ಚಾಮರಾಜನಗರ: ದಲಿತರಿಗೆ ದೇವಾಲಯ ಪ್ರವೇಶಕ್ಕೆ ನಿರ್ಬಂಧ; 17 ಮಂದಿ ವಿರುದ್ಧ ಎಫ್ಐಆರ್ ದಾಖಲು

ಚಾಮರಾಜನಗರದ ಗುಂಡ್ಲುಪೇಟೆ ಗ್ರಾಮದಲ್ಲಿ ಪರಿಶಿಷ್ಟ ಜನಾಂಗದವರನ್ನು ದೇವಾಲಯ ಪ್ರವೇಶಿಸದಂತೆ ತಡೆಯಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ದೇವಾಲಯದ ಆಸ್ತಿಯನ್ನು ಬರಿ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ ಎಂಬ ಗ್ರಾಮಸ್ಥರೊಬ್ಬರ ಹೇಳೆಕೆಯನ್ನು ವಿರೋಧಿಸಿದ ಗ್ರಾಮಸ್ಥರು ಕೊಲೆ ಬೆದರಿಕೆ ಹಾಕಿದ್ದಾರೆ.

ಚಾಮರಾಜನಗರ: ದಲಿತರಿಗೆ ದೇವಾಲಯ ಪ್ರವೇಶಕ್ಕೆ ನಿರ್ಬಂಧ; 17 ಮಂದಿ ವಿರುದ್ಧ ಎಫ್ಐಆರ್ ದಾಖಲು
ಕೊಲೆ ಬೆದರಿಕೆ ಆರೋಪವನ್ನು ಖಂಡಿಸಿ ಪ್ರತಿಭಟನೆಗಿಳಿದಿರುವ ಗುಂಡ್ಲುಪೇಟೆ ಗ್ರಾಮಸ್ಥರು
Edited By:

Updated on: Oct 19, 2025 | 3:17 PM

ಚಾಮರಾಜನಗರ, ಅಕ್ಟೋಬರ್ 19: ಜಿಲ್ಲೆಯ ಗುಂಡ್ಲುಪೇಟೆ (Gundlupete) ತಾಲೂಕಿನ ವೀರನಪುರ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆಯೆಂಬ ಆರೋಪದ ಹಿನ್ನೆಲೆಯಲ್ಲಿ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗ್ರಾಮಸ್ಥ ಶಿವಕುಮಾರ್ ಹೇಳಿಕೆ ವಿರೋಧಿಸಿ ಕೊಲೆ ಬೆದರಿಕೆ

ಗ್ರಾಮದಲ್ಲಿ ಪರಿಶಿಷ್ಟ ಜನಾಂಗದವರನ್ನು ದೇವಾಲಯ ಪ್ರವೇಶಿಸದಂತೆ ತಡೆಯಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಗ್ರಾಮದಲ್ಲಿನ ಎಲ್ಲಾ ಜನಾಂಗದ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಶಿವಕುಮಾರ್ ಎಂಬ ಗ್ರಾಮಸ್ಥರು “ದೇವಾಲಯದ ಆಸ್ತಿಯನ್ನು ಹರಾಜು ಹಾಕದೆ ಬರಿ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯ ಬಳಿಕ ಕೆಲವರು ಶಿವಕುಮಾರನಿಗೆ ಜಾತಿ ನಿಂದನೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಕುಮಾರ್ ನೀಡಿದ ದೂರಿನ ಆಧಾರದಲ್ಲಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ 17 ಮಂದಿ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

ಸುಳ್ಳು ಆರೋಪ ಮಾಡಿದ್ದಾರೆಂದು ಗ್ರಾಮಸ್ಥರ ಆಕ್ರೋಶ

ಪ್ರಕರಣ ದಾಖಲಾಗುತ್ತಿದ್ದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಅವರು ಸುಳ್ಳು ದೂರು ನೀಡಿದ್ದಾರೆ, ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ವಾದಿಸಿದರು. ಪ್ರತಿಭಟನಾಕಾರರು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಇದೀಗ ಪೊಲೀಸರು ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us