AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ರಾಜ್ಯದ ಮೊದಲ ಜಿಲ್ಲೆ ಯಾವುದು? ಸಿಪ್ ಬೈ ಸಿಪ್ ಮಾಹಿತಿ ಇಲ್ಲಿದೆ

ಇಷ್ಟು ದಿನ ತನ್ನ ಪ್ರಕೃತಿಯ ವೈವಿಧ್ಯತೆ, ಕಾಡು ಪ್ರಾಣಿಗಳು, ಅರಣ್ಯ ಪ್ರದೇಶದಿಂದ ಸದ್ದು ಮಾಡ್ತಾಯಿದ್ದ ಚಾಮರಾಜನಗರ ಜಿಲ್ಲೆ ಈಗ ಅತಿ ಅಗ್ಗದ ಮದ್ಯದ ಮಾರಾಟದಿಂದ ಸುದ್ದಿಯಾಗುತ್ತಿದೆ. ರಾಜ್ಯದಲ್ಲೇ ಅತಿ ಹೆಚ್ಚು ಅಗ್ಗದ ಮದ್ಯ ಸೇವಿಸುವ 2ನೇ ಜಿಲ್ಲೆಯಾಗಿ ಹೊರ ಹೊಮ್ಮಿದ್ದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ರಾಜ್ಯದ ಮೊದಲ ಜಿಲ್ಲೆ ಯಾವುದು? ಸಿಪ್ ಬೈ ಸಿಪ್ ಮಾಹಿತಿ ಇಲ್ಲಿದೆ
ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ಜಿಲ್ಲೆ ಯಾವುದು?
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Feb 14, 2024 | 2:23 PM

Share

ಸದಾ ಕಾಡು ಪ್ರಾಣಿ-ಮಾನವ ಸಂಘರ್ಷದಿಂದ ಸುದ್ದಿಯಲ್ಲಿ ಇರುವ ಗಡಿನಾಡು ಚಾಮರಾಜನಗರ ಜಿಲ್ಲೆ ಈಗ ಮದ್ಯದ ವಿಚಾರದಲ್ಲಿ ಸುದ್ದಿಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಅಗ್ಗದ ಬಿಯರ್ (Beer, Liquor) ಸೇವಿಸುವ 2ನೇ ಜಿಲ್ಲೆ ಎಂಬ ಹಣೆ ಪಟ್ಟಿ ದೊರೆತಿದೆ. ಹಾಗಿದ್ರೆ ಮೊದಲ ಸ್ಥಾನ ಯಾವ ಜಿಲ್ಲೆಗೆ ದೊರೆತಿದೆ ಚಾಮರಾಜನಗರದಲ್ಲೇ (Chamarajanagar) ಯಾಕೆ ಅತಿ ಹೆಚ್ಚು ಅಗ್ಗದ ಮದ್ಯ ಸೇಲ್ (Sale) ಆಗ್ತಾಯಿದೆ ಅಂತೀರಾ ಹಾಗಿದ್ರೆ ಈ ರಿಪೋರ್ಟ್ ನೋಡಿ.

ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಜಿಲ್ಲೆ ಎಂಬ ಖ್ಯಾತಿ ಪಡೆದಿರುವ ಗಡಿ ನಾಡು ಚಾಮರಾಜನಗರ ಜಿಲ್ಲೆ ಈಗ ಅತಿ ಹೆಚ್ಚು ಬಿಯರ್ ಸೇವಿಸುವ ಜಿಲ್ಲೆಗಳ ಪೈಕಿ ರಾಜ್ಯದಲ್ಲೆ ಎರಡನೇ ಸ್ಥಾನ ಪಡೆದು ಕೊಂಡಿದೆ. ಅಷ್ಟೇ ಅಲ್ಲ ಅಗ್ಗದ ಮದ್ಯ ಹೆಚ್ಚು ವ್ಯಾಪಾರ ಆಗುವ ಜಿಲ್ಲೆ ಎಂಬ ಹಣೆ ಪಟ್ಟಿಯನ್ನ ಪಡೆದಿದ್ದು ಅಬಕಾರಿ ಇಲಾಖೆಯ ಸರ್ವೆಯಲ್ಲಿ ಈ ವಿಷಯ ಈಗ ಬೆಳಕಿಗೆ ಬಂದಿದೆ. 2022 ಹಾಗೂ 2023 ನೇ ಸಾವಿನ ಅಂಕಿ ಅಂಶ ನೋಡಿದ್ರೆ ಈ ಬಾರಿ 78,658 ಬಾಕ್ಸ್ ಬಿಯರ್ ಹೆಚ್ಚಾಗಿ ಸೇಲ್ ಆಗಿದೆ. ಶೇ. 30 ಪರ್ಸೆಂಟ್ ಅಷ್ಟು ಏರಿಕೆ ಕಂಡಿದೆ. ರಾಜ್ಯದಲ್ಲೇ ಅತಿ ಹೆಚ್ಚು ಬಿಯರ್ ಸೇವಿಸುವ ಜಿಲ್ಲೆ ತುಮಕೂರು (Tumkur) ಮೊದಲ ಸ್ಥಾನ ಪಡೆದ್ರೆ, ಚಾಮರಾಜನಗರಕ್ಕೆ ರಾಜ್ಯದಲ್ಲೇ ಎರಡನೇ ಸ್ಥಾನ ಲಭಿಸಿದೆ.

ಇದನ್ನೂ ಓದಿ: ಸಿಎಂ ಕ್ಷೇತದಲ್ಲಿ ನಿವೃತ್ತ ಶಿಕ್ಷಕ ಹತ್ಯೆ ಕೇಸ್​, ಮದುವೆಯಾದರೂ ಅದೇ ಕುಟುಂಬದ ಟೆಕ್ಕಿ ಮೇಲೆ ಕ್ರಷ್! ವಾಮಾಚಾರ ಪೋಟೋದಿಂದ ಸಿಕ್ಕಿಬಿದ್ದ ಪೊಲೀಸಪ್ಪ!

ಇನ್ನು ಅತಿ ಹೆಚ್ಚಾಗಿ ಬಿಯರ್ ಸೇಲ್ ಆಗ್ತಾಯಿದೆ ನಿಜ, ಹಾಗಂತ ಯಾವ ಬ್ರಾಂಡ್ ಮಾರುಕಟ್ಟೆ ಬಿಕರಿಯಾಗ್ತಾಯಿದೆ ಅಂತ ನೋಡಿದ್ರೆ ಅಗ್ಗದ ಅಂದ್ರೆ ಕಡಿಮೆ ಬೆಲೆಯ ಬಿಯರ್ ಹಾಗೂ ಚೀಪರ್ ವಿಸ್ಕಿಗಳೇ ಅತಿ ಹೆಚ್ಚಾಗಿ ಮಾರಾಟ ಆಗ್ತಾಯಿದೆ. ಇದಕ್ಕೆ ಕಾರಣವೇನು ಎಂದು ನೋಡುವುದಾದ್ರೆ ಅತಿ ಹೆಚ್ಚು ಶ್ರಮಿಕ ವರ್ಗವಿರುವ ಕಾರಣ ಕಡಿಮೆ ಹಣಕ್ಕೆ ಸಿಗುವ ಮದ್ಯವನ್ನೇ ಚಾಮರಾಜನಗರ ಜಿಲ್ಲೆಯ ಜನತೆ ಆಯ್ಕೆ ಮಾಡಿ ಕೊಳ್ಳುತ್ತಿದ್ದಾರೆ. ಅಬಕಾರಿ ಸುಂಕ ಬಿಯರ್ ಮೇಲೆ 185 ಯಿಂದ 195 ಪರ್ಸೆಂಟ್ ಹೆಚ್ಚು ಮಾಡುತ್ತಿರುವ ಕಾರಣ ಮುಂಬರುವ ದಿನಗಳಲ್ಲಿ ಬಿಯರ್ ಮಾರಾಟ ಸಂಖ್ಯೆಯಲ್ಲಿಯೂ ಹೊಡೆತ ಕೊಡುವ ಸಾಧ್ಯತೆಯಿದೆ ಎಂದು ಅಬಕಾರಿ ಇಲಾಖಾ ಅಧಿಕಾರಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:34 am, Wed, 14 February 24

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?