳ್ಳಲು ದೊಡ್ಡ ಮೊತ್ತದ ಹಣ ತೆರಬೇಕಾಗುತ್ತದೆ. ಆದರೆ, ಈ ವಿಚಾರದಲ್ಲಿ ದರ್ಶನ್ ಬಹಳ ಉದಾರಿಯಾಗಿದ್ದು ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ರಾಯಭಾರಿಯಾಗಲು ಯಾವುದೇ ಹಣ ಪಡೆದಿಲ್ಲ ಎಂದು ತಿಳಿದುಬಂದಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ