AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ದಾಳಿಯಿಂದ ಗಂಭೀರ ಗಾಯಗೊಡಿದ್ದ ಬಾಲಕಿ ಸಾವು; 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ ಈಶ್ವರ ಖಂಡ್ರೆ

ಇತ್ತೀಚೆಗೆ ಚಿರತೆ ದಾಳಿಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅದರಂತೆ ನಿನ್ನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಸೋಲಿಗರ ಹಾಡಿಯ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಇದರಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಇದೀಗ ಸಾವನ್ನಪ್ಪಿದ್ದಾಳೆ.

ಚಿರತೆ ದಾಳಿಯಿಂದ ಗಂಭೀರ ಗಾಯಗೊಡಿದ್ದ ಬಾಲಕಿ ಸಾವು; 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ ಈಶ್ವರ ಖಂಡ್ರೆ
ಚಿರತೆ ದಾಳಿ ಬಾಲಕಿ ಸಾವು, ಈಶ್ವರ್​ ಖಂಡ್ರೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 15, 2023 | 1:12 PM

Share

ಚಾಮರಾಜನಗರ: ಚಿರತೆ(Leopard) ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಇದೀಗ ಸಾವನ್ನಪ್ಪಿದ್ದಾಳೆ. ಸುಶೀಲ(6) ಮೃತ ಬಾಲಕಿ. ಚಾಮರಾಜನಗರ ಜಿಲ್ಲೆಯ ಹನೂರು(Hanur) ತಾಲೂಕಿನ ಕಗ್ಗಲಿಗುಂದಿ ಸೋಲಿಗರ ಹಾಡಿಯಲ್ಲಿ ಬಾಲಕಿ ಮನೆಯಿಂದ ಹೊರಬಂದಿದ್ದ ವೇಳೆ ಚಿರತೆ ದಾಳಿ ಮಾಡಿ, ಎಳೆದೊಯ್ಯಲು ಯತ್ನಿಸಿತ್ತು. ಕೂಡಲೇ ಇದನ್ನ ನೋಡಿದ ಮನೆಯವರು ಕೂಗಿಕೊಳ್ಳುತ್ತಿದ್ದಂತೆ ಬಿಟ್ಟು ಓಡಿತ್ತು. ಬಳಿಕ ಆಕೆಯನ್ನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಇದೀಗ ಗಂಭೀರ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ.

ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ನೀಡಲು ಸೂಚನೆ

ಇನ್ನು ಮಂತ್ರಿ ಆದ ನಂತರ ಮೊದಲನೇ ಬಾರಿ ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಚಿವ ಈಶ್ವರ​ ಖಂಡ್ರೆ ಮಾತನಾಡಿ ‘ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕಿ ಸುಶೀಲಾ ಸಾವು ವಿಚಾರ ಕೇಳಿ ಬೇಸರ ಆಗಿದ್ದು, ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ನೀಡಲು ಸೂಚನೆ ನೀಡಿ, 4 ಸಾವಿರ ಮಾಸಾಶನ ಬರುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟು ಜಾರಿಗೊಳಿಸಲು ಪ್ರಯತ್ನ ಪಡುತ್ತೇನೆ ಎಂದರು.

ಇದನ್ನೂ ಓದಿ:Leopard Attacks: ರಾಮನಗರ ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಿದ ಚಿರತೆ ದಾಳಿ ಭೀತಿ: ತಪ್ಪಿಸಿಕೊಳ್ಳಲು ಹೋಗಿ ಮರದಿಂದ ಕೆಳಗೆಬಿದ್ದ ಯುವತಿ

ಚಿರತೆ ದಾಳಿಯಿಂದ ಬದುಕುಳಿದ ಯುವ ರೈತ; ಚಿರತೆಯನ್ನ ಹಿಡಿಯಲು ಅರಣ್ಯಾಧಿಕಾರಿಗಳಿಂದ ಹರಸಾಹಸ

ಮೈಸೂರು: ಹುಣಸೂರು ತಾಲೂಕಿನ ಗ್ರಾಮದ ಸಂತೆಯಲ್ಲಿ 29 ವರ್ಷದ ಕುಮಾರಚಾರಿ ತನ್ನ ಸ್ನೇಹಿತರೊಂದಿಗೆ ಇದ್ದಾಗ ಚಿರತೆ ದಾಳಿ ಮಾಡಿತ್ತು. ಈ ವೇಳೆ ಭುಜ ಮತ್ತು ಮೊಣಕಾಲುಗಳಿಗೆ ಗಾಯಗಳಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಚಿರತೆ ದಾಳಿಯಿಂದ ಕಂಗಾಲಾಗಿರುವ ಗ್ರಾಮಸ್ಥರು, ಕೂಡಲೇ ಚಿರತೆಯನ್ನ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ