AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ರಾಜ್ಯದ ಮೊದಲ ಜಿಲ್ಲೆ ಯಾವುದು? ಸಿಪ್ ಬೈ ಸಿಪ್ ಮಾಹಿತಿ ಇಲ್ಲಿದೆ

ಇಷ್ಟು ದಿನ ತನ್ನ ಪ್ರಕೃತಿಯ ವೈವಿಧ್ಯತೆ, ಕಾಡು ಪ್ರಾಣಿಗಳು, ಅರಣ್ಯ ಪ್ರದೇಶದಿಂದ ಸದ್ದು ಮಾಡ್ತಾಯಿದ್ದ ಚಾಮರಾಜನಗರ ಜಿಲ್ಲೆ ಈಗ ಅತಿ ಅಗ್ಗದ ಮದ್ಯದ ಮಾರಾಟದಿಂದ ಸುದ್ದಿಯಾಗುತ್ತಿದೆ. ರಾಜ್ಯದಲ್ಲೇ ಅತಿ ಹೆಚ್ಚು ಅಗ್ಗದ ಮದ್ಯ ಸೇವಿಸುವ 2ನೇ ಜಿಲ್ಲೆಯಾಗಿ ಹೊರ ಹೊಮ್ಮಿದ್ದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ರಾಜ್ಯದ ಮೊದಲ ಜಿಲ್ಲೆ ಯಾವುದು? ಸಿಪ್ ಬೈ ಸಿಪ್ ಮಾಹಿತಿ ಇಲ್ಲಿದೆ
ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ಜಿಲ್ಲೆ ಯಾವುದು?
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Feb 14, 2024 | 2:23 PM

Share

ಸದಾ ಕಾಡು ಪ್ರಾಣಿ-ಮಾನವ ಸಂಘರ್ಷದಿಂದ ಸುದ್ದಿಯಲ್ಲಿ ಇರುವ ಗಡಿನಾಡು ಚಾಮರಾಜನಗರ ಜಿಲ್ಲೆ ಈಗ ಮದ್ಯದ ವಿಚಾರದಲ್ಲಿ ಸುದ್ದಿಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಅಗ್ಗದ ಬಿಯರ್ (Beer, Liquor) ಸೇವಿಸುವ 2ನೇ ಜಿಲ್ಲೆ ಎಂಬ ಹಣೆ ಪಟ್ಟಿ ದೊರೆತಿದೆ. ಹಾಗಿದ್ರೆ ಮೊದಲ ಸ್ಥಾನ ಯಾವ ಜಿಲ್ಲೆಗೆ ದೊರೆತಿದೆ ಚಾಮರಾಜನಗರದಲ್ಲೇ (Chamarajanagar) ಯಾಕೆ ಅತಿ ಹೆಚ್ಚು ಅಗ್ಗದ ಮದ್ಯ ಸೇಲ್ (Sale) ಆಗ್ತಾಯಿದೆ ಅಂತೀರಾ ಹಾಗಿದ್ರೆ ಈ ರಿಪೋರ್ಟ್ ನೋಡಿ.

ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಜಿಲ್ಲೆ ಎಂಬ ಖ್ಯಾತಿ ಪಡೆದಿರುವ ಗಡಿ ನಾಡು ಚಾಮರಾಜನಗರ ಜಿಲ್ಲೆ ಈಗ ಅತಿ ಹೆಚ್ಚು ಬಿಯರ್ ಸೇವಿಸುವ ಜಿಲ್ಲೆಗಳ ಪೈಕಿ ರಾಜ್ಯದಲ್ಲೆ ಎರಡನೇ ಸ್ಥಾನ ಪಡೆದು ಕೊಂಡಿದೆ. ಅಷ್ಟೇ ಅಲ್ಲ ಅಗ್ಗದ ಮದ್ಯ ಹೆಚ್ಚು ವ್ಯಾಪಾರ ಆಗುವ ಜಿಲ್ಲೆ ಎಂಬ ಹಣೆ ಪಟ್ಟಿಯನ್ನ ಪಡೆದಿದ್ದು ಅಬಕಾರಿ ಇಲಾಖೆಯ ಸರ್ವೆಯಲ್ಲಿ ಈ ವಿಷಯ ಈಗ ಬೆಳಕಿಗೆ ಬಂದಿದೆ. 2022 ಹಾಗೂ 2023 ನೇ ಸಾವಿನ ಅಂಕಿ ಅಂಶ ನೋಡಿದ್ರೆ ಈ ಬಾರಿ 78,658 ಬಾಕ್ಸ್ ಬಿಯರ್ ಹೆಚ್ಚಾಗಿ ಸೇಲ್ ಆಗಿದೆ. ಶೇ. 30 ಪರ್ಸೆಂಟ್ ಅಷ್ಟು ಏರಿಕೆ ಕಂಡಿದೆ. ರಾಜ್ಯದಲ್ಲೇ ಅತಿ ಹೆಚ್ಚು ಬಿಯರ್ ಸೇವಿಸುವ ಜಿಲ್ಲೆ ತುಮಕೂರು (Tumkur) ಮೊದಲ ಸ್ಥಾನ ಪಡೆದ್ರೆ, ಚಾಮರಾಜನಗರಕ್ಕೆ ರಾಜ್ಯದಲ್ಲೇ ಎರಡನೇ ಸ್ಥಾನ ಲಭಿಸಿದೆ.

ಇದನ್ನೂ ಓದಿ: ಸಿಎಂ ಕ್ಷೇತದಲ್ಲಿ ನಿವೃತ್ತ ಶಿಕ್ಷಕ ಹತ್ಯೆ ಕೇಸ್​, ಮದುವೆಯಾದರೂ ಅದೇ ಕುಟುಂಬದ ಟೆಕ್ಕಿ ಮೇಲೆ ಕ್ರಷ್! ವಾಮಾಚಾರ ಪೋಟೋದಿಂದ ಸಿಕ್ಕಿಬಿದ್ದ ಪೊಲೀಸಪ್ಪ!

ಇನ್ನು ಅತಿ ಹೆಚ್ಚಾಗಿ ಬಿಯರ್ ಸೇಲ್ ಆಗ್ತಾಯಿದೆ ನಿಜ, ಹಾಗಂತ ಯಾವ ಬ್ರಾಂಡ್ ಮಾರುಕಟ್ಟೆ ಬಿಕರಿಯಾಗ್ತಾಯಿದೆ ಅಂತ ನೋಡಿದ್ರೆ ಅಗ್ಗದ ಅಂದ್ರೆ ಕಡಿಮೆ ಬೆಲೆಯ ಬಿಯರ್ ಹಾಗೂ ಚೀಪರ್ ವಿಸ್ಕಿಗಳೇ ಅತಿ ಹೆಚ್ಚಾಗಿ ಮಾರಾಟ ಆಗ್ತಾಯಿದೆ. ಇದಕ್ಕೆ ಕಾರಣವೇನು ಎಂದು ನೋಡುವುದಾದ್ರೆ ಅತಿ ಹೆಚ್ಚು ಶ್ರಮಿಕ ವರ್ಗವಿರುವ ಕಾರಣ ಕಡಿಮೆ ಹಣಕ್ಕೆ ಸಿಗುವ ಮದ್ಯವನ್ನೇ ಚಾಮರಾಜನಗರ ಜಿಲ್ಲೆಯ ಜನತೆ ಆಯ್ಕೆ ಮಾಡಿ ಕೊಳ್ಳುತ್ತಿದ್ದಾರೆ. ಅಬಕಾರಿ ಸುಂಕ ಬಿಯರ್ ಮೇಲೆ 185 ಯಿಂದ 195 ಪರ್ಸೆಂಟ್ ಹೆಚ್ಚು ಮಾಡುತ್ತಿರುವ ಕಾರಣ ಮುಂಬರುವ ದಿನಗಳಲ್ಲಿ ಬಿಯರ್ ಮಾರಾಟ ಸಂಖ್ಯೆಯಲ್ಲಿಯೂ ಹೊಡೆತ ಕೊಡುವ ಸಾಧ್ಯತೆಯಿದೆ ಎಂದು ಅಬಕಾರಿ ಇಲಾಖಾ ಅಧಿಕಾರಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:34 am, Wed, 14 February 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ