AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್ ಮನವಿಗೆ ಓಗೊಟ್ಟ ಜನತೆ; ಒಂದೇ ವಾರದಲ್ಲಿ 1 ಕೋಟಿ ರೂಪಾಯಿ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯ

50 ರೂಪಾಯಿಂದ ಒಂದೂವರೆ ಲಕ್ಷದವರೆಗೂ ಸಾಕಷ್ಟು ಜನರು ನೆರವನ್ನು ನೀಡಿದ್ದಾರೆ. ಈ‌ ಮೂಲಕ ಒಂದು ಕೋಟಿ ಹಣ ಸಂದಾಯವಾಗಿರುವುದಕ್ಕೆ ನಟ ದರ್ಶನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಸಂತೋಷ ವ್ಯಕ್ತಪಡಿಸಿದ್ದಾರೆ.

ನಟ ದರ್ಶನ್ ಮನವಿಗೆ ಓಗೊಟ್ಟ ಜನತೆ; ಒಂದೇ ವಾರದಲ್ಲಿ 1 ಕೋಟಿ ರೂಪಾಯಿ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯ
ಚಾಮರಾಜೇಂದ್ರ ಮೃಗಾಲ
TV9 Web
| Edited By: |

Updated on: Jun 12, 2021 | 11:06 AM

Share

ಮೈಸೂರು: ಕೊರೊನಾ ಸಂಕಷ್ಟದಲ್ಲಿ ಮಾನವ ಮಾತ್ರ ಅಲ್ಲ ಪ್ರಾಣಿಗಳು ಕೂಡ ಸಂಕಷ್ಟಕ್ಕೆ ಸಿಲುಕಿವೆ. ಇದೀಗಾ ರಾಜ್ಯದ ಮೃಗಾಲಯಗಳಿಗೆ ಪ್ರವಾಸಿಗರಿಲ್ಲದೆ ಯಾವುದೇ ರೀತಿಯ ಆದಾಯ ಸಿಗುತ್ತಿಲ್ಲ. ಹೀಗಾಗಿ ಪ್ರಾಣಿಗಳ ನಿರ್ವಹಣೆ ಕಷ್ಟವಾಗಿತ್ತು. ಇದನ್ನರಿತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಮೃಗಾಲಯಕ್ಕೆ ನೆರವಾಗಿ ಎಂದು ವೀಡಿಯೋ ಮಾಡಿ ಮನವಿ ಮಾಡಿದ್ದರು. ಇದೀಗಾ ಆ ವೀಡಿಯೋಗೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಒಂದು ಕೋಟಿ ಹಣ ಸಂಗ್ರಹವಾಗಿದೆ.

ಲಾಕ್‌ಡೌನ್‌ನಿಂದಾಗಿ ರಾಜ್ಯದ 9 ಮೃಗಾಲಯಗಳೂ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿವೆ. ಇದರಿಂದಾಗಿ ಪ್ರಾಣಿಗಳ ಆಹಾರಕ್ಕೂ ಹಣವಿಲ್ಲದೆ ಪರದಾಡುತ್ತಿರುವ ಸ್ಥಿತಿ ಕರ್ನಾಟ ಮೃಗಾಲಯ ಪ್ರಾಧಿಕಾರಕ್ಕೆ ಬಂದೊದಗಿದೆ. ಹೀಗಾಗಿ ಮೃಗಾಲಯದ ಸಂಕಷ್ಟಕ್ಕೆ ನೆರವಾಗಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನಟ ದರ್ಶನ್ ಅವರಿಗೆ ಮನವಿ ಮಾಡಿದ್ದರು. ಅರಣ್ಯ ಇಲಾಖೆಯ ರಾಯಭಾರಿಯಾಗಿರುವ ನಟ ದರ್ಶನ್ ವಿಡಿಯೋ ಮೂಲಕ ನೆರವಿಗೆ ಮನವಿ ಮಾಡಿದ್ದಾರೆ.

ನಟ ದರ್ಶನ್ ಅವರು ಮನವಿ‌ ಮಾಡಿದ ಆರು ದಿನಗಳಲ್ಲೇ ಒಂದು‌ ಕೋಟಿಯಷ್ಟು ಹಣ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯವಾಗಿದೆ. ದರ್ಶನ್ ಅವರ ಅಭಿಮಾನಿಗಳು ಹಾಗೂ ವನ್ಯಜೀವಿ ಪ್ರಿಯರು ಪ್ರಾಣಿಗಳನ್ನು ದತ್ತು ತೆಗೆದುಕೊಂಡು ನೆರವಿಗೆ ಮುಂದಾಗಿದ್ದಾರೆ. 50 ರೂಪಾಯಿಂದ ಒಂದೂವರೆ ಲಕ್ಷದವರೆಗೂ ಸಾಕಷ್ಟು ಜನರು ನೆರವನ್ನು ನೀಡಿದ್ದಾರೆ. ಈ‌ ಮೂಲಕ ಒಂದು ಕೋಟಿ ಹಣ ಸಂದಾಯವಾಗಿರುವುದಕ್ಕೆ ನಟ ದರ್ಶನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಸಂತೋಷ ವ್ಯಕ್ತಪಡಿಸಿದ್ದಾರೆ.

ನಟ ದರ್ಶನ್ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ ಮತ್ತಷ್ಟು ಚುರುಕಾಗಿದ್ದು ಅದರಲ್ಲಿ 9 ಮೃಗಾಲಯಕ್ಕೆ ಹಣ ಸಂಗ್ರಹವಾಗಿದೆ. ಅದರಂತೆ ಮೈಸೂರು ಮೃಗಾಲಯಕ್ಕೆ 51,76,700 ರೂಪಾಯಿ, ಬನ್ನೇರುಘಟ್ಟ ಮೃಗಾಲಯಕ್ಕೆ 29,83,000 ರೂಪಾಯಿ, ಶಿವಮೊಗ್ಗ ಮೃಗಾಲಯಕ್ಕೆ 7,24,800 ರೂಪಾಯಿ, ಗದಗ ಮೃಗಾಲಯಕ್ಕೆ 2,66,400 ರೂಪಾಯಿ, ಹಂಪಿ ಮೃಗಾಲಯಕ್ಕೆ 2,42,200 ರೂಪಾಯಿ, ಬೆಳಗಾವಿ ಮೃಗಾಲಯಕ್ಕೆ 2,22,300 ರೂಪಾಯಿ, ದಾವಣಗೆರೆ ಮೃಗಾಲಯಕ್ಕೆ 1,94,900 ರೂಪಾಯಿ, ಚಿತ್ರದುರ್ಗ ಮೃಗಾಲಯಕ್ಕೆ 1,49,300 ರೂಪಾಯಿ, ಕಲಬುರ್ಗಿ ಮೃಗಾಲಯಕ್ಕೆ 83,300 ರೂಪಾಯಿ ಸಂದಾಯವಾಗಿದ್ದು ಒಟ್ಟು 1,00,47,900 ರೂಪಾಯಿ ಮೃಗಾಲಯದ ನೆರವಿಗೆ ದೊರೆತಿದೆ.

ಕಳೆದ ವರ್ಷ ಕೂಡ‌ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಅವರ ಸ್ನೇಹಿತರ ಮೂಲಕ ಮೂರು ಕೋಟಿಗೂ ಅಧಿಕವಾಗಿ‌ ಹಣವನ್ನು ಸಂಗ್ರಹ ಮಾಡಿ ಮೈಸೂರು‌ ಮೃಗಾಲಯಕ್ಕೆ ನೀಡಿದ್ದರು. ಇದೀಗ ನಟ ದರ್ಶನ್ ಅಭಿಯಾನ ಮಾಡುವ ಮೂಲಕ ನೆರವಿಗೆ ದಾವಿಸಿದ್ದಕ್ಕೆ ಸಚಿವರಾದ ಎಸ್.ಟಿ.ಸೋಮಶೇಖರ್ ಕೂಡ ದರ್ಶನ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮೃಗಾಲಯ ಪ್ರಾಧಿಕಾರದಲ್ಲಿ ದಶಕಗಳಿಂದಲೂ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ ಜಾರಿಯಲ್ಲಿದೆ. ಆದರೆ ಕೊರೊನಾ ಸಂದರ್ಭದಲ್ಲಿ ಮೃಗಾಲಯ ತೀರ ಸಂಕಷ್ಟಕ್ಕೆ ಸಿಲುಕಿದ್ದರಿಂದ ಇದೀಗ ದಾನಿಗಳು ಹೆಚ್ಚಾಗಿ‌ ಮುಂದೆ ಬರುತ್ತಿದ್ದಾರೆ. ಮುಂದೆಯು ಮತ್ತಷ್ಟು ಜನರು ಮೃಗಾಲಯ್ಕೆ ನೆರವು ನೀಡುವುದು ಅವಶ್ಯಕವಾಗಿದೆ.

ಇದನ್ನೂ ಓದಿ:

ದರ್ಶನ್​ ಮನವಿಗೆ ಓಗೊಟ್ಟು ಆನೆ ದತ್ತು ಪಡೆದ ಉಪೇಂದ್ರ; ಒಂದು ವರ್ಷಕ್ಕೆ ಆಗುವ ಖರ್ಚು ಎಷ್ಟು?

Darshan: ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್

Follow Us
TV9 Web
TV9 Web

TV9 Kannada

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ