AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಭೇಟಿ ಬಳಿಕ ಬಂಡೀಪುರ ಸಫಾರಿ ಕೇಂದ್ರದ ಚಿತ್ರಣ ಬದಲಾಯಿತಾದರೂ ಪ್ರವಾಸಿಗರಿಗಿನ್ನೂ ನಿರಾಸೆ: ಕಾರಣ ಇಲ್ಲಿದೆ

ದಿನ ಕಳೆದಂತೆ ಬಂಡೀಪುರದ ವರ್ಚಸ್ಸೇ ಬದಲಾಗುತ್ತಿದೆ. ನೆರೆ ರಾಜ್ಯಗಳಾದ ಕೇರಳ ಹಾಗೂ ತಮಿಳುನಾಡು ಸೇರಿದಂತೆ ಹೊರ ರಾಜ್ಯ ಅಷ್ಟೇ ಯಾಕೆ ವಿದೇಶದಿಂದಲೂ ಸಫಾರಿಗೆ ಆಗಮಿಸುತ್ತಿದ್ದಾರೆ. ಆದರೆ ಸಫಾರಿ ಮಾಡಲು ವಾಹನಗಳ ಕೊರತೆ ಕಾಡುತ್ತಿದೆ.

ಮೋದಿ ಭೇಟಿ ಬಳಿಕ ಬಂಡೀಪುರ ಸಫಾರಿ ಕೇಂದ್ರದ ಚಿತ್ರಣ ಬದಲಾಯಿತಾದರೂ ಪ್ರವಾಸಿಗರಿಗಿನ್ನೂ ನಿರಾಸೆ: ಕಾರಣ ಇಲ್ಲಿದೆ
ಬಂಡೀಪುರ ಸಫಾರಿ ಕೇಂದ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jan 08, 2024 | 7:04 AM

Share

ಚಾಮರಾಜನಗರ, ಜನವರಿ 8: ಪ್ರಧಾನಿ ನರೇಂದ್ರ ಮೋದಿ ಅವರು ಬಂದು ಹೋದ ಬಳಿಕ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿ ಕೇಂದ್ರದ (Bandipur Tiger Safari Center) ಚಿತ್ರಣವೇ ಬದಲಾಗಿದೆ. ಸಫಾರಿ ಕೇಂದ್ರಕ್ಕೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಬಹಳಷ್ಟು ಹೆಚ್ಚಳವಾಗಿದೆ ಎಂಬ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಆದರೆ, ಅಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಪ್ರವಾಸಿಗರಿಗೆ ನಿರಾಸೆಯೂ ಆಗುತ್ತಿದೆ! ರಾಜ್ಯದ ನಂಬರ್ ಓನ್ ಸಫಾರಿ ಕೇಂದ್ರದಲ್ಲಿ ಈಗಿರುವ ಸಫಾರಿ ವಾಹನಗಳು ಸಾಲದೆ ಮತ್ತೆ ಹೆಚ್ಚುವರಿಯಾಗಿ 20 ರಿಂದ 30 ವಾಹನಗಳನ್ನು ಖರೀದಿಸುವ ಅನಿವಾರ್ಯತೆ ಈಗ ಸೃಷ್ಟಿಯಾಗಿದೆ.

ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೆ ಸಫಾರಿಯನ್ನ ಮಾಡಿ ಹೋದ ಬಳಿಕ ಈಗ ಆ ಸಫಾರಿ ಕೇಂದ್ರದ ಚಿತ್ರಣವೇ ಬದಲಾಗಿ ಹೋಗಿದೆ. ಇದೀಗ ಬಂಡೀಪುರಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಅದೆಷ್ಟರ ಮಟ್ಟಿಗೆ ಪ್ರವಾಸಿಗರು ಬರ್ತಾ ಇದ್ದಾರೆ ಅಂದ್ರೆ ಸಫಾರಿಗೆ ವಾಹನಗಳ ಕೊರತೆ ಎದುರಾಗಿದೆ. ಈಗಾಗ್ಲೆ 30 ಕ್ಕೂ ಹೆಚ್ಚು ಸಫಾರಿ ವಾಹನಗಳಿದ್ದು ಈಗ ಇದರ ಜೊತೆ ಮತ್ತೆ 20 ರಿಂದ ಮೂವತ್ತು ಸಫಾರಿ ವಾಹನಗಳನ್ನ ಖರೀದಿ ಮಾಡಲೇ ಬೇಕಾದ ಅನಿವಾರ್ಯತೆ ಈಗ ಎದುರಾಗಿದೆ.

ದಿನ ಕಳೆದಂತೆ ಬಂಡೀಪುರದ ವರ್ಚಸ್ಸೇ ಬದಲಾಗುತ್ತಿದೆ. ನೆರೆ ರಾಜ್ಯಗಳಾದ ಕೇರಳ ಹಾಗೂ ತಮಿಳುನಾಡು ಸೇರಿದಂತೆ ಹೊರ ರಾಜ್ಯ ಅಷ್ಟೇ ಯಾಕೆ ವಿದೇಶದಿಂದಲೂ ಸಫಾರಿಗೆ ಆಗಮಿಸುತ್ತಿದ್ದಾರೆ. ಆದರೆ ಸಫಾರಿ ಮಾಡಲು ವಾಹನಗಳ ಕೊರತೆ ಕಾಡುತ್ತಿದೆ. ವಾಹನಗಳ ಕೊರತೆಯಿಂದ ದಿನನಿತ್ಯ ಅರಣ್ಯ ಇಲಾಖಾ ಸಿಬ್ಬಂದಿ ಜೊತೆ ಪ್ರವಾಸಿಗರು ವಾಗ್ವಾದ ನಡೆಸುವ ಸಂದರ್ಭ ಎದುರಾಗುತ್ತಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಬಂದೋದ ಬಳಿಕ ಬದಲಾಯ್ತು ಬಂಡೀಪುರದ ಚಿತ್ರಣ, ಪ್ರವಾಸಿಗರ ಹೆಚ್ಚಳ, ಆದಾಯ ದ್ವಿಗುಣ

ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಆನೆ ಚಿರತೆ ಹೊಂದಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದಿರುವ ಬಂಡೀಪುರಕ್ಕೆ ಪ್ರವಾಸಿಗರ ದಂಡು ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಕಾರಣ ಬಂಡೀಪುರದ ಚಿತ್ರಣವೇ ಈಗ ಬದಲಾಗಿ ಹೋಗಿದಂತೂ ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!