AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?

ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.ಇದರೊಂದಿಗೆ ಅರಣ್ಯ ಇಲಾಖೆ ರೈತರಿಗೆ ನೆರವಾಗಿದೆ. ಏನದು?

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?
ಆನೆಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 18, 2023 | 1:21 PM

Share

ಚಾಮರಾಜನಗರ, ( ಆಗಸ್ಟ್ 18): ಕರ್ನಾಟಕದ ಹಲವೆಡೆ ಕಾಡಾನೆಗಳ (Elephant) ಹಾವಳಿ ಮಿತಿ ಮೀರಿದೆ. ಇದರಿಂದ ರೈತರು ರೋಸಿಹೋಗಿದ್ದಾರೆ. ಹೊಲ-ಗದ್ದೆ ತೋಟಗಳಿಗೆ ನುಗ್ಗಿ ರೈತ ಬೆಳೆದ ಬೆಳಗಳನ್ನು ನಾಶ ಮಾಡುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಆನೆಗಳಿಗೆ ಕಡಿವಾಣ ಹಾಕುವಂತೆ ರೈತರು, ಅರಣ್ಯ ಇಲಾಖೆಗೆ ಮನವಿ ಮಾಡುತ್ತಲ್ಲೇ ಇದ್ದಾರೆ. ಆದರೂ ಪದೇ ಪದೇ ಕಾಡಾನೆಗಳ ದಾಂಧಲೆ ಪ್ರಕರಣಗಳು ಹೆಚ್ಚುತ್ತಲ್ಲೇ ಇವೆ. ಹೀಗಾಗಿ ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ ಈವರೆಗೆ 312ಕಿಲೋಮೀಟರ್ ಉದ್ದದ ರೈಲು ಕಂಬಗಳ ತಡೆಗೋಡೆಯನ್ನು ನಿರ್ಮಿಸಿ, ಸಂಘರ್ಷ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಧಾನದ ವಿಡಿಯೋ ತುಣುಕನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ಯಾವುದೇ ಅಡೆತಡೆ ಇಲ್ಲದೆ ಬೆಳೆ ಬೆಳೆಯುತ್ತಿದ್ದರು. ಬೆಳೆಗಳಿಗೆ ಆನೆ ದಾಳಿಯಿಂದಾಗುವ ನಷ್ಟದಿಂದ ರೈತರು ಬೇಸತ್ತಿದ್ದರು. ಇದೀಗ ತಡೆಗೋಡೆಯನ್ನು ನಿರ್ಮಿಸಿದ್ದರಿಂದ ಆನೆ ದಾಳಿಯಿಂದ ಆ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೋಲಾರ್ ಬೇಲಿ, ಆನೆಕಂದಕಗಳಿಗಿಂತ ರೈಲ್ ಬ್ಯಾರಿಕೇಡ್ಗಳು ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ, ಸಂಪೂರ್ಣವಾಗಿ ಆನೆ ದಾಳಿಯನ್ನು ನಿಯಂತ್ರಿಸಲು ಇನ್ನೂ 331 ಕಿ.ಮೀ ಉದ್ದದ ರೈಲು ಬ್ಯಾರಿಕೇಡ್ ನಿರ್ಮಾಣದ ಅಗತ್ಯವಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಈ ಕುರಿತು ಅರಣ್ಯ ರಕ್ಷಕ ಆಯಾಜ್ ನೇರ್ಲಿ ಮಾಡಿದ 2 ನಿಮಿಷ 22 ಸೆಕೆಂಡ್​ಗಳ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಹಾಸನದಲ್ಲಿ ಮುಂದುವರೆದ ಕಾಡಾನೆ ಹಾವಳಿ, ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ

ಈ ಮೊದಲು ಸೊಲಾರ್ ಬೇಲಿಗಳನ್ನು ನಿರ್ಮಾಣ ಮಾಡುವುದು, ಆನೆ ಕಂದಕಗಳನ್ನು ನಿರ್ಮಿಸುವುದು ಹೀಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆನೆಗಳು ಜೇನುಹುಳುಗಳಿಗೆ ಹೆದರುವುದರಿಂದ ಜೇನುಗೂಡಿನ ಬೇಲಿಗಳನ್ನು ನಿರ್ಮಿಸಿ ಆನೆ ದಾಳಿಯನ್ನು ತಡೆಯುವ ಪ್ರಯತ್ನ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ರೈಲು ಬ್ಯಾರಿಕೇಡ್​ಗಳ ನಿರ್ಮಾಣವು, ಆನೆ ಮತ್ತು ಮಾನವರ ನಡುವೆ ಸಾಮರಸ್ಯ ಕಲ್ಪಿಸುವ ಈ ವಿನೂತನ ಮಾದರಿಯು ಸಹಕಾರಿಯಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ