ಚಾಮರಾಜನಗರ ಆಕ್ಸಿಜನ್ ಪ್ರಕರಣ; ವರ್ಗಾವಣೆ ಬೆನ್ನಲ್ಲೆ ರಿಲೀಸ್ ಆಯ್ತು ರೋಹಿಣಿ ಸಿಂಧೂರಿ ಅವರ ಶಾಕಿಂಗ್ ಆಡಿಯೋ

ಮೈಸೂರಿನ ಸದರನ್ ಗ್ಯಾಸ್ ಏಜೆನ್ಸಿ ಜೊತೆ ರೋಹಿಣಿ ಸಿಂಧೂರಿ ಮಾತುಕತೆ ನಡೆಸಿದ್ದಾರೆ. ರಿಲೀಸ್ ಮಾಡಲಾಗಿರುವ ಆಡಿಯೋದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಏಕೆ ಅಷ್ಟು ಆಕ್ಸಿಜನ್ ಕೊಡುತ್ತಿದ್ದೀರಾ? ಸರಿಯಾಗಿ ಮಾಹಿತಿ ಪಡೆದು ಆಕ್ಸಿಜನ್ ಪೂರೈಕೆ ಮಾಡಿ. ನೀನು ಆಕ್ಸಿಜನ್ ಪೂರೈಕೆ ಮಾಡುತ್ತಿರುವ 43 ಆಸ್ಪತ್ರೆಗಳ ರೆಕಾರ್ಡ್ ತೆಗೆದು ಕೊಂಡು ಕಚೇರಿಗೆ ಬಾ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ಇದಕ್ಕೆ ಆಯ್ತು ಮೇಡಂ ಬರುತ್ತೇನೆ ಎಂದು ಸಿಬ್ಬಂದಿ ಹೇಳಿದ್ದಾರೆ.

ಚಾಮರಾಜನಗರ ಆಕ್ಸಿಜನ್ ಪ್ರಕರಣ; ವರ್ಗಾವಣೆ ಬೆನ್ನಲ್ಲೆ ರಿಲೀಸ್ ಆಯ್ತು ರೋಹಿಣಿ ಸಿಂಧೂರಿ ಅವರ ಶಾಕಿಂಗ್ ಆಡಿಯೋ
ರೋಹಿಣಿ ಸಿಂಧೂರಿ
Follow us
| Updated By: ಆಯೇಷಾ ಬಾನು

Updated on:Jun 06, 2021 | 2:36 PM

ಚಾಮರಾಜನಗರ: ಮೇ 2 ರಂದು ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 37 ಜನ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಗ್ಯಾಸ್ ಏಜೆನ್ಸಿ ಮಾಲೀಕನ ನಡುವೆ ನಡೆದ ಸಂಭಾಷಣೆಯ ಆಡಿಯೋವನ್ನು ಬಿಜೆಪಿ ಮುಖಂಡ ಅಮ್ಮನಪುರ ಮಲ್ಲೇಶ್ ಆಡಿಯೋ ರಿಲೀಸ್ ಮಾಡಿದ್ದಾರೆ.

ಮೈಸೂರಿನ ಸದರನ್ ಗ್ಯಾಸ್ ಏಜೆನ್ಸಿ ಜೊತೆ ರೋಹಿಣಿ ಸಿಂಧೂರಿ ಮಾತುಕತೆ ನಡೆಸಿದ್ದಾರೆ. ರಿಲೀಸ್ ಮಾಡಲಾಗಿರುವ ಆಡಿಯೋದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಏಕೆ ಅಷ್ಟು ಆಕ್ಸಿಜನ್ ಕೊಡುತ್ತಿದ್ದೀರಾ? ಸರಿಯಾಗಿ ಮಾಹಿತಿ ಪಡೆದು ಆಕ್ಸಿಜನ್ ಪೂರೈಕೆ ಮಾಡಿ. ನೀನು ಆಕ್ಸಿಜನ್ ಪೂರೈಕೆ ಮಾಡುತ್ತಿರುವ 43 ಆಸ್ಪತ್ರೆಗಳ ರೆಕಾರ್ಡ್ ತೆಗೆದು ಕೊಂಡು ಕಚೇರಿಗೆ ಬಾ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ಇದಕ್ಕೆ ಆಯ್ತು ಮೇಡಂ ಬರುತ್ತೇನೆ ಎಂದು ಸಿಬ್ಬಂದಿ ಹೇಳಿದ್ದಾರೆ.

ಹಾಗೂ ಮೈಸೂರು ಎಡಿಸಿ ನಾಗಾರಾಜು ಮತ್ತು ಪದಕಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ ನಡುವೆ ನಡೆದ ಆಡಿಯೋ ಕೂಡ ರಿಲೀಸ್ ಆಗಿದೆ. ಈ ವಿಡಿಯೋದಲ್ಲಿ ಎಡಿಸಿ ನಾಗಾರಾಜು ಪದಕಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ ಜೊತೆ ಮಾತನಾಡಿದ್ದಾರೆ. ಚಾಮರಾಜನಗರದಲ್ಲಿ ಮೆಡಿಕಲ್ ಎಮರ್ಜೆನ್ಸಿ ಆಗಿದೆ. ದಯವಿಟ್ಟು ಆಕ್ಸಿಜನ್ ಸಿಲಿಂಡರ್ ಕಳುಹಿಸಿ ಕೊಡು. ಈಗ ತಾನೇ ಸದರನ್ ಗ್ಯಾಸ್ ಏಜೆನ್ಸಿ ಮುಂಭಾಗದಿಂದ ಲಿಕ್ವಿಡ್ ಅಕ್ಸಿಜನ್ ಟ್ಯಾಂಕರ್ ಹೋಗಿದೆ. ನಾವು ಕೂಡ ಸದರನ್ ಗ್ಯಾಸ್ ಏಜೆನ್ಸಿಯಲ್ಲಿ ಇದ್ದು, ಸಿಲಿಂಡರ್ ಫಿಲ್ ಮಾಡಿಸುತ್ತಿದ್ದೇವೆ. ನೀವು ಕೂಡ 50 ಸಿಲಿಂಡರ್ ತುಂಬಿಸಿ ಕೊಡಿ ಎಂದು ಮೈಸೂರು ಎಡಿಸಿ ನಾಗಾರಾಜು ಸಿಬ್ಬಂದಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಆಡಿಯೋ ಸಂಭಾಷಣೆ ಸತೀಶ್: ಗ್ಯಾಸ್ ಟ್ಯಾಂಕರ್ ಬಂತಾ, ಯಾವಾಗ, ಎಷ್ಟೋತ್ತಿನಲ್ಲಿ. ಇನ್ನೂ ಆಕ್ಸಿಜನ್ ಬಂದಿಲ್ಲ. ನಾಗರಾಜು: ಸದ್ಯಕ್ಕೆ ಲಭ್ಯವಿರುವ ಸಿಲಿಂಡರ್ ಕಳುಹಿಸಿ ಕೊಡಿ, ಇದು ವಾದ ಮಾಡುವ ಸಮಯವಲ್ಲ. ಸದ್ಯಕ್ಕೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಸತೀಶ್: ನೀವು ಲೋಕಲ್ ಡಿಸಿ ಜೊತೆ ಕಾಲ್ ಮಾಡಿಸಿ, ನಾನು ಆಗ ಕೊಡುತ್ತೇನೆ, ಆ ಯಮ್ಮಾ ಸರಿ ಇಲ್ಲ, ಕೊಡ ಬೇಡ ಎಂದಿದ್ದಾರೆ. ನಾಗರಾಜು: ಡಿಸಿ ಅವರ ಪಿಎ ಜೊತೆ ಕರೆ ಮಾಡಿಸಲೇ.. ಸತೀಶ್: ಬೇಡ ಡಿಸಿ ಅವರ ಜೊತೆಗೆ ಕರೆ ಮಾಡಿಸಿ, ನಾನು ಅವಾಗ ಕೊಡುತ್ತೇನೆ. ನಮ್ಮ ಬಳಿ ಇರೋದು ಕೇವಲ ಐವತ್ತು ಟನ್ ಆಕ್ಸಿಜನ್ ಮಾತ್ರ. ಡಿಸಿ ಹೇಳುವ ತನಕ ಕೊಡುವುದಕ್ಕೆ ಆಗುವುದಿಲ್ಲ.

ಇದನ್ನೂ ಓದಿ: ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ

Published On - 2:32 pm, Sun, 6 June 21

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ