AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?

ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.ಇದರೊಂದಿಗೆ ಅರಣ್ಯ ಇಲಾಖೆ ರೈತರಿಗೆ ನೆರವಾಗಿದೆ. ಏನದು?

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?
ಆನೆಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 18, 2023 | 1:21 PM

Share

ಚಾಮರಾಜನಗರ, ( ಆಗಸ್ಟ್ 18): ಕರ್ನಾಟಕದ ಹಲವೆಡೆ ಕಾಡಾನೆಗಳ (Elephant) ಹಾವಳಿ ಮಿತಿ ಮೀರಿದೆ. ಇದರಿಂದ ರೈತರು ರೋಸಿಹೋಗಿದ್ದಾರೆ. ಹೊಲ-ಗದ್ದೆ ತೋಟಗಳಿಗೆ ನುಗ್ಗಿ ರೈತ ಬೆಳೆದ ಬೆಳಗಳನ್ನು ನಾಶ ಮಾಡುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಆನೆಗಳಿಗೆ ಕಡಿವಾಣ ಹಾಕುವಂತೆ ರೈತರು, ಅರಣ್ಯ ಇಲಾಖೆಗೆ ಮನವಿ ಮಾಡುತ್ತಲ್ಲೇ ಇದ್ದಾರೆ. ಆದರೂ ಪದೇ ಪದೇ ಕಾಡಾನೆಗಳ ದಾಂಧಲೆ ಪ್ರಕರಣಗಳು ಹೆಚ್ಚುತ್ತಲ್ಲೇ ಇವೆ. ಹೀಗಾಗಿ ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ ಈವರೆಗೆ 312ಕಿಲೋಮೀಟರ್ ಉದ್ದದ ರೈಲು ಕಂಬಗಳ ತಡೆಗೋಡೆಯನ್ನು ನಿರ್ಮಿಸಿ, ಸಂಘರ್ಷ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಧಾನದ ವಿಡಿಯೋ ತುಣುಕನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ಯಾವುದೇ ಅಡೆತಡೆ ಇಲ್ಲದೆ ಬೆಳೆ ಬೆಳೆಯುತ್ತಿದ್ದರು. ಬೆಳೆಗಳಿಗೆ ಆನೆ ದಾಳಿಯಿಂದಾಗುವ ನಷ್ಟದಿಂದ ರೈತರು ಬೇಸತ್ತಿದ್ದರು. ಇದೀಗ ತಡೆಗೋಡೆಯನ್ನು ನಿರ್ಮಿಸಿದ್ದರಿಂದ ಆನೆ ದಾಳಿಯಿಂದ ಆ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೋಲಾರ್ ಬೇಲಿ, ಆನೆಕಂದಕಗಳಿಗಿಂತ ರೈಲ್ ಬ್ಯಾರಿಕೇಡ್ಗಳು ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ, ಸಂಪೂರ್ಣವಾಗಿ ಆನೆ ದಾಳಿಯನ್ನು ನಿಯಂತ್ರಿಸಲು ಇನ್ನೂ 331 ಕಿ.ಮೀ ಉದ್ದದ ರೈಲು ಬ್ಯಾರಿಕೇಡ್ ನಿರ್ಮಾಣದ ಅಗತ್ಯವಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಈ ಕುರಿತು ಅರಣ್ಯ ರಕ್ಷಕ ಆಯಾಜ್ ನೇರ್ಲಿ ಮಾಡಿದ 2 ನಿಮಿಷ 22 ಸೆಕೆಂಡ್​ಗಳ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಹಾಸನದಲ್ಲಿ ಮುಂದುವರೆದ ಕಾಡಾನೆ ಹಾವಳಿ, ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ

ಈ ಮೊದಲು ಸೊಲಾರ್ ಬೇಲಿಗಳನ್ನು ನಿರ್ಮಾಣ ಮಾಡುವುದು, ಆನೆ ಕಂದಕಗಳನ್ನು ನಿರ್ಮಿಸುವುದು ಹೀಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆನೆಗಳು ಜೇನುಹುಳುಗಳಿಗೆ ಹೆದರುವುದರಿಂದ ಜೇನುಗೂಡಿನ ಬೇಲಿಗಳನ್ನು ನಿರ್ಮಿಸಿ ಆನೆ ದಾಳಿಯನ್ನು ತಡೆಯುವ ಪ್ರಯತ್ನ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ರೈಲು ಬ್ಯಾರಿಕೇಡ್​ಗಳ ನಿರ್ಮಾಣವು, ಆನೆ ಮತ್ತು ಮಾನವರ ನಡುವೆ ಸಾಮರಸ್ಯ ಕಲ್ಪಿಸುವ ಈ ವಿನೂತನ ಮಾದರಿಯು ಸಹಕಾರಿಯಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್