AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?

ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.ಇದರೊಂದಿಗೆ ಅರಣ್ಯ ಇಲಾಖೆ ರೈತರಿಗೆ ನೆರವಾಗಿದೆ. ಏನದು?

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?
ಆನೆಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 18, 2023 | 1:21 PM

Share

ಚಾಮರಾಜನಗರ, ( ಆಗಸ್ಟ್ 18): ಕರ್ನಾಟಕದ ಹಲವೆಡೆ ಕಾಡಾನೆಗಳ (Elephant) ಹಾವಳಿ ಮಿತಿ ಮೀರಿದೆ. ಇದರಿಂದ ರೈತರು ರೋಸಿಹೋಗಿದ್ದಾರೆ. ಹೊಲ-ಗದ್ದೆ ತೋಟಗಳಿಗೆ ನುಗ್ಗಿ ರೈತ ಬೆಳೆದ ಬೆಳಗಳನ್ನು ನಾಶ ಮಾಡುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಆನೆಗಳಿಗೆ ಕಡಿವಾಣ ಹಾಕುವಂತೆ ರೈತರು, ಅರಣ್ಯ ಇಲಾಖೆಗೆ ಮನವಿ ಮಾಡುತ್ತಲ್ಲೇ ಇದ್ದಾರೆ. ಆದರೂ ಪದೇ ಪದೇ ಕಾಡಾನೆಗಳ ದಾಂಧಲೆ ಪ್ರಕರಣಗಳು ಹೆಚ್ಚುತ್ತಲ್ಲೇ ಇವೆ. ಹೀಗಾಗಿ ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ ಈವರೆಗೆ 312ಕಿಲೋಮೀಟರ್ ಉದ್ದದ ರೈಲು ಕಂಬಗಳ ತಡೆಗೋಡೆಯನ್ನು ನಿರ್ಮಿಸಿ, ಸಂಘರ್ಷ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಧಾನದ ವಿಡಿಯೋ ತುಣುಕನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ಯಾವುದೇ ಅಡೆತಡೆ ಇಲ್ಲದೆ ಬೆಳೆ ಬೆಳೆಯುತ್ತಿದ್ದರು. ಬೆಳೆಗಳಿಗೆ ಆನೆ ದಾಳಿಯಿಂದಾಗುವ ನಷ್ಟದಿಂದ ರೈತರು ಬೇಸತ್ತಿದ್ದರು. ಇದೀಗ ತಡೆಗೋಡೆಯನ್ನು ನಿರ್ಮಿಸಿದ್ದರಿಂದ ಆನೆ ದಾಳಿಯಿಂದ ಆ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೋಲಾರ್ ಬೇಲಿ, ಆನೆಕಂದಕಗಳಿಗಿಂತ ರೈಲ್ ಬ್ಯಾರಿಕೇಡ್ಗಳು ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ, ಸಂಪೂರ್ಣವಾಗಿ ಆನೆ ದಾಳಿಯನ್ನು ನಿಯಂತ್ರಿಸಲು ಇನ್ನೂ 331 ಕಿ.ಮೀ ಉದ್ದದ ರೈಲು ಬ್ಯಾರಿಕೇಡ್ ನಿರ್ಮಾಣದ ಅಗತ್ಯವಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಈ ಕುರಿತು ಅರಣ್ಯ ರಕ್ಷಕ ಆಯಾಜ್ ನೇರ್ಲಿ ಮಾಡಿದ 2 ನಿಮಿಷ 22 ಸೆಕೆಂಡ್​ಗಳ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಹಾಸನದಲ್ಲಿ ಮುಂದುವರೆದ ಕಾಡಾನೆ ಹಾವಳಿ, ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ

ಈ ಮೊದಲು ಸೊಲಾರ್ ಬೇಲಿಗಳನ್ನು ನಿರ್ಮಾಣ ಮಾಡುವುದು, ಆನೆ ಕಂದಕಗಳನ್ನು ನಿರ್ಮಿಸುವುದು ಹೀಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆನೆಗಳು ಜೇನುಹುಳುಗಳಿಗೆ ಹೆದರುವುದರಿಂದ ಜೇನುಗೂಡಿನ ಬೇಲಿಗಳನ್ನು ನಿರ್ಮಿಸಿ ಆನೆ ದಾಳಿಯನ್ನು ತಡೆಯುವ ಪ್ರಯತ್ನ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ರೈಲು ಬ್ಯಾರಿಕೇಡ್​ಗಳ ನಿರ್ಮಾಣವು, ಆನೆ ಮತ್ತು ಮಾನವರ ನಡುವೆ ಸಾಮರಸ್ಯ ಕಲ್ಪಿಸುವ ಈ ವಿನೂತನ ಮಾದರಿಯು ಸಹಕಾರಿಯಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್