AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?

ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.ಇದರೊಂದಿಗೆ ಅರಣ್ಯ ಇಲಾಖೆ ರೈತರಿಗೆ ನೆರವಾಗಿದೆ. ಏನದು?

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?
ಆನೆಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 18, 2023 | 1:21 PM

Share

ಚಾಮರಾಜನಗರ, ( ಆಗಸ್ಟ್ 18): ಕರ್ನಾಟಕದ ಹಲವೆಡೆ ಕಾಡಾನೆಗಳ (Elephant) ಹಾವಳಿ ಮಿತಿ ಮೀರಿದೆ. ಇದರಿಂದ ರೈತರು ರೋಸಿಹೋಗಿದ್ದಾರೆ. ಹೊಲ-ಗದ್ದೆ ತೋಟಗಳಿಗೆ ನುಗ್ಗಿ ರೈತ ಬೆಳೆದ ಬೆಳಗಳನ್ನು ನಾಶ ಮಾಡುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಆನೆಗಳಿಗೆ ಕಡಿವಾಣ ಹಾಕುವಂತೆ ರೈತರು, ಅರಣ್ಯ ಇಲಾಖೆಗೆ ಮನವಿ ಮಾಡುತ್ತಲ್ಲೇ ಇದ್ದಾರೆ. ಆದರೂ ಪದೇ ಪದೇ ಕಾಡಾನೆಗಳ ದಾಂಧಲೆ ಪ್ರಕರಣಗಳು ಹೆಚ್ಚುತ್ತಲ್ಲೇ ಇವೆ. ಹೀಗಾಗಿ ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ ಈವರೆಗೆ 312ಕಿಲೋಮೀಟರ್ ಉದ್ದದ ರೈಲು ಕಂಬಗಳ ತಡೆಗೋಡೆಯನ್ನು ನಿರ್ಮಿಸಿ, ಸಂಘರ್ಷ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಧಾನದ ವಿಡಿಯೋ ತುಣುಕನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ಯಾವುದೇ ಅಡೆತಡೆ ಇಲ್ಲದೆ ಬೆಳೆ ಬೆಳೆಯುತ್ತಿದ್ದರು. ಬೆಳೆಗಳಿಗೆ ಆನೆ ದಾಳಿಯಿಂದಾಗುವ ನಷ್ಟದಿಂದ ರೈತರು ಬೇಸತ್ತಿದ್ದರು. ಇದೀಗ ತಡೆಗೋಡೆಯನ್ನು ನಿರ್ಮಿಸಿದ್ದರಿಂದ ಆನೆ ದಾಳಿಯಿಂದ ಆ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೋಲಾರ್ ಬೇಲಿ, ಆನೆಕಂದಕಗಳಿಗಿಂತ ರೈಲ್ ಬ್ಯಾರಿಕೇಡ್ಗಳು ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ, ಸಂಪೂರ್ಣವಾಗಿ ಆನೆ ದಾಳಿಯನ್ನು ನಿಯಂತ್ರಿಸಲು ಇನ್ನೂ 331 ಕಿ.ಮೀ ಉದ್ದದ ರೈಲು ಬ್ಯಾರಿಕೇಡ್ ನಿರ್ಮಾಣದ ಅಗತ್ಯವಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಈ ಕುರಿತು ಅರಣ್ಯ ರಕ್ಷಕ ಆಯಾಜ್ ನೇರ್ಲಿ ಮಾಡಿದ 2 ನಿಮಿಷ 22 ಸೆಕೆಂಡ್​ಗಳ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಹಾಸನದಲ್ಲಿ ಮುಂದುವರೆದ ಕಾಡಾನೆ ಹಾವಳಿ, ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ

ಈ ಮೊದಲು ಸೊಲಾರ್ ಬೇಲಿಗಳನ್ನು ನಿರ್ಮಾಣ ಮಾಡುವುದು, ಆನೆ ಕಂದಕಗಳನ್ನು ನಿರ್ಮಿಸುವುದು ಹೀಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆನೆಗಳು ಜೇನುಹುಳುಗಳಿಗೆ ಹೆದರುವುದರಿಂದ ಜೇನುಗೂಡಿನ ಬೇಲಿಗಳನ್ನು ನಿರ್ಮಿಸಿ ಆನೆ ದಾಳಿಯನ್ನು ತಡೆಯುವ ಪ್ರಯತ್ನ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ರೈಲು ಬ್ಯಾರಿಕೇಡ್​ಗಳ ನಿರ್ಮಾಣವು, ಆನೆ ಮತ್ತು ಮಾನವರ ನಡುವೆ ಸಾಮರಸ್ಯ ಕಲ್ಪಿಸುವ ಈ ವಿನೂತನ ಮಾದರಿಯು ಸಹಕಾರಿಯಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ