AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಆಕ್ಸಿಜನ್ ಪ್ರಕರಣ; ವರ್ಗಾವಣೆ ಬೆನ್ನಲ್ಲೆ ರಿಲೀಸ್ ಆಯ್ತು ರೋಹಿಣಿ ಸಿಂಧೂರಿ ಅವರ ಶಾಕಿಂಗ್ ಆಡಿಯೋ

ಮೈಸೂರಿನ ಸದರನ್ ಗ್ಯಾಸ್ ಏಜೆನ್ಸಿ ಜೊತೆ ರೋಹಿಣಿ ಸಿಂಧೂರಿ ಮಾತುಕತೆ ನಡೆಸಿದ್ದಾರೆ. ರಿಲೀಸ್ ಮಾಡಲಾಗಿರುವ ಆಡಿಯೋದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಏಕೆ ಅಷ್ಟು ಆಕ್ಸಿಜನ್ ಕೊಡುತ್ತಿದ್ದೀರಾ? ಸರಿಯಾಗಿ ಮಾಹಿತಿ ಪಡೆದು ಆಕ್ಸಿಜನ್ ಪೂರೈಕೆ ಮಾಡಿ. ನೀನು ಆಕ್ಸಿಜನ್ ಪೂರೈಕೆ ಮಾಡುತ್ತಿರುವ 43 ಆಸ್ಪತ್ರೆಗಳ ರೆಕಾರ್ಡ್ ತೆಗೆದು ಕೊಂಡು ಕಚೇರಿಗೆ ಬಾ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ಇದಕ್ಕೆ ಆಯ್ತು ಮೇಡಂ ಬರುತ್ತೇನೆ ಎಂದು ಸಿಬ್ಬಂದಿ ಹೇಳಿದ್ದಾರೆ.

ಚಾಮರಾಜನಗರ ಆಕ್ಸಿಜನ್ ಪ್ರಕರಣ; ವರ್ಗಾವಣೆ ಬೆನ್ನಲ್ಲೆ ರಿಲೀಸ್ ಆಯ್ತು ರೋಹಿಣಿ ಸಿಂಧೂರಿ ಅವರ ಶಾಕಿಂಗ್ ಆಡಿಯೋ
ರೋಹಿಣಿ ಸಿಂಧೂರಿ
Follow us
TV9 Web
| Updated By: ಆಯೇಷಾ ಬಾನು

Updated on:Jun 06, 2021 | 2:36 PM

ಚಾಮರಾಜನಗರ: ಮೇ 2 ರಂದು ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 37 ಜನ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಗ್ಯಾಸ್ ಏಜೆನ್ಸಿ ಮಾಲೀಕನ ನಡುವೆ ನಡೆದ ಸಂಭಾಷಣೆಯ ಆಡಿಯೋವನ್ನು ಬಿಜೆಪಿ ಮುಖಂಡ ಅಮ್ಮನಪುರ ಮಲ್ಲೇಶ್ ಆಡಿಯೋ ರಿಲೀಸ್ ಮಾಡಿದ್ದಾರೆ.

ಮೈಸೂರಿನ ಸದರನ್ ಗ್ಯಾಸ್ ಏಜೆನ್ಸಿ ಜೊತೆ ರೋಹಿಣಿ ಸಿಂಧೂರಿ ಮಾತುಕತೆ ನಡೆಸಿದ್ದಾರೆ. ರಿಲೀಸ್ ಮಾಡಲಾಗಿರುವ ಆಡಿಯೋದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಏಕೆ ಅಷ್ಟು ಆಕ್ಸಿಜನ್ ಕೊಡುತ್ತಿದ್ದೀರಾ? ಸರಿಯಾಗಿ ಮಾಹಿತಿ ಪಡೆದು ಆಕ್ಸಿಜನ್ ಪೂರೈಕೆ ಮಾಡಿ. ನೀನು ಆಕ್ಸಿಜನ್ ಪೂರೈಕೆ ಮಾಡುತ್ತಿರುವ 43 ಆಸ್ಪತ್ರೆಗಳ ರೆಕಾರ್ಡ್ ತೆಗೆದು ಕೊಂಡು ಕಚೇರಿಗೆ ಬಾ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ಇದಕ್ಕೆ ಆಯ್ತು ಮೇಡಂ ಬರುತ್ತೇನೆ ಎಂದು ಸಿಬ್ಬಂದಿ ಹೇಳಿದ್ದಾರೆ.

ಹಾಗೂ ಮೈಸೂರು ಎಡಿಸಿ ನಾಗಾರಾಜು ಮತ್ತು ಪದಕಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ ನಡುವೆ ನಡೆದ ಆಡಿಯೋ ಕೂಡ ರಿಲೀಸ್ ಆಗಿದೆ. ಈ ವಿಡಿಯೋದಲ್ಲಿ ಎಡಿಸಿ ನಾಗಾರಾಜು ಪದಕಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ ಜೊತೆ ಮಾತನಾಡಿದ್ದಾರೆ. ಚಾಮರಾಜನಗರದಲ್ಲಿ ಮೆಡಿಕಲ್ ಎಮರ್ಜೆನ್ಸಿ ಆಗಿದೆ. ದಯವಿಟ್ಟು ಆಕ್ಸಿಜನ್ ಸಿಲಿಂಡರ್ ಕಳುಹಿಸಿ ಕೊಡು. ಈಗ ತಾನೇ ಸದರನ್ ಗ್ಯಾಸ್ ಏಜೆನ್ಸಿ ಮುಂಭಾಗದಿಂದ ಲಿಕ್ವಿಡ್ ಅಕ್ಸಿಜನ್ ಟ್ಯಾಂಕರ್ ಹೋಗಿದೆ. ನಾವು ಕೂಡ ಸದರನ್ ಗ್ಯಾಸ್ ಏಜೆನ್ಸಿಯಲ್ಲಿ ಇದ್ದು, ಸಿಲಿಂಡರ್ ಫಿಲ್ ಮಾಡಿಸುತ್ತಿದ್ದೇವೆ. ನೀವು ಕೂಡ 50 ಸಿಲಿಂಡರ್ ತುಂಬಿಸಿ ಕೊಡಿ ಎಂದು ಮೈಸೂರು ಎಡಿಸಿ ನಾಗಾರಾಜು ಸಿಬ್ಬಂದಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಆಡಿಯೋ ಸಂಭಾಷಣೆ ಸತೀಶ್: ಗ್ಯಾಸ್ ಟ್ಯಾಂಕರ್ ಬಂತಾ, ಯಾವಾಗ, ಎಷ್ಟೋತ್ತಿನಲ್ಲಿ. ಇನ್ನೂ ಆಕ್ಸಿಜನ್ ಬಂದಿಲ್ಲ. ನಾಗರಾಜು: ಸದ್ಯಕ್ಕೆ ಲಭ್ಯವಿರುವ ಸಿಲಿಂಡರ್ ಕಳುಹಿಸಿ ಕೊಡಿ, ಇದು ವಾದ ಮಾಡುವ ಸಮಯವಲ್ಲ. ಸದ್ಯಕ್ಕೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಸತೀಶ್: ನೀವು ಲೋಕಲ್ ಡಿಸಿ ಜೊತೆ ಕಾಲ್ ಮಾಡಿಸಿ, ನಾನು ಆಗ ಕೊಡುತ್ತೇನೆ, ಆ ಯಮ್ಮಾ ಸರಿ ಇಲ್ಲ, ಕೊಡ ಬೇಡ ಎಂದಿದ್ದಾರೆ. ನಾಗರಾಜು: ಡಿಸಿ ಅವರ ಪಿಎ ಜೊತೆ ಕರೆ ಮಾಡಿಸಲೇ.. ಸತೀಶ್: ಬೇಡ ಡಿಸಿ ಅವರ ಜೊತೆಗೆ ಕರೆ ಮಾಡಿಸಿ, ನಾನು ಅವಾಗ ಕೊಡುತ್ತೇನೆ. ನಮ್ಮ ಬಳಿ ಇರೋದು ಕೇವಲ ಐವತ್ತು ಟನ್ ಆಕ್ಸಿಜನ್ ಮಾತ್ರ. ಡಿಸಿ ಹೇಳುವ ತನಕ ಕೊಡುವುದಕ್ಕೆ ಆಗುವುದಿಲ್ಲ.

ಇದನ್ನೂ ಓದಿ: ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ

Published On - 2:32 pm, Sun, 6 June 21

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ