AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ದಲಿತರಿಗೆ ದೇವಾಲಯ ಪ್ರವೇಶಕ್ಕೆ ನಿರ್ಬಂಧ; 17 ಮಂದಿ ವಿರುದ್ಧ ಎಫ್ಐಆರ್ ದಾಖಲು

ಚಾಮರಾಜನಗರದ ಗುಂಡ್ಲುಪೇಟೆ ಗ್ರಾಮದಲ್ಲಿ ಪರಿಶಿಷ್ಟ ಜನಾಂಗದವರನ್ನು ದೇವಾಲಯ ಪ್ರವೇಶಿಸದಂತೆ ತಡೆಯಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ದೇವಾಲಯದ ಆಸ್ತಿಯನ್ನು ಬರಿ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ ಎಂಬ ಗ್ರಾಮಸ್ಥರೊಬ್ಬರ ಹೇಳೆಕೆಯನ್ನು ವಿರೋಧಿಸಿದ ಗ್ರಾಮಸ್ಥರು ಕೊಲೆ ಬೆದರಿಕೆ ಹಾಕಿದ್ದಾರೆ.

ಚಾಮರಾಜನಗರ: ದಲಿತರಿಗೆ ದೇವಾಲಯ ಪ್ರವೇಶಕ್ಕೆ ನಿರ್ಬಂಧ; 17 ಮಂದಿ ವಿರುದ್ಧ ಎಫ್ಐಆರ್ ದಾಖಲು
ಕೊಲೆ ಬೆದರಿಕೆ ಆರೋಪವನ್ನು ಖಂಡಿಸಿ ಪ್ರತಿಭಟನೆಗಿಳಿದಿರುವ ಗುಂಡ್ಲುಪೇಟೆ ಗ್ರಾಮಸ್ಥರು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 19, 2025 | 3:17 PM

Share

ಚಾಮರಾಜನಗರ, ಅಕ್ಟೋಬರ್ 19: ಜಿಲ್ಲೆಯ ಗುಂಡ್ಲುಪೇಟೆ (Gundlupete) ತಾಲೂಕಿನ ವೀರನಪುರ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆಯೆಂಬ ಆರೋಪದ ಹಿನ್ನೆಲೆಯಲ್ಲಿ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗ್ರಾಮಸ್ಥ ಶಿವಕುಮಾರ್ ಹೇಳಿಕೆ ವಿರೋಧಿಸಿ ಕೊಲೆ ಬೆದರಿಕೆ

ಗ್ರಾಮದಲ್ಲಿ ಪರಿಶಿಷ್ಟ ಜನಾಂಗದವರನ್ನು ದೇವಾಲಯ ಪ್ರವೇಶಿಸದಂತೆ ತಡೆಯಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಗ್ರಾಮದಲ್ಲಿನ ಎಲ್ಲಾ ಜನಾಂಗದ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಶಿವಕುಮಾರ್ ಎಂಬ ಗ್ರಾಮಸ್ಥರು “ದೇವಾಲಯದ ಆಸ್ತಿಯನ್ನು ಹರಾಜು ಹಾಕದೆ ಬರಿ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯ ಬಳಿಕ ಕೆಲವರು ಶಿವಕುಮಾರನಿಗೆ ಜಾತಿ ನಿಂದನೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಕುಮಾರ್ ನೀಡಿದ ದೂರಿನ ಆಧಾರದಲ್ಲಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ 17 ಮಂದಿ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

ಸುಳ್ಳು ಆರೋಪ ಮಾಡಿದ್ದಾರೆಂದು ಗ್ರಾಮಸ್ಥರ ಆಕ್ರೋಶ

ಪ್ರಕರಣ ದಾಖಲಾಗುತ್ತಿದ್ದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಅವರು ಸುಳ್ಳು ದೂರು ನೀಡಿದ್ದಾರೆ, ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ವಾದಿಸಿದರು. ಪ್ರತಿಭಟನಾಕಾರರು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಇದೀಗ ಪೊಲೀಸರು ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ