ಸೋಲಿಗರಿಗೆ ಸೂರು: ‘ಸಿದ್ದು ನಿವಾಸ’ ಹೆಸರಿನಡಿ ಕಾಡಿನ ಮಕ್ಕಳಿಗೆ ಸಿಗಲಿದೆ ಮನೆ

ಚಾಮರಾಜನಗರ ಜಿಲ್ಲೆಯಲ್ಲಿ ಸುಮಾರು 32,000 ಸೋಲಿಗ ಕುಟುಂಬಗಳು ಅರಣ್ಯ ಮತ್ತು ಅರಣ್ಯದಂಚಿನಲ್ಲಿ ಕಳಪೆ ವಾಸಸ್ಥಿತಿಯಲ್ಲಿ ವಾಸಿಸುತ್ತಿವೆ. ಜಿಲ್ಲಾಡಳಿತವು 2995 ಮನೆಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸಿದ್ದು ನಿವಾಸ ಎಂದು ಯೋಜನೆಗೆ ಹೆಸರಿಡುವ ಚಿಂತನೆ ಮಾಡಲಾಗುತ್ತಿದೆ. ಒಟ್ಟು 150 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಗೆ ಸರ್ಕಾರದ ಅನುಮೋದನೆ ನಿರೀಕ್ಷಿಸಲಾಗಿದೆ.

ಸೋಲಿಗರಿಗೆ ಸೂರು: ಸಿದ್ದು ನಿವಾಸ ಹೆಸರಿನಡಿ ಕಾಡಿನ ಮಕ್ಕಳಿಗೆ ಸಿಗಲಿದೆ ಮನೆ
ಸೋಲಿಗರಿಗೆ ಸೂರು: 'ಸಿದ್ದು ನಿವಾಸ' ಹೆಸರಿನಡಿ ಕಾಡಿನ ಮಕ್ಕಳಿಗೆ ಸಿಗಲಿದೆ ಮನೆ
Edited By:

Updated on: Dec 05, 2024 | 6:40 PM

ಚಾಮರಾಜನಗರ, ಡಿಸೆಂಬರ್​ 05: ಅವರೆಲ್ಲಾ ಕಾಡಿನ ಮಕ್ಕಳು. ಸ್ವಾತಂತ್ರ್ಯಪೂರ್ವದಿಂದಲೂ ಕಾಡಿನಲ್ಲಿ ವಾಸಿಸುತ್ತಿದ್ದಾರೆ. ಸೋಲಿಗರು ಸೋರುವ ಹಳೆಯ ಮನೆ (house) ಜೋಪುಡಿಗಳಲ್ಲಿ ಇಂದಿಗೂ ವಾಸಿಸುತ್ತಿದ್ದಾರೆ. ಇಂತಹ ಸೋಲಿಗರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ವಿಶೇಷ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿದೆ. ಸಿದ್ದು ನಿವಾಸ ಹೆಸರಿನಡಿ ಸೋಲಿಗರಿಗೆ ಸೂರು ಸಿಗಲಿದೆ.

ಜಿಲ್ಲಾಡಳಿತದಿಂದ ಸರ್ಕಾರಕ್ಕೆ 2995 ಮನೆ ನಿರ್ಮಿಸಲು ಪ್ರಸ್ತಾವನೆ

ಗಡಿ ಜಿಲ್ಲೆ ಚಾಮರಾಜನಗರದ ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ಸುಮಾರು 32 ಸಾವಿರಕ್ಕೂ ಹೆಚ್ಚು ಬುಡಕಟ್ಟು ಸೋಲಿಗ ಕುಟುಂಬಗಳು ವಾಸ ಮಾಡುತ್ತಿವೆ. ಬಹುತೇಕ ಸೋಲಿಗರು ವಾಸ ಮಾಡ್ತಿರುವ ಮನೆಗಳು ಸುಸ್ಥಿತಿಯಲ್ಲಿಲ್ಲ. ಚಿಕ್ಕ ಮಣ್ಣಿನ ಗೋಡೆಯ ಮನೆಗಳು ಹಾಗೂ ಜೋಪುಡಿಗಳಲ್ಲಿ ಇಂದಿಗೂ ಕೂಡ ಸೋಲಿಗರು ವಾಸ ಮಾಡ್ತಿದ್ದಾರೆ. ಅರಣ್ಯದಂಚಿನಲ್ಲಿರುವ ಜೇನು ಕುರುಬರಿಗೆ ಮಾತ್ರ ಹಿಂದಿನಿಂದಲೂ ಸರ್ಕಾರದ ವತಿಯಿಂದ ಪಾರಂಪರಿಕವಾಗಿ ಅವರಿಗೆ 4.50 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗುತ್ತಿದೆ.

ಇದನ್ನೂ ಓದಿ: ಚಾಮರಾಜನಗರ: ಖಾಸಗಿ ಶಾಲೆಗಳನ್ನೂ ಮೀರಿಸಿದೆ ಸುಸಜ್ಜಿತ ಸರ್ಕಾರಿ ಶಾಲೆ! ಹಳೆ ವಿದ್ಯಾರ್ಥಿಗಳೇ ಕಟ್ಟಿದ್ರು ಹೈಟೆಕ್ ಸ್ಕೂಲ್

ಆದರೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜೇನು ಕುರುಬ ಸಮುದಾಯಕ್ಕಿಂತ ಹೆಚ್ಚಾಗಿ ಬೇರೆ ಸಮುದಾಯದ ಸೋಲಿಗರು ವಾಸ ಮಾಡಿಕೊಂಡು ಬರುತ್ತಿದ್ದಾರೆ. ಇತರ ಸಮುದಾಯದ ಸೋಲಿಗರಿಗೂ ಕೂಡ ಮನೆ ಕಟ್ಟಿಕೊಡಲೂ ಜಿಲ್ಲಾಡಳಿತ ಪ್ಲ್ಯಾನ್ ಮಾಡಿದ್ದು, ಸರ್ಕಾರಕ್ಕೆ 2995 ಮನೆ ನಿರ್ಮಿಸುವ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದೆ.

ನಿವೇಶನದ ಜೊತೆಗೆ ಮನೆ ನಿರ್ಮಿಸಿ ಕೊಡಲು ತೀರ್ಮಾನ

ಇನ್ನೂ ಸೋಲಿಗರಿಗೆ ಮನೆ ನಿರ್ಮಿಸಿಕೊಡುವ ಬಗ್ಗೆ ಚಿಂತನೆ ನಡೆಸಿದ್ದ ಜಿಲ್ಲಾಡಳಿತ ಮೊದಲಿಗೆ ಸರ್ವೇ ಕಾರ್ಯ ನಡೆಸಿತ್ತು. ಈ ವೇಳೆ 243 ಕುಟುಂಬಗಳಿಗೆ ಮನೆಯಷ್ಟೇ ಅಲ್ಲ ನಿವೇಶನ ಕೂಡ ಇಲ್ಲದಿರುವುದು ಕಂಡು ಬಂದಿದೆ. ಅಂತಹ ಕುಟುಂಬಗಳಿಗೂ ಕೂಡ ನಿವೇಶನದ ಜೊತೆಗೆ ಮನೆ ನಿರ್ಮಿಸಿ ಕೊಡಲು ತೀರ್ಮಾನಿಸಲಾಗಿದೆ.

ಒಟ್ಟಾರೆ ಈ ಯೋಜನೆಗೆ ಒಂದು ಮನೆಗೆ 5 ಲಕ್ಷದಂತೆ 3 ಸಾವಿರ ಮನೆಗಳಿಗೆ 150 ಕೋಟಿ ರೂ. ಅಂದಾಜು ವೆಚ್ಚ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕೊಟ್ಟಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕೂಡ ಕೈ ಜೋಡಿಸಿದ್ದಾರೆ. ಅಲ್ಲದೇ ಸರ್ಕಾರ ಅನುಮೋದನೆ ಕೊಟ್ಟರೆ ಈ ಯೋಜನೆಗೆ ಸಿದ್ದು ನಿವಾಸ ಯೋಜನೆ ಎಂದು ಹೆಸರಿಡಲೂ ಕೂಡ ಚಿಂತಿಸಿದ್ದಾರೆ.

ಇದನ್ನೂ ಓದಿ: ಫೆಂಗಲ್ ಚಂಡಮಾರುತ ಎಫೆಕ್ಟ್: ವರ್ಷದಲ್ಲೇ ಎರಡೆರಡು ಬಾರಿ ತುಂಬಿದ ಸುವರ್ಣಾವತಿ ಡ್ಯಾಂ

ಒಟ್ಟಾರೆಯಾಗಿ, ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಸೋಲಿಗರಿಗೆ ಸೂರನ್ನು ಒದಗಿಸಿ ಕೊಡಲು ಜಿಲ್ಲಾಡಳಿತ ಸರ್ಕಾರಕ್ಕೆ ವಿಶೇಷ ಪ್ರಸ್ತಾವನೆ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಡಿ ಜನರ ಕಷ್ಟಗಳನ್ನು ಅರಿತಿದ್ದಾರೆ. ಆದ್ರಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಂಪುಟ ಈ ವಿಶೇಷ ಯೋಜನೆಗೆ ಅಸ್ತು ಅಂತಾರಾ ಅಥವಾ ಇಲ್ವಾ ಅನ್ನೋದ್ನ ಕಾದುನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us