AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಗುಡಿ ಕ್ಯಾಂಪ್​ನಲ್ಲಿ ಮರೆಯಾಗುತ್ತಾ ಮದಗಜಗಳ ಮೆರುಗು..!

ಸ್ವರ್ಗವನ್ನೇ ಸೃಷ್ಟಿಸಿರೋ ನಿಸರ್ಗ. ಭೂರಮೆಯ ತುಂಬೆಲ್ಲಾ ಹಸಿರಿನ ಹಾಸಿಗೆ. ಮಧುವಣಗಿತ್ತಿಯಂತೆ ಎಲೆಗಳಿಂದ ತುಂಬಿರೋ ಮರಗಿಡಗಳು. ಇಂಥ ಸೌಂದರ್ಯವನ್ನೂ ಕಣ್ತುಂಬಿಕೊಳ್ಳಲೆಂದೇ ಪ್ರವಾಸಿಗರು ಬರ್ತಿದ್ರು. ಆದ್ರೀಗ ಅದೇ ಸೌಂದರ್ಯಕ್ಕೆ ಮೆರುಗಂತಿದ್ದ ಆನೆ ಶಿಬಿರ ಮರೆಯಾಗೋ ಲಕ್ಷಣ ಕಾಣ್ತಿದೆ. ಪದಗಳಿಗೆ ನಿಲುಕದ ಪ್ರಕೃತಿ ಸೌಂದರ್ಯ. ನಡುವೆ ಸ್ವಚ್ಛಂದ ಜೀವಸಂಕುಲ. ನೋಡೋಕೆ ಎರಡು ಕಣ್ಣು ಸಾಲಲ್ಲ. ಚಾಮರಾಜನಗರ ಜಿಲ್ಲೆಯ ಬಿಳಿಗಿರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್​ನಲ್ಲಿ ಬರುವ ಕ್ಯಾತೆರ ದೇವರ ಗುಡಿ ವನ್ಯಜೀವಿ ಪ್ರಿಯರ ಅಚ್ಚುಮೆಚ್ಚಿನ ಸ್ಪಾಟ್. ಹೀಗಾಗೇ ರಜಾ ದಿನಗಳು […]

ಕೆ.ಗುಡಿ ಕ್ಯಾಂಪ್​ನಲ್ಲಿ ಮರೆಯಾಗುತ್ತಾ ಮದಗಜಗಳ ಮೆರುಗು..!
ಸಾಧು ಶ್ರೀನಾಥ್​
|

Updated on: Nov 29, 2019 | 8:27 AM

Share

ಸ್ವರ್ಗವನ್ನೇ ಸೃಷ್ಟಿಸಿರೋ ನಿಸರ್ಗ. ಭೂರಮೆಯ ತುಂಬೆಲ್ಲಾ ಹಸಿರಿನ ಹಾಸಿಗೆ. ಮಧುವಣಗಿತ್ತಿಯಂತೆ ಎಲೆಗಳಿಂದ ತುಂಬಿರೋ ಮರಗಿಡಗಳು. ಇಂಥ ಸೌಂದರ್ಯವನ್ನೂ ಕಣ್ತುಂಬಿಕೊಳ್ಳಲೆಂದೇ ಪ್ರವಾಸಿಗರು ಬರ್ತಿದ್ರು. ಆದ್ರೀಗ ಅದೇ ಸೌಂದರ್ಯಕ್ಕೆ ಮೆರುಗಂತಿದ್ದ ಆನೆ ಶಿಬಿರ ಮರೆಯಾಗೋ ಲಕ್ಷಣ ಕಾಣ್ತಿದೆ.

ಪದಗಳಿಗೆ ನಿಲುಕದ ಪ್ರಕೃತಿ ಸೌಂದರ್ಯ. ನಡುವೆ ಸ್ವಚ್ಛಂದ ಜೀವಸಂಕುಲ. ನೋಡೋಕೆ ಎರಡು ಕಣ್ಣು ಸಾಲಲ್ಲ. ಚಾಮರಾಜನಗರ ಜಿಲ್ಲೆಯ ಬಿಳಿಗಿರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್​ನಲ್ಲಿ ಬರುವ ಕ್ಯಾತೆರ ದೇವರ ಗುಡಿ ವನ್ಯಜೀವಿ ಪ್ರಿಯರ ಅಚ್ಚುಮೆಚ್ಚಿನ ಸ್ಪಾಟ್. ಹೀಗಾಗೇ ರಜಾ ದಿನಗಳು ಬಂದ್ರೆ ಫ್ಯಾಮಿಲಿ ಸಮೇತ ಪ್ರವಾಸಕ್ಕೆ ಬರ್ತಾರೆ.

ಆನೆ ಶಿಬಿರ ಬಂದ್ ಮಾಡಲು ನಿರ್ಧಾರ: ಅದ್ರಲ್ಲೂ ಕಳೆದ ಒಂದು ದಶಕದ ಹಿಂದೆ ಕೆ.ಗುಡಿ ಆನೆ ಶಿಬಿರದಲ್ಲಿ 15ಆನೆಗಳಿದ್ದು ಪ್ರವಾಸಿಗರು ಆನೆ ಮೇಲೆ ಕುಳಿತು ಸಫಾರಿ ಮಾಡ್ತಿದ್ರು. ಜೊತೆಗೆ ವಿಶ್ವವಿಖ್ಯಾತ ಮೈಸೂರು ದಸರೆಯಲ್ಲೂ ಇಲ್ಲಿಂದ ಮೂರು ಆನೆಗಳು ಭಾಗಿಯಗ್ತಿದ್ವು. ಆದ್ರೀಗ ಸಫಾರಿ ಮಾಯವಾಗಿದ್ದು, ದುರ್ಗಾ ಪರಮೇಶ್ವರಿ ಮತ್ತು ಗಜೇಂದ್ರ ಆನೆ ಮಾತ್ರ ಇವೆ. ಅದೇ ಆನೆಗಳನ್ನ ನೋಡಿ ಖುಷಿ ಪಡ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಲು ಮುಂದಾಗಿದೆ. ಆನೆ ಶಿಬಿರವನ್ನ ಬಂದ್ ಮಾಡುವುದರ ಜೊತೆಗೆ ಇರುವ ಆನೆಗಳನ್ನ ಬೇರೆ ಶಿಬಿರಕ್ಕೆ ಕಳುಹಿಸಲು ಪ್ಲ್ಯಾನ್ ಮಾಡಿದೆ.

ಅರಣ್ಯ ಇಲಾಖೆ ಕ್ರಮಕ್ಕೆ ಸ್ಥಳೀಯರ ವಿರೋಧ: ಆನೆ ಶಿಬಿರ ಬಂದ್ ಮಾಡಿ ಆನೆಗಳನ್ನ ಎತ್ತಂಗಡಿ ಮಾಡಲು ಹೊರಟಿರುವ ಅರಣ್ಯ ಇಲಾಖೆ ಕ್ರಮಕ್ಕೆ ವನ್ಯಜೀವಿ ಪ್ರಿಯರ ಜೊತೆ ಸ್ಥಳೀಯರು ವಿರೋಧ ವ್ಯಕ್ತ ಪಡಿಸಿದ್ದಾರೆ. ಕೆ.ಗುಡಿಯಲ್ಲಿ ಸಫಾರಿ ಮಾಡುವುದು ಒಂದು ಭಾಗವಾಗಿದ್ರೆ ಆನೆ ಶಿಬಿರವೂ ಆಕರ್ಷಣೀಯವಾಗಿತ್ತು. ಸಫಾರಿ ವೇಳೆ ವನ್ಯಜೀವಿಗಳು ಕಾಣದೇ ಇದ್ದಾಗ ಶಿಬಿರದಲ್ಲಿದ್ದ ಆನೆ ಮತ್ತು ಜಿಂಕೆಗಳನ್ನ ನೋಡಿ ಖುಷಿ ಪಡ್ತಿದ್ರು. ಆದ್ರೆ ಇನ್ಮುಂದೆ ಅವೂ ಇರಲ್ಲ ಅನ್ನೋದು ಪ್ರವಾಸಿಗರಿಗೆ ನಿರಾಸೆ ಮೂಡಿಸಿದೆ.

ಅರಣ್ಯ ಇಲಾಖೆಗೆ ಆದಾಯದ ಚಿಂತೆ. ಪ್ರವಾಸಿಗರಿಗೆ ಪ್ರಕೃತಿಯ ಆಸೆ. ಆದ್ರೀಗ ಇದ್ದ ಎರಡು ಆನೆಗಳನ್ನೂ ಬೇರೆಡೆ ಕಳುಹಿಸಲು ಪ್ಲ್ಯಾನ್ ರೆಡಿಯಾಗಿದೆ. ಹೀಗಾಗಿ ಇನ್ಮುಂದೆ ಆನೆಗಳು ನೋಡೋಕೆ ಸಿಗಲ್ವಲ್ಲ ಅನ್ನೋ ನಿರಾಸೆ ಪ್ರವಾಸಿಗರಿಗೆ ಶುರುವಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ